ಎಸ್ಸಿ-ಎಸ್ಟಿ ಅನುದಾನ ಸಮರ್ಪಕ ಬಳಕೆಗೆ ಸಲಹೆ
•ರೋಣದಲ್ಲಿ ದೌರ್ಜನ್ಯ ತಡೆ ಸಮಿತಿ ಸಭೆ•ಅನುದಾನ ದುರ್ಬಳಕೆ ಆರೋಪ •ಸೂಕ್ತ ಕ್ರಮಕ್ಕೆ ಆಗ್ರಹ
Team Udayavani, Jun 26, 2019, 2:35 PM IST
ರೋಣ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ನೂತನ ನಾಮನಿರ್ದೇಶಿತ ಸದಸ್ಯ ಶಂಕ್ರಪ್ಪ ಕಳಿಗಣ್ಣವರ ಮಾತನಾಡಿದರು.
ರೋಣ: ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ಗಳಲ್ಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಅನುದಾನವು ಸಮರ್ಪಕವಾಗಿ ಸದ್ಬಳಕೆಯಾಗಬೇಕು ಎಂದು ದೌರ್ಜನ್ಯ ತಡೆ ಸಮಿತಿ ನೂತನ ನಾಮನಿರ್ದೇಶಿತ ಸದಸ್ಯ ಶಂಕ್ರಪ್ಪ ಕಳಿಗಣ್ಣವರ ಹೇಳಿದರು.
ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಜರುಗಿದ ದೌರ್ಜನ್ಯ ತಡೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಪಪಂ ಹಾಗೂ ಗ್ರಾಪಂಗಳಲ್ಲಿ ಎಸ್ಸಿ, ಎಸ್ಟಿ ಕಾಲೋನಿಗಳಿಗೆ ಮೀಸಲಿರುವ ಅನುದಾನ ಬೇರೆ ಕಡೆಗಳಲ್ಲಿ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಅದನ್ನು ತಡೆಗಟ್ಟಲು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಅಲ್ಲದೆ ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿರುವ ಅನುದಾನವು ಸಮರ್ಪಕವಾಗಿ ಬಳಕೆಯಾಗಬೇಕು. ಎಸ್ಸಿ-ಎಸ್ಟಿ ಮುದಾಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ನಾಮನಿರ್ದೇಶಿತ ಸದಸ್ಯ ದುರಗಪ್ಪ ಸಂದಿಮನಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ದೌರ್ಜನ್ಯ ತಡೆ ಕುರಿತು ಜಾಗೃತಿ ಬಗ್ಗೆ ನಾಮಫಲಕ ಹಾಕಬೇಕು ಎಂದರು.
ತಹಶೀಲ್ದಾರ್ ಶರಣಮ್ಮ ಕಾರಿ, ತಾಪಂ ಇಒ ಎಂ.ವಿ. ಚಳಗೇರಿ, ಪಿಎಸ್ಐ ಎಲ್.ಕೆ. ಜೂಲಕಟ್ಟಿ, ಬಿಇಒ ಎನ್. ನಂಜುಂಡಯ್ಯ, ರೋಣ ಪುರಸಭೆ ವ್ಯವಸ್ಥಾಪಕ ಪರಶುರಾಮ ಶೇರಖಾನ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು