ಹೆದ್ದಾರಿ ಬದಿಯಲ್ಲಿಯೇ ಕಸ ವಿಲೇವಾರಿ
Team Udayavani, Jun 27, 2019, 3:00 AM IST
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಶ್ರೀರಾಮದೇವರ ಗುಡ್ಡ ಸಮೀಪ ಪುರಸಭೆಯ ಕಸ ವಿಲೇವಾರಿ ಘಟಕಕ್ಕೆ ಸುರಿಯಬೇಕಾದ ಕಸವನ್ನು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿಯೇ ವಿಲೇವಾರಿ ಮಾಡುತ್ತಿದ್ದಾರೆ. ಈ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ.
ಪಟ್ಟಣದಿಂದ ಕೇರಳಕ್ಕೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರ ಬದಿಯಲ್ಲಿರುವ ಶ್ರೀರಾಮದೇವರ ಗುಡ್ಡದ ಪಕ್ಕದಲ್ಲಿರುವ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕವಿದೆ. ಪಟ್ಟಣದ ವಿವಿಧ ಬಡಾವಣೆಯಿಂದ ಸಂಗ್ರಹಿಸಿದ ಕಸವನ್ನು ಜೋಪಾನವಾಗಿ ಘಟಕದಲ್ಲಿ ಸುರಿಯಬೇಕು. ಆದರೆ, ಹೆದ್ದಾರಿಯ ಪಕ್ಕದಲ್ಲೇ ಸುರಿಯುತ್ತಿರುವುದರಿಂದ ರಸ್ತೆಯ ಪಕ್ಕದಲ್ಲಿ ಸಂಚಾರ ಮಾಡುವ ಸಾರ್ವಜನಿಕರಿಗೆ ಮತ್ತು ಸುತ್ತಮುತ್ತಲಿನ ಜನರಿಗೆ ದುರ್ವಾಸನೆ ಬೀರುತ್ತಿದೆ.
ನಿತ್ಯ ರಸ್ತೆ ಬದಿಯಲ್ಲಿಯೇ ವಿಲೇವಾರಿ: ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕ ಕಸದಿಂದ ತುಂಬಿ ತುಳುಕುತ್ತಿದೆ. ಹದ್ದು, ಕಾಗೆಗಳು, ನಾಯಿಗಳ ಬೀಡಾಗಿದೆ. ಇಲ್ಲಿನ ಕಸವನ್ನು ನಾಯಿಗಳು ರಸ್ತೆಗೆ ಎಳೆದಾಡುತ್ತಿದ್ದು, ಸುತ್ತಲೂ ಗಬ್ಬುನಾರುತ್ತಿದೆ. ಈ ಗಬ್ಬುವಾಸನೆಯಿಂದ ಕಸವನ್ನು ವಾಹನಗಳಲ್ಲಿ ತಂದ ಪುರಸಭೆ ವಾಹನ ಚಾಲಕರು ಸಹ ಒಳಗೆ ಹೋಗಲಾಗದ ಪ್ರತಿದಿನವೂ ಪಟ್ಟಣದಲ್ಲಿ ಸಂಗ್ರಹವಾದ ಕಸವನ್ನು ರಸ್ತೆಯ ಬದಿಯಲ್ಲಿಯೇ ಸುರಿಯುತ್ತಿದ್ದಾರೆ.
ಸಾಂಕ್ರಾಮಿಕ ರೋಗದ ಭೀತಿ: ಪಟ್ಟಣದ ಕೋಳಿ ಹಾಗೂ ಮಾಂಸದ ಅಂಗಡಿಗಳು, ಕ್ಲಿನಿಕಲ್ ತ್ಯಾಜ್ಯಗಳನ್ನೂ ಸಹ ರಸ್ತೆಯ ಬದಿಯಲ್ಲಿಯೇ ಸುರಿಯುತ್ತಿರುವುದರಿಂದ ಅನೈರ್ಮಲ್ಯವುಂಟಾಗಿದೆ. ಪರಿಣಾಮ ರಸ್ತೆಯಲ್ಲಿ ಸಂಚಾರ ಮಾಡುವ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಪ್ರಯಾಣಿಕರು ದುರ್ವಾಸನೆ ಸಹಿಸಲಾಗದಂತಾಗಿದೆ. ಇತ್ತೀಚಗೆ ಮಳೆ ಬೀಳುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಕಸ ವಿಲೇವಾರಿ ಘಟಕದ ಸಮೀಪದಲ್ಲಿಯೇ ಶ್ರೀರಾಮದೇವರ ಗುಡ್ಡ, ಗವಿಸಿದ್ದೇಶ್ವರ ದೇವಸಾªನ, ಶ್ರೀರಾಘವೇಂದ್ರ ಸ್ವಾಮಿ ಬೃಂದಾವನ ಮಠ, ಅಗ್ನಿಶಾಮಕ ದಳದ ಕಚೇರಿ ಹಾಗೂ ಸಿಬ್ಬಂದಿ ವಸತಿ ಗೃಹಗಳಿವೆ. ದೇವಸ್ಥಾನಗಳಿಗೆ ತೆರಳುವ ಭಕ್ತರು ಈ ದುರ್ವಾಸನೆಯನ್ನು ಸಹಿಸಿಕೊಂಡು ಹೋಗಬೇಕಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ.
-ಜಿ.ಎಸ್.ಗಣೇಶ್ಪ್ರಸಾದ್, ಗುಂಡ್ಲುಪೇಟೆ ನಿವಾಸಿ
ಮಡಹಳ್ಳಿ ಸಮೀಪದಲ್ಲಿ ನೂತನ ಘಟಕವನ್ನು ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಆದರೆ, ಸ್ಥಳೀಯರ ವಿರೋಧದಿಂದ ಪರ್ಯಾಯ ಸ್ಥಳ ಗುರುತಿಸಲಾಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುತ್ತೇವೆ.
-ಎ.ರಮೇಶ್, ಮುಖ್ಯಾಧಿಕಾರಿ, ಪುರಸಭೆ
* ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ