ಒಂದೇ ಬಾರಿಗೆ 6 ಶಿಕ್ಷಕರ ವರ್ಗ: ಶಾಸಕರಿಗೆ ದೂರು

ಅತಿ ಹೆಚ್ಚು ಮಕ್ಕಳ ದಾಖಲಾತಿಯ ಕೊಂಬೆಟ್ಟು ಸರಕಾರಿ ಶಾಲೆಗೆ ಹೊಡೆತ

Team Udayavani, Jun 27, 2019, 5:14 AM IST

11

ನಗರ: ಸರಕಾರಿ ಶಾಲೆಗೆ ಮಕ್ಕಳ ಸೇರ್ಪಡೆಯನ್ನು ಹೆಚ್ಚಿಸುವ ‘ಕಲನ’ದಂತಹ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಯಶಸ್ಸು ಕಂಡ ಶತಮಾನದ ಇತಿಹಾಸವನ್ನು ಹೊಂದಿರುವ ಪುತ್ತೂರಿನ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಗೆ ಒಂದೇ ಬಾರಿಗೆ 6 ಶಿಕ್ಷಕರ ವರ್ಗಾವಣೆಯ ಸಹಿತ ಈ ಬಾರಿ 9 ಶಿಕ್ಷಕರು ಶಾಲೆಯಿಂದ ವಿಮುಖರಾಗುವ ಹೊಡೆತ ಬಿದ್ದಿದೆ.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಶಾಲೆಯಲ್ಲಿ 24 ಮಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಮೂವರು ಶಿಕ್ಷಕರು ಎಪ್ರಿಲ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದಾರೆ. ಉಳಿದ 21 ಶಿಕ್ಷಕರ ಪೈಕಿ ಒಬ್ಬರು ದೈ.ಶಿ. ಶಿಕ್ಷಕರು, ಇನ್ನೊಬ್ಬರು ಚಿತ್ರಕಲಾ ಶಿಕ್ಷಕರು. ವಿಷಯ ಬೋಧನೆಗೆ 19 ಶಿಕ್ಷಕರಿದ್ದರು. ಈಗ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ಸರಕಾರದ ಮಾನದಂಡದ ಪ್ರಕಾರ 6 ಮಂದಿಗೆ ವರ್ಗಾವಣೆಯಾಗಿದ್ದು, ಮಂಗಳೂರಿನಲ್ಲಿ ನಡೆದ ಕೌನ್ಸೆಲಿಂಗ್‌ನಲ್ಲಿ ಇವರೆಲ್ಲರೂ ಬೇರೆ ಶಾಲೆಗಳಿಗೆ ವರ್ಗಾವಣೆ ಆದೇಶ ಪಡೆದುಕೊಂಡಿದ್ದಾರೆ. ಆ ಮೂಲಕ ತಾಲೂಕಿನಲ್ಲೇ ಅತಿ ಹೆಚ್ಚು 654 ವಿದ್ಯಾರ್ಥಿಗಳನ್ನು ಹೊಂದಿರುವ ಸರಕಾರಿ ಶಾಲೆಗೆ ತೀವ್ರ ಆಘಾತ ಎದುರಾಗಿದೆ. ಈ ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲು ಅಧ್ಯಾಪಕರೆಲ್ಲರೂ ಸೇರಿಕೊಂಡು ಮಾಡಿದ ಕಲನ ವಿಶೇಷ ಮಕ್ಕಳ ಸೇರ್ಪಡೆ ಅಭಿಯಾನದ ಮೂಲಕ 325 ಮಕ್ಕಳು ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡಿದ್ದರು.

15 ಶಿಕ್ಷಕರು ಮಾತ್ರ
ಪ್ರಸ್ತುತ ಶಾಲೆಯ ಶಿಕ್ಷಕರಾದ ಕವಿತಾ ಡಿ.ಎಂ., ಮಾಲಿನಿ ಕೆ.ಎನ್‌., ಪೂರ್ಣಿಮಾ ನಾಯಕ್‌, ವಿನುತಾ, ವಸಂತಿ ಕುಮಾರಿ ಮತ್ತು ಉಮೇರ್‌ ತಬಸ್ಸಮ್‌ ವರ್ಗಾವಣೆಗೊಂಡಿದ್ದಾರೆ. ಶಾಲೆಯಲ್ಲಿ 15 ಶಿಕ್ಷಕರು ಮಾತ್ರ ಉಳಿದುಕೊಂಡಿರುವುದು ಅಷ್ಟೊಂದು ಮಕ್ಕಳಿಗೆ ಪಾಠ ಮಾಡಲು ಹೊರೆಯಾಗಬಹುದು ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

325 ಹೊಸ ದಾಖಲಾತಿ
ಸರಕಾರಿ ಶಾಲೆಯಲ್ಲಿ ಈ ವರ್ಷ ನಡೆಸಿದ ವಿಶೇಷ ದಾಖಲಾತಿ ಪ್ರಚಾ ರಾಂದೋಲನದ ಪರಿಣಾಮವಾಗಿ 325 ಹೊಸ ವಿದ್ಯಾರ್ಥಿಗಳು ದಾಖಲಾಗಿದ್ದರು. ಹೀಗಾಗಿ ಈ ಶಾಲೆಗೆ ಶಿಕ್ಷಕರ ಪ್ರಮಾಣದಲ್ಲಿ ವಿಶೇಷ ಆದ್ಯತೆ ನೀಡಬೇಕಿತ್ತು.

ಒಮ್ಮೆಲೇ 6 ಶಿಕ್ಷಕರ ವರ್ಗ ಮಾಡಿರುವುದು ವಿಷಾದದ ಸಂಗತಿ. ಡಿಡಿಪಿಐ ಜತೆ ಮಾತನಾಡಿದ ಸಂದರ್ಭ ಸರಕಾರದ ಸುತ್ತೋಲೆಯಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ ಎಂದು ಎಸ್‌ಡಿಎಂಸಿ ಕಾರ್ಯಾಧ್ಯಕ್ಷ, ನಗರಸಭೆ ಸದಸ್ಯರೂ ಆದ ಪಿ.ಜಿ. ಜಗನ್ನಿವಾಸ ರಾವ್‌ ಹೇಳಿದ್ದಾರೆ.

ಶಾಸಕರಿಗೆ ದೂರು
ಶಾಲೆಯಿಂದ 6 ಶಿಕ್ಷಕರನ್ನು ಒಂದೇ ಬಾರಿಗೆ ವರ್ಗಾವಣೆ ಮಾಡಿರುವ ಕುರಿತು ಎಸ್‌ಡಿಎಂಸಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಹೆತ್ತವರು ಸೇರಿಕೊಂಡು ಶಾಲಾ ಅಧ್ಯಕ್ಷರಾಗಿರುವ ಶಾಸಕ ಸಂಜೀವ ಮಠಂದೂರು ಅವರಿಗೆ ದೂರಿನ ಮನವಿ ಸಲ್ಲಿಸಿದ್ದಾರೆ. ಶಾಲೆಯ ಪ್ರಗತಿಯ ದೃಷ್ಟಿಯಿಂದ ಶಿಕ್ಷಕರನ್ನು ಉಳಿಸಿಕೊಳ್ಳುವಂತೆ ವಿನಂತಿ ಮಾಡಿದ್ದಾರೆ. ಕಾರ್ಯಾಧ್ಯಕ್ಷ ಪಿ.ಜಿ. ಜಗನ್ನಿವಾಸ್‌ ರಾವ್‌, ಪೋಷಕ ಸುರೇಶ್‌ ಪಡಂಬೈಲು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಪಾಲ್ಗೊಂಡಿದ್ದಾರೆ. ಶಾಸಕರು ಗುರುವಾರ ಬೆಂಗಳೂರಿನಲ್ಲಿ ಇಲಾಖಾಧಿಕಾರಿಗಳ ಜತೆ ಮಾತನಾಡುವ ಭರವಸೆ ನೀಡಿದ್ದಾರೆ.

ತತ್‌ಕ್ಷಣ ಹುದ್ದೆ ಭರ್ತಿ

ಸರಕಾರದ ವರ್ಗಾವಣೆ ಮಾನದಂಡದಂತೆ ಹೆಚ್ಚುವರಿ ಶಿಕ್ಷಕರನ್ನು ಆರಿಸಲಾಗಿದೆ. ಎಲ್ಲವೂ ಆನ್‌ಲೈನ್‌ ಮೂಲಕವೇ ನಡೆಯುತ್ತದೆ. ಇನ್ನು ಮುಂದಿನ ಹಂತದಲ್ಲಿ ಕಡ್ಡಾಯ ವರ್ಗಾವಣೆ ಬರಲಿದೆ. 10 ವರ್ಷಕ್ಕಿಂತ ಹೆಚ್ಚು ಒಂದೇ ಕಡೆ ಕೆಲಸ ಮಾಡುತ್ತಿರುವವರು ವರ್ಗವಾಗಲಿದ್ದಾರೆ. ಆದರೆ ಈ ಹುದ್ದೆಗಳಿಗೆ ತತ್‌ಕ್ಷಣ ಭರ್ತಿ ಮಾಡಲಾಗುತ್ತದೆ
– ಸುಕನ್ಯಾ ಡಿ.ಎನ್‌.ಕ್ಷೇತ್ರ ಶಿಕ್ಷಣಾಧಿಕಾರಿ

ಸರಕಾರವೇ ಹಾಳು ಮಾಡುತ್ತಿದೆ

ಕಡಿಮೆ ಮಕ್ಕಳಿರುವ ಮತ್ತು ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಒಂದೇ ಮಾನದಂಡ ಅನುಸರಿಸಿರುವುದು ಸರಿಯಲ್ಲ. ಐತಿಹಾಸಿಕ ಹಿನ್ನಲೆಯುಳ್ಳ ಸರಕಾರಿ ಶಾಲೆಯನ್ನು ಸರಕಾರವೇ ಹಾಳು ಮಾಡುತ್ತಿದೆ.
– ಸುರೇಶ್‌ವಿದ್ಯಾರ್ಥಿಗಳ ಹೆತ್ತವರು

ನಿವೃತ್ತಿ ಪರಿಗಣಿಸಿಲ್ಲ
ಕೊಂಬೆಟ್ಟು ಶಾಲೆಯ ಹೆಚ್ಚುವರಿ ಶಿಕ್ಷಕರ ಪಟ್ಟಿ ತಯಾರಿಸುವ ಸಂದರ್ಭ ಹಿಂದಿನ ವರ್ಷದ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ ಲೆಕ್ಕ ಹಾಕಲಾಗಿದೆ. ನಿವೃತ್ತರ ಸಂಖ್ಯೆಯನ್ನು ಗಮನಿಸಿಕೊಂಡಿಲ್ಲ ಎಂದು ಕಾಣುತ್ತದೆ.
– ಪಿ.ಜಿ. ಜಗನ್ನಿವಾಸ ರಾವ್‌ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

BJP Symbol

Pitroda’s remarks; ದೆಹಲಿ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

1—–sd-sa-dsa

Pain; ‘ಅಸಹನೀಯ ಬೆನ್ನು ನೋವು’:ಸೊಂಟದ ಬೆಲ್ಟ್ ತೋರಿಸಿದ ತೇಜಸ್ವಿ ಯಾದವ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ!

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಬೆಳ್ತಂಗಡಿಯಲ್ಲಿ ಬಸ್‌-ಟ್ಯಾಂಕರ್‌ ಅಪಘಾತ: ತಪ್ಪಿದ ಭಾರೀ ಅನಾಹುತ, 20 ಮಂದಿಗೆ ಗಾಯ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–wewewe

Bengaluru; ಉದ್ಯೋಗ ಅರಸಿ ಬಂದಿದ್ದ ಕಲಬುರಗಿಯ ಯುವಕ ಆತ್ಮಹತ್ಯೆ

4

ಬೆಳ್ತಂಗಡಿಯಲ್ಲಿ ಬಸ್‌-ಟ್ಯಾಂಕರ್‌ ಅಪಘಾತ: ತಪ್ಪಿದ ಭಾರೀ ಅನಾಹುತ, 20 ಮಂದಿಗೆ ಗಾಯ

Explosion At Fireworks Factory Near Sivakasi

Sivakasi ಪಟಾಕಿ ಘಟಕದಲ್ಲಿ ಸ್ಪೋಟ; ಐವರು ಮಹಿಳೆಯರು ಸೇರಿ 8 ಮಂದಿ ಸಾವು

1-wewqewq

LS poll ಅಭಿವೃದ್ಧಿಗಾಗಿ ಮತ ಮತ್ತು ‘ಜಿಹಾದ್‌ಗೆ ಮತ ಹಾಕಿ’ ನಡುವಿನ ಸ್ಪರ್ಧೆ: ಶಾ

3

ಇಲ್ಲಿದೆ ʼKhatron Ke Khiladi 14ʼ ನಲ್ಲಿ ಭಾಗಿಯಾಗುವ ಸ್ಪರ್ಧಿಗಳ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.