ನದಿ ನೀರು ನಿರ್ವಹಣೆಗೆ ಸಮಿತಿ ರಚನೆ ಸಲಹೆ

•ಕರ್ನಾಟಕ-ಮಹಾರಾಷ್ಟ್ರಗಳ ಜನಪ್ರತಿನಿಧಿಗಳು-ರೈತರು-ಸದಸ್ಯರು

Team Udayavani, Jun 26, 2019, 2:30 PM IST

bg-tdy-04…

ಳಗಾವಿ: ಮಹಾರಾಷ್ಟ್ರದ ರಾಜಾಪುರದಿಂದ ಬಿಡುಗಡೆಯಾದ ನೀರು ಅಥಣಿ ತಾಲೂಕಿನ ದರೂರು ಸೇತುವೆ ತಲುಪಿದ್ದು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದರು.

ಬೆಳಗಾವಿ: ಕೃಷ್ಣಾ ತೀರದ ರೈತರು ಮತ್ತು ಜನರ ಕುಡಿಯುವ ನೀರಿನ ಸಂಕಷ್ಟಗಳನ್ನು ಶಾಶ್ವತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕರ್ನಾಟಕ-ಮಹಾರಾಷ್ಟ್ರ ನದಿ ನೀರು ನಿರ್ವಹಣಾ ಮೇಲ್ವಿಚಾರಣೆ ಸಮಿತಿಯೊಂದನ್ನು ಮಠಾಧೀಶರ ನೇತೃತ್ವದಲ್ಲಿ ರೈತರೇ ರಚಿಸಿಕೊಳ್ಳುವುದು ಸೂಕ್ತ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದರು.

ಕೆಲ ದಿನಗಳ ಹಿಂದೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜಿನಿಂದ ಬಿಡುಗಡೆಯಾದ ನೀರು ಅಥಣಿ ತಾಲೂಕಿನ ದರೂರು ಸೇತುವೆ ತಲುಪಿದ ಹಿನ್ನೆಲೆಯಲ್ಲಿ ಮಂಗಳವಾರ ಕೃಷ್ಣಾ ನದಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೊಲಾØಪುರ ಜಿಲ್ಲೆಯ. ಶಿರೋಳ ಶಾಸಕ ಉಲಾØಸರಾವ ಪಾಟೀಲರು ಸ್ವತಃ ರಾಜಾಪುರ ಬ್ಯಾರೇಜ್‌ ಗೇಟನ್ನು ತೆರೆದು ಒಮ್ಮೆ ನೀರು ಬಿಡಿಸಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಕೃಷ್ಣಾ ತೀರದ ಜನಪ್ರತಿನಿಧಿಗಳು ಮತ್ತು ರೈತರನ್ನು ಒಳಗೊಂಡ ಸಮಿತಿಯೊಂದನ್ನು ಮಠಾಧೀಶರ ಮಾರ್ಗದರ್ಶನದಲ್ಲಿ ರಚಿಸಿಕೊಂಡರೆ ಬೇಸಿಗೆಯಲ್ಲಿ ನದಿಗಳ ನೀರು ನಿರ್ವಹಣಾ ಮೇಲ್ವಿಚಾರಣೆ ಕೈಗೊಳ್ಳಬಹುದಾಗಿದೆ ಎಂದು ಅವರು ಸಲಹೆ ನೀಡಿದರು.

ಕಳೆದ ಮೂರು ತಿಂಗಳಿಂದ ಚಿಕ್ಕೋಡಿ,ಅಥಣಿ ಮತ್ತು ರಾಯಬಾಗ ತಾಲೂಕುಗಳ ರೈತರು ಮತ್ತು ಸಾರ್ವಜನಿಕರು ಕುಡಿಯುವ ನೀರಿನ ತೀವ್ರ ಅಭಾವದಿಂದ ಸಂಕಷ್ಟಕ್ಕೆ ಒಳಗಾದರೂ ರಾಜ್ಯ ಸರಕಾರವು ಕೊಯ್ನಾ ನೀರು ಬಿಡುಗಡೆಗೆ ಯಾವುದೇ ಗಂಭೀರ ಪ್ರಯತ್ನ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗ ಕೊಲಾØಪುರ ಸುತ್ತಮುತ್ತಲೂ ಭಾರೀ ಮಳೆ ಸುರಿದಿದ್ದರಿಂದ ರಾಜಾಪುರ ಬ್ಯಾರೇಜಿನಿಂದ ಅನಿವಾರ್ಯವಾಗಿ ಬಿಟ್ಟ ನೀರು 60 ಕಿಮೀ ಸಾಗಿ ದರೂರು ಸೇತುವೆ ದಾಟಿ ಹೋಗುತ್ತಿದೆ. ಆದರೆ ನೀರಿನ ಸಮಸ್ಯೆ ಮುಂದಿನ ವರ್ಷವೂ ಪುನರಾವರ್ತನೆ ಯಾಗಬಾರದು. ಸರಕಾರ ಈಗಿನಿಂದಲೇ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು ಎಂದರು.

ನದಿ ಇಂಗಳಗಾವದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಕೃಷ್ಣಾ ನದಿ ನೀರು ದರೂರು ಸೇತುವೆ ತಲುಪಿದ್ದು ಜನರು ಇದನ್ನು ಹಾಲಿನಂತೆಯೇ ಮಿತವಾಗಿ ಬಳಸಬೇಕು ಎಂದರು.

ಭಾರತೀಯ ಕಿಸಾನ್‌ ಸಂಘದ ಭರಮು ನಾಯಕ, ಅಶೋಕ ದಾನಗೌಡರ, ಸಿದ್ಧಾರೂಢ ಮಠಪತಿ, ಲಕಡಿ,ದುಂಡಪ್ಪ ಅವಟಿ, ಬಸವರಾಜ ಖೇಮಲಾಪುರ, ಶಿವಪ್ಪ ಶಮರಂತ, ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನ ಬಣದ ಜಿಲ್ಲಾಧ್ಯಕ್ಷೆ ಯಶೋಧ ಬಿರಡಿ, ಸತ್ತೆವ್ವ ತಾಸಿಲ್ದಾರ, ವಿರೇಂದ್ರ ಗೋಬರಿ, ಶಿವಾನಂದ ಸದಲಗಾ, ದರ್ಶನ್‌ ಶೆಟ್ಟಿ, ಅಭಿನವ ಉಪಾಧ್ಯೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.