ನೀರು ಪೂರೈಕೆಗೆ ಅನುದಾನ ಬಳಸಿ
•14ನೇ ಹಣಕಾಸು ಯೋಜನೆಯ ಅನುದಾನ ಕುಡಿಯುವ ನೀರಿಗಾಗಿ ಮೀಸಲಿಡಿ
Team Udayavani, Jun 26, 2019, 11:00 AM IST
ಹಿರೇಕೆರೂರ: ತಾಪಂ ಸಭಾಭವನದಲ್ಲಿ ಶಾಸಕ ಬಿ.ಸಿ.ಪಾಟೀಲ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮತ್ತು ಅಧ್ಯಕ್ಷರ ಸಭೆ ನಡೆಯಿತು.
ಹಿರೇಕೆರೂರ: ಸರ್ಕಾರದ 14ನೇ ಹಣಕಾಸು ಯೋಜನೆಯಡಿ ಬಿಡುಗಡೆಯಾದ ಹಣ ಸಂಪೂರ್ಣವಾಗಿ ಕುಡಿಯುವ ನೀರಿನ ಸಮಸ್ಯೆಗೆ ಬಳಸಬೇಕು. ಈ ಬಗ್ಗೆ ಸರ್ಕಾರವೇ ಸ್ಪಷ್ಟ ನಿರ್ದೇಶನ ನೀಡಿದ್ದು, ಇದಕ್ಕೆ ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಸಿ.ಪಾಟೀಲ ಎಚ್ಚರಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.
ಸತತ 5 ವರ್ಷಗಳಿಂದ ಬರಗಾಲ ಆವರಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕುಡಿಯುವ ನೀರಿಗಾಗಿ ಈಗಾಗಲೆ 130 ಬೊರವೆಲ್ ಕೊರೆಸಲಾಗಿದೆ. 75 ಖಾಸಗಿ ರೈತರ ಬೊರವೆಲ್ಗಳಿಂದ ಹಾಗೂ ಟ್ಯಾಂಕರಗಳಿಂದ ನೀರು ಪೂರೈಲಾಗುತ್ತಿದ್ದರೂ ನೀರು ಸಾಕಾಗದೇ ಸಮಸ್ಯೆ ಎದುರಾಗುತ್ತಿದ್ದು, ಮಳೆ ಬರುವವರೆಗೆ ಸಾರ್ವಜನಿಕರು ನೀರನ್ನು ಮಿತವ್ಯಯವಾಗಿ ಬಳಸಬೇಕು. ಈ ಬಗ್ಗೆ ಗ್ರಾಪಂ ಅಧ್ಯಕ್ಷರು, ಪಿಡಿಒ ಅವರು ಜನರಿಗೆ ಮನವರಿಕೆ ಮಾಡಬೇಕು. ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆಬಾವಿಗಳ ಬಗ್ಗೆ ಎಂಜಿನಿಯರ್ ಮತ್ತು ಪಿಡಿಒ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ, ನಿಷ್ಪಕ್ಷಪಾತ ವರದಿ ತಯಾರಿಸಿ ನನ್ನ ಗಮನಕ್ಕೆ ತರಬೇಕು ಎಂದರು.
ನಂತರ ಬೋರವೆಲ್ ವಾಹನದ ಮಾಲೀಕರಿಗೆ ಹಣ ಸಂದಾಯ ಮಾಡಬೇಕು. ಇದರಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. 14 ಹಣಕಾಸು ಯೋಜನೆಯ ರೂಪುರೇಷೆ ನಿಯಮಗಳನ್ನು ಬದಲಿಸಿದ್ದು, ಈ ಯೋಜನೆಯ ಹಣ ಮೊದಲು ಚೆಕ್ ನೀಡಲಾಗುತ್ತಿತ್ತು. ಈಗ ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಬಗ್ಗೆ ಪಿಡಿಒ ಅವರು ಗ್ರಾಪಂ ಅಧ್ಯಕ್ಷರ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಸಭೆಯಲ್ಲಿ ತಾಪಂ ಇಒ ಸಂತೋಷಕುಮಾರ ತಳಕಲ್, ರಟ್ಟೀಹಳ್ಳಿ, ಹಿರೇಕೆರೂರು ತಾಲೂಕಿನ ಎಲ್ಲ ಗ್ರಾಪಂ ಅಧ್ಯಕ್ಷರು, ಪಿಡಿಒಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?