ನೀರಿನ ಸಂರಕ್ಷಣೆಗೆ ಯುವ ಜನತೆ ಕೈಜೋಡಿಸಲಿ


Team Udayavani, Jun 27, 2019, 5:00 AM IST

16

ಕಾಲ-ಕಾಲಕ್ಕೆ ತಕ್ಕಂತೆ ಮಳೆ, ಬೆಳೆಯಿಂದ ಸಮೃದ್ಧವಾಗಿದ್ದ ಕರಾವಳಿ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಕುಡಿಯಲು ನೀರಿಲ್ಲದ ಸ್ಥಿತಿ ಉಂಟಾಗಿದೆ. ಲೆಕ್ಕಕ್ಕಿಂತ ಅಧಿಕ ಮಳೆ ಬಂದರೂ ನದಿ, ಹೊಳೆ, ತೋಡು, ಕೆರೆ ಬಾವಿಗಳು ಬೇಸಗೆ ಮೊದಲೇ ಬತ್ತುತ್ತಿವೆ. ಹೀಗಾಗಿ ಅಂತರ್ಜಲಕ್ಕೆ ಸಂರಕ್ಷಿಸುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನಗಳು ನಡೆಯುತ್ತಿವೆ.

ಯುವ ಸಮುದಾಯ ಆ ನಿಟ್ಟಿನಲ್ಲಿ ಗಂಭೀರವಾಗಿ ಚಿಂತಿಸಿದಲ್ಲಿ ಬೀರಬಹುದಾದ ಪರಿಣಾಮ ದೊಡ್ಡದು. ಯುವ ಸಮುದಾಯವನ್ನು ನೀರಿಂಗಿಸುವ ನಿಟ್ಟಿನಲ್ಲಿ ಜಾಗೃತಿ ಗೊಳಿಸುವ, ಅಣಿಗೊಳಿಸುವ ಪ್ರಯತ್ನ ಹೆಚ್ಚಾಗಬೇಕಿದೆ.

ಮಳೆ ಕೊಯ್ಲು ಅಗತ್ಯ
ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಮಳೆಕೊಯ್ಲು, ಮಳೆ ನೀರು ಮರು ಬಳಕೆಯಂತಹ ಪ್ರಯತ್ನ ನಡೆಯುತ್ತದೆ. ಸರಕಾರ ಶಾಲೆಗಳಲ್ಲಿ ಶಿಕ್ಷಣ ಇಲಾಖೆ ಅಂತರ್ಜಲ ಸಂರಕ್ಷಣೆ ಕಡ್ಡಾಯ ನೀತಿ ಅನುಸರಿಸಬೇಕು. ಮನೆ ಮನೆಗಳಲ್ಲಿ ಮಳೆ ನೀರನ್ನು ಇಂಗಿಸುವ ಬಗ್ಗೆ ಮಕ್ಕಳಿಗೆ ತಿಳಿಹೇಳಿದಲ್ಲಿ ಉತ್ತಮ ಫಲಿತಾಂಶ ದೊರೆಯಬಹುದು.

ಯುವ ಸಂಘಟನೆಗಳು ಕೂಡ ಮುತುವರ್ಜಿ ತೋರುತ್ತಿದ್ದರೂ, ಅದರ ಪ್ರಮಾಣ ದ್ವಿಗುಣಗೊಳ್ಳಬೇಕಿದೆ. ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ವನಮಹೋತ್ಸವದಂತಹ ಆಚರಣೆಗಳ ಜತೆಗೆ ಮಳೆಗಾಲದಲ್ಲಿ ಮಳೆಕೊಯ್ಲ ಪದ್ಧತಿ ಅಳವಡಿಸಲು ಯುವಕ ಮಂಡಲ, ಯುವತಿ ಮಂಡಲ ಒತ್ತು ನೀಡಬೇಕು. ಸರಕಾರವು ಈ ಸಂಘಗಳನ್ನು ಬಳಸಿ ಅಂತರ್ಜಲ ಸಂರಕ್ಷಣೆ ಕಾರ್ಯ ಅನುಷ್ಠಾನಿಸಿದರೆ ಗ್ರಾಮ ಮಟ್ಟದಲ್ಲಿ ವಿಸ್ತರಿಸಲು ಸಾಧ್ಯ ವಾಗುತ್ತದೆ. ಎನ್‌ಜಿಓ ಸಂಸ್ಥೆಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳುವ ಅಗತ್ಯ ಇದೆ.

ಮಳೆನೀರು ಕೊಯ್ಲು ಎಂಬುದು ಮಳೆ ನೀರನ್ನು ಒಟ್ಟುಗೂಡಿಸುವ ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಅಂತರ್ಜಲ ಮರುಪೂರಣ ಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯಿದು. ಮನೆಗಳು, ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ಇದು ಸಹಕಾರಿ. ಛಾವಣಿಯ ಮಳೆನೀರು ಸಾಮಾನ್ಯವಾಗಿ ಉತ್ತಮ ಗುಣಮಟ್ಟದ್ದಾಗಿರುತ್ತದೆಯಾದ್ದರಿಂದ, ಬಳಕೆಗೆ ಮೊದಲು ಅದನ್ನು ಸಂಸ್ಕರಿಸುವ ಅಗತ್ಯ ಕಂಡು ಬರುವುದಿಲ್ಲ. ಸರಳವಾದ ವಿಧಾನದಿಂದ ಮೊದಲ್ಗೊಂಡು ಸಂಕೀರ್ಣವಾದ ಕೈಗಾರಿಕಾ ವ್ಯವಸ್ಥೆಗಳವರೆಗೆ, ಮಳೆನೀರು ಸಂರಕ್ಷಿಸುವ ಹಲವಾರು ವಿಧದ ವ್ಯವಸ್ಥೆಗಳಿವೆ.

ಮಳೆ ನೀರನ್ನು ನೆಲದಿಂದ ಇಲ್ಲವೇ ಛಾವಣಿಯಿಂದ ಕೊಯ್ಲು ಮಾಡಲಾಗುತ್ತದೆ. ಈ ಎರಡು ವ್ಯವಸ್ಥೆಗಳಿಂದ ನೀರನ್ನು ಸಂಗ್ರಹಿಸಬಹುದಾದ ವೇಗವು ಯೋಜನಾ ಪ್ರದೇಶ, ಅದರ ಸಾಮರ್ಥ್ಯ ಮತ್ತು ಮಳೆಯಾಗುವ ತೀವ್ರತೆ ಅವಲಂಬಿಸಿರುತ್ತದೆ. ನೆಲದ ಸಂಗ್ರಹಣೆಗಳ ವ್ಯವಸ್ಥೆಗಳು ನೀರನ್ನು ಒಂದು ಸಿದ್ಧಪಡಿಸಲಾದ ಸಂಗ್ರಹಣಾ ಪ್ರದೇಶದಿಂದ ಶೇಖರಣಾ ಪ್ರದೇಶಕ್ಕೆ ಹರಿಸುತ್ತವೆ. ಛಾವಣಿ ಸಂಗ್ರಹಣಾ ವ್ಯವಸ್ಥೆಗಳು ಛಾವಣಿಯೊಂದರ ಮೇಲೆ ಬೀಳುವ ಮಳೆ ನೀರನ್ನು ಒಂದು ವ್ಯವಸ್ಥೆಯ ಮೂಲಕ ಸಂಗ್ರಹಿಸುವುದು. ಹೀಗೆ ಮಳೆನೀರನ್ನು ಅಂತರ್ಜಲ ಮರುಪೂರಣ ಕಾರ್ಯಕ್ಕೂ ಬಳಸಬಹುದಾಗಿದ್ದು, ಇದರಲ್ಲಿ ನೆಲದ ಮೇಲೆ ಹರಿಯುವ ಹೆಚ್ಚುವರಿ ಪ್ರಮಾಣದ ನೀರು ಸಂಗ್ರಹಿಸಲ್ಪಡುತ್ತದೆ ಹಾಗೂ ಹೀರಿಕೆಗೆ ಒಳಗಾಗುವುದರ ಮೂಲಕ ಅಂತರ್ಜಲದ ಪ್ರಮಾಣದಲ್ಲಿ ಹೆಚ್ಚಳವಾಗಲು ಕಾರಣವಾಗುತ್ತದೆ.

ಹೀಗೆ ಸ್ಥಳೀಯವಾಗಿ ದೊರೆಯುವ ಹೆಚ್ಚು ದುಬಾರಿಯಲ್ಲದ ಸಾಮಗ್ರಿಗಳಿಂದ ಮಳೆನೀರು ಕೊಯ್ಲಿನ ವ್ಯವಸ್ಥೆಗಳನ್ನು ಸರಳವಾಗಿ ನಿರ್ಮಿಸಬಹುದು. ಹಾಗಾಗಿ ಸಂಘ ಸಂಸ್ಥೆಗಳು, ಯುವ ಸಂಘಟನೆಗಳು ಆಯಾ ಗ್ರಾಮಗಳಲ್ಲಿ ಮನೆ ಮನೆ ಭೇಟಿ ಮೂಲಕ ಇದರ ವಿಧಾನ, ಅಳವಡಿಕೆ ಲಾಭದ ಬಗ್ಗೆ ಮನವರಿಕೆ ಮಾಡಿಕೊಡಬೇಕು.

••••ಕಿರಣ್‌ ಕುಂಡಡ್ಕ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.