ಅಪಾಯಕಾರಿ ಹಂಪ್ಗೆ ಪರಿಹಾರ
Team Udayavani, Jun 27, 2019, 5:21 AM IST
ಕಡಬ: ಇಲ್ಲಿನ ಹೊಸಮಠ ನೂತನ ಸೇತುವೆಯ ಬಳಿ ಅವೈಜ್ಞಾನಿಕ ರೀತಿಯಲ್ಲಿ ಹಂಪ್ (ರಸ್ತೆ ಉಬ್ಬು) ನಿರ್ಮಿಸಲಾಗಿದ್ದು, ವಾಹನಗಳು ಅಪಘಾತಕ್ಕೀಡಾಗುತ್ತಿದೆ ಎನ್ನುವ ಸಾರ್ವಜನಿಕರ ದೂರಿಗೆ ಸ್ಪಂದಿಸಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್ಡಿಸಿಎಲ್) ಅಧಿಕಾರಿಗಳು ಹಂಪ್ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.
ಹೊಸಮಠ ಸೇತುವೆ ಬಳಿ ಎರಡೂ ಬದಿಯ ಸಂಪರ್ಕ ರಸ್ತೆಗಳಲ್ಲಿ ನಿರ್ಮಿಸಲಾಗಿದ್ದ ಹಂಪ್ (ರಸ್ತೆ ಉಬ್ಬು) ನಿಂದಾಗಿ ಹಲವು ವಾಹನಗಳು ಅಪಘಾತಕ್ಕೀಡಾಗಿದ್ದು ವಾಹನ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು. ಕಾರುಗಳ ಅಡಿಭಾಗ ಈ ಹಂಪ್ಗೆ ತಾಗಿ ಬಿಡಿ ಭಾಗಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿದ ಘಟನೆಗಳೂ ನಡೆದಿದ್ದವು.
ಹಂಪ್ನಿಂದಾಗಿ ಆಗುತ್ತಿರುವ ಸಮಸ್ಯೆಗಳ ಕುರಿತು ‘ಉದಯವಾಣಿ’ ಸುದಿನ ವರದಿಗೆ ಸ್ಪಂದಿಸಿರುವ ಕೆಆರ್ಡಿಸಿಎಲ್ ಎಂಜಿನಿಯರ್, ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸೇತುವೆಯ ಎರಡೂ ತುದಿಗಳಲ್ಲಿನ ಸಂಪರ್ಕ ರಸ್ತೆಗೆ ನಿರ್ಮಿಸಲಾಗಿದ್ದ ಹಂಪ್ಗ್ಳಲ್ಲಿ ಸಲೀಸಾಗಿ ವಾಹನ ಚಲಿಸುವ ರೀತಿಯಲ್ಲಿ ಸ್ವಲ್ಪ ಮಟ್ಟಿನ ಮಾರ್ಪಾಟು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!