ಬೇಲಾಡಿ: ಕಿರು ಸೇತುವೆ ವಿಸ್ತರಣೆ ಅಗತ್ಯ
Team Udayavani, Jun 27, 2019, 5:23 AM IST
ಬೆಳ್ಮಣ್: ಕಾರ್ಕಳ ತಾಲೂಕಿನ ಬೋಳದಿಂದ ಕಾಂತಾವರ ಬೇಲಾಡಿಗೆ ಸಂಪರ್ಕ ಬೆಸೆಯುವ ಕಿರು ಸೇತುವೆ ಬಹಳ ಇಕ್ಕಟ್ಟಾಗಿದೆ. ಇದರಿಂದ ಇಲ್ಲಿ ವಾಹನಗಳ ಸಂಚಾರ ಕಷ್ಟಕರವಾಗಿದೆ.
ಸರಣಿ ಅಪಘಾತ
ಕಾಂತಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಲಾಡಿಯಲ್ಲಿ ಕಳೆದ ಹಲವು ವರ್ಷಗಳ ಹಿಂದೆ ನಿರ್ಮಿಸಲಾದ ಸೇತುವೆ ಇಕ್ಕಟ್ಟಾಗಿರುವುದರಿಂದ ಎರಡು ವಾಹನಗಳು ಏಕಕಾಲಕ್ಕೆ ಸಂಚರಿಸಲು ಸಾಧ್ಯವಿಲ್ಲ. ಸೇತುವೆಯ ಎರಡೂ ಬದಿಗಳಲ್ಲಿ ತಿರುವು ಹಾಗೂ ತಗ್ಗು ಪ್ರದೇಶವಿರುವುದರಿಂದ ವಾಹನಗಳು ವೇಗವಾಗಿ ಸಂಚರಿಸುವುದರಿಂದ ಅಪಘಾತಕ್ಕೊಳಗಾಗುತ್ತವೆ.
ಮೂಡುಬಿದಿರೆ ಬಲು ಹತ್ತಿರ
ಮಂಜರಪಲ್ಕೆಯಿಂದ ಬೋಳ ಮಾರ್ಗವಾಗಿ ಕಾಂತಾವರ, ಬೆಳುವಾಯಿ ಹಾಗೂ ಮೂಡುಬಿದಿರೆ ಮುಖ್ಯ ಪೇಟೆ ಪ್ರದೇಶವನ್ನು ಸೇರಲು ಹತ್ತಿರದ ರಸ್ತೆಯಾದ ಪರಿಣಾಮ ಬಹುತೇಕ ವಾಹನಗಳು ಇದೇ ರಸ್ತೆಯನ್ನು ಅವಲಂಬಿಸಿವೆ. ಎಲ್ಲ ಕಡೆ ರಸ್ತೆಗಳು ಅಭಿವೃದ್ಧಿಯಾಗಿದ್ದರೂ ಬೇಲಾಡಿಯ ಈ ಕಿರು ಸೇತುವೆ ಮತ್ತು ರಸ್ತೆ ಅಭಿವೃದ್ಧಿಗೆ ಕಾಲ ಕೂಡಿ ಬಂದಿಲ್ಲ. ಈ ಭಾಗದ ಸಾಕಷ್ಟು ಗ್ರಾಮಸ್ಥರು ಪ್ರತಿ ಬಾರಿಯೂ ಸ್ಥಳೀಯಾಡಳಿತಕ್ಕೆ, ಶಾಸಕರಿಗೆ, ಜನಪ್ರತಿನಿಧಿಗಳಿಗೆ ಮನವಿಯನ್ನು ಮಾಡಿದ್ದು ಇಲ್ಲಿಯ ವರೆಗೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಈ ಕಿರು ಸೇತುವೆಯ ಅಭಿವೃದ್ಧಿ ಕೂಡಲೇ ಆಗಬೇಕಾಗಿದೆ ಎನ್ನುವುದು ಕಾಂತಾವರ ಹಾಗೂ ಬೇಲಾಡಿ ಗ್ರಾಮಸ್ಥರ ಹಲವು ವರ್ಷಗಳಲ್ಲಿ ಬೇಡಿಕೆಯಾಗಿದೆ.
ಬಿರುಕು ಬಿಟ್ಟಿದೆ
ಕಿರು ಸೇತುವೆ ಅತ್ಯಂತ ಹಳೆಯ ಸೇತುವೆಯಾಗಿದ್ದು ತಳ ಭಾಗದ ಕಲ್ಲುಗಳು ಮಳೆಯ ನೀರಿನಲ್ಲಿ ಜಾರಿ ಹೋಗಿವೆ. ಇದರಿಂದ ಸೇತುವೆ ಬಿರುಕುಬಿಟ್ಟಿದೆ. ಸೇತುವೆಯ ಪಿಲ್ಲರುಗಳು ಕೂಡ ಅಲ್ಲಲ್ಲಿ ಬಿರುಕುಬಿಟ್ಟಿವೆ. ಸೇತುವೆ ತಡೆಗೋಡೆಯೂ ಒಂದು ಭಾಗದಲ್ಲಿ ಮುರಿದು ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು