ಒಂದು ವಾರದೊಳಗೆ ಸಂಸದರ ಕಚೇರಿ ಆರಂಭ: ಬಿ.ವೈ.ರಾಘವೇಂದ್ರ


Team Udayavani, Jun 27, 2019, 5:15 AM IST

by-raghavendra

ಬೈಂದೂರು: ಕೇಂದ್ರ ಸರಕಾರ ರೈತರಿಗೆ ಹಾಗೂ ಜನಸಾಮಾನ್ಯರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕೆಲವು ಯೋಜನೆಗಳಿಗೆ ಅಧಿಕಾರಿಗಳ ಸಮರ್ಪಕ ಸ್ಪಂದನೆಯಿಲ್ಲದೆ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸರಕಾರ ಪ್ರತಿಯೊಂದು ಕ್ರಿಯಾ ಯೋಜನೆಗಳು ಸಮರ್ಪಕವಾಗಿ ಜನರಿಗೆ ದೊರೆಯಬೇಕು. ಸಬೂಬುಗಳನ್ನು ಹೇಳಿಕೊಂಡು ಕೆಲಸದ ಗತಿಯನ್ನು ಕುಂಠಿತಗೊಳಿಸದಿರಿ ಎಂದು ಅಧಿಕಾರಿ ಗಳಿಗೆ ಕಿವಿಮಾತು ಹೇಳಿದರು.

ಕುಡಿಯುವ ನೀರಿನ ಅಭಾವ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕಾಡುತ್ತಿದೆ. ಶಾಶ್ವತ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಶೀಘ್ರ ಕಾಮಗಾರಿ ನಡೆಸಲು ಅಧಿಕಾರಿಗಳು ಪ್ರಯತ್ನಿಸಿದಾಗ ಮುಂದಿನ ದಿನಗಳಲ್ಲಿ ಅನುಕೂಲವಾಗುತ್ತದೆ ಎಂದರು.

ಇದಕ್ಕೆ ಉತ್ತರಿಸಿದ ಎಂಜಿನಿಯರ್‌ ರಾಜ್‌ಕುಮಾರ್‌ ಈಗಾಗಲೇ 9 ಕಡೆ ಬಹುಗ್ರಾಮ ಯೋಜನೆಯ ಪ್ರಸ್ತಾವ‌ ನೀಡಲಾಗಿದೆ. ಪ್ರಸ್ತುತ ಈ ಯೋಜನೆ ಜಲಧಾರೆ ಯೋಜನೆ ಎಂದು ಹೆಸರು ಬದಲಾಗಿದೆ. ಬೈಂದೂರು ಕ್ಷೇತ್ರದಲ್ಲಿ ನಾಡ ಗ್ರಾಮದಲ್ಲಿ ಮಾತ್ರ ಮಂಜೂರಾಗಿದೆ ಎಂದರು.

ತಹಶೀಲ್ದಾರ್‌ ಬಿ.ಪಿ ಪೂಜಾರ್‌ ಕಂದಾಯ ಮಾಹಿತಿ ನೀಡಿ 94/ಸಿ ಒಟ್ಟು 4,000 ಅರ್ಜಿಗಳು ಬಂದಿದ್ದು 1,200 ಅರ್ಜಿ ಬಾಕಿ ಇವೆ.

ತಾಲೂಕಿನಲ್ಲಿ ಒಟ್ಟು 18 ಗ್ರಾಮಗಳಲ್ಲಿ ನಂದನವನ ಮತ್ತು ಬಡಾಕೆರೆಯಲ್ಲಿ ಸ್ಮಶಾನಗಳಿಗೆ ಜಾಗ ನಿಗದಿಯಾಗಿಲ್ಲ. ಉಳಿದ ಕಡೆ ಸ್ಥಳ ಮೀಸಲಿರಿಸಲಾಗಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿಯಲ್ಲಿ ಒಟ್ಟು 25,000 ರೈತರಿದ್ದಾರೆ. ಅದರಲ್ಲಿ 5,000 ಡಾಟಾ ಎಂಟ್ರಿ ಮುಗಿದಿದೆ ಎಂದರು.

ಸರ್ವರ್‌ ಸಮಸ್ಯೆಯಿಂದ ವಿಳಂಬವಾಗಿದೆ ಎಂದಾಗ ಸಂಸದರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ನಿಗದಿತ ದಿನದೊಳಗೆ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

ಕೊಲ್ಲೂರು ಪ್ರವಾಸಿ ಮಂದಿರವನ್ನು ಆಧುನಿಕ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ಹೆದ್ದಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಂಸದರು:

ಬೈಂದೂರು ಕ್ಷೇತ್ರದಲ್ಲಿ ಬಹುತೇಕ ಬಹುತೇಕ ಕಡೆಗಳಲ್ಲಿ ಹೆದ್ದಾರಿ ಸಮಸ್ಯೆ ಸಾರ್ವಜನಿಕರಿಗೆ ಕಿರಿಕಿರಿಯಾಗಿ ಪರಿಣಮಿಸಿದೆ. ಹೆದ್ದಾರಿ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸದಿರುವುದನ್ನು ನಾನು ಸಹಿಸುವುದಿಲ್ಲ. ಕಳೆದ ಬಾರಿ ಸಂಸದರ ಸಭೆಯಲ್ಲಿ ನಡೆದ ಯಾವುದೇ ಬದಲಾವಣೆಗೆ ಈ ವರೆಗೆ ಚಾಲನೆ ನೀಡಿಲ್ಲ.ಶಿರೂರಿನಲ್ಲಿ ಟೋಲ್ಗೇಟ್ ಆರಂಭ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಸರ್ವಿಸ್‌ ರೋಡ್‌ಗಳನ್ನು ನಿರ್ಮಿಸಿಲ್ಲ. ಹೀಗಾಗಿ ಸರ್ವಿಸ್‌ ರೋಡ್‌ಗಳನ್ನು ಪೂರ್ಣಗೊಳಿಸದೆ ಟೋಲ್ ಪ್ರಕ್ರಿಯೇ ಆರಂಭಿಸಿದರೆ ಜನರ ಬೆಂಬಲಕ್ಕೆ ನಿಂತು ಹೋರಾಡಬೇಕಾಗುತ್ತದೆ. ಟೋಲ್ ಸುತ್ತ ಸ್ಥಳೀಯರಿಗೆ ರಿಯಾಯಿತಿ ಕೊಡುವ ಕುರಿತು ಬೇಡಿಕೆ ಬಂದಿದ್ದು ಮುಂಚಿತವಾಗಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ,ರಾಜ್ಯದ ವಿಪಕ್ಷ ನಾಯಕರ ಆಪ್ತ ಕಾರ್ಯದರ್ಶಿ ರಾಜಪ್ಪ, ಕುಂದಾಪುರ ಡಿ.ವೈ.ಎಸ್‌.ಪಿ. ಬಿ.ಪಿ. ದಿನೇಶ್‌ ಕುಮಾರ್‌, ಬಿಜೆಪಿ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ಮುಖಂಡ ದೀಪಕ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.