ಅಪರಾಧ ಕೃತ್ಯಗಳಲ್ಲೂ ಭಾಗಿಯಾಗಿದ್ದ ಶಂಕಿತ ಉಗ್ರ


Team Udayavani, Jun 27, 2019, 3:09 AM IST

aparadha

ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಜೆಎಂಬಿ ಉಗ್ರ ಹಬ್ಬಿಬುರ್‌ ರೆಹಮಾನ್‌, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ದರೋಡೆ ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಅಂಶ ಎನ್‌ಐಎ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಎನ್‌ಐಎ ವಿಚಾರಣೆ ಸಂದರ್ಭದಲ್ಲಿ ರೆಹಮಾನ್‌ ಕೆಲವೊಂದು ಮಹತ್ವದ ಮಾಹಿತಿ ಬಾಯಿಬಿಟ್ಟಿದ್ದಾನೆ. ಆರೋಪಿಯ ಬಳಿಯಿದ್ದ ಎರಡು ಸುಧಾರಿತ ಸ್ಫೋಟಕ ಸಾಧನ (ಐಇಡಿ) ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಆರೋಪಿ 2018ರ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ನಡೆದ ಕೆಲ ಡಕಾಯಿತಿ ಪ್ರಕರಣದಲ್ಲಿ ಭಾಗಿಯಾಗಿದ್ದು, ಬಂದ ಹಣವನ್ನು ಬಾಂಗ್ಲಾದೇಶದಲ್ಲಿರುವ ತನ್ನ ಉಗ್ರ ಸಂಘಟನೆ ಜೆಎಂಬಿಗೆ ಕಳುಹಿಸುತ್ತಿದ್ದ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾನೆ.

ಹೀಗಾಗಿ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಹಾಗೂ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್‌ ಆಯುಕ್ತರನ್ನು ಸಂಪರ್ಕಿಸಿ ಆರೋಪಿ ವಿರುದ್ಧ ಯಾವುದಾದರೂ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಮಾಹಿತಿ ಪಡೆಯಬೇಕಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ತನ್ನ ಜೆಎಂಬಿ ಸಂಘಟನೆಯನ್ನು ಆರ್ಥಿಕವಾಗಿ ಸದೃಢ ಪಡಿಸಲು ಹಣ ಹೊಂದಿಸಲು ಹರ ಸಾಹಸ ಪಡುತ್ತಿದ್ದ.

ಬೆಂಗಳೂರು, ತುಮಕೂರು, ರಾಮನಗರದಲ್ಲಿ ವಾಸವಾಗಿದ್ದ ಸಂಘಟನೆಯ ಇತರೆ ಸದಸ್ಯರು ಹಾಗೂ ಸ್ಥಳೀಯ ವ್ಯಕ್ತಿಗಳ ಜತೆ ಸೇರಿ ಕೊಂಡು ಬೆಂಗಳೂರು ನಗರ ಮತ್ತು ಹೊರ ವಲಯಗಳಲ್ಲಿರುವ ಶ್ರೀಮಂತರ ಮನೆಗಳು, ದುಬಾರಿ ಕಾರುಗಳಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಡ್ಡಿ ದರೋಡೆ ಮಾಡುತ್ತಿದ್ದರು. ಬಂದ ಹಣದಲ್ಲಿ ಸ್ಥಳೀಯ ವ್ಯಕ್ತಿಗಳಿಗೆ ಹಂಚಿ, ಇನ್ನುಳಿದ ಮೊತ್ತವನ್ನು ಸಂಘಟನೆಯ ಖಾತೆಗೆ ಜಮೆ ಮಾಡುತ್ತಿದ್ದರು.

ಹೀಗಾಗಿ ಆರೋಪಿಗಳು ಯಾವ ಬ್ಯಾಂಕ್‌ಗಳಿಂದ ಹಣ ವರ್ಗಾವಣೆ ಮಾಡುತ್ತಿದ್ದರು, ಯಾವೆಲ್ಲ ಸ್ಥಳಗಳಲ್ಲಿ ದರೋಡೆ, ಡಕಾಯಿತಿ ಮಾಡಿದ್ದಾರೆ ಎಂಬೆಲ್ಲ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜತೆಗೆ ನೆರೆ ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದು, ದರೋಡೆಗೊಳಗಾದ ಪ್ರಕರಣಗಳ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬ ಸದಸ್ಯರನ್ನು ಸಂಪರ್ಕಿಸಲಾಗುವುದು.

ಅನಂತರ ಘಟನಾ ಸ್ಥಳದಲ್ಲಿರುವ ಸಿಸಿಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆರೋಪಿ, ಈ ಹಿಂದೆ ಕೌಸರ್‌ ಜತೆ ಸೇರಿಕೊಂಡು ಆನೇಕಲ್‌ ತಾಲೂಕಿನ ಅತ್ತೀಬೆಲೆಯ ಪಿಳ್ಳರೆಡ್ಡಿ ಲೇಔಟ್‌ನಲ್ಲಿರುವ ಇಬ್ಬರು ಶ್ರೀಮಂತ ವ್ಯಕ್ತಿಗಳ ಮನೆಗಳಿಗೆ ನುಗ್ಗಿ ದರೋಡೆ ಮಾಡಿದ್ದ.

ಹೀಗಾಗಿ ದರೋಡೆಗೊಳಗಾದ ಮನೆಯವರ ಜತೆ ನಿರಂತರ ಸಂಪರ್ಕದಲ್ಲಿದ್ದು, ಅವರನ್ನು ಆರೋಪಿಯ ಐಡೆಂಟಿಫಿಕೆಶನ್‌ ಪರೇಡ್‌(ಗುರುತು ಪತ್ತೆ ಹಚ್ಚುವುದು)ಗೆ ಕರೆಸಿಕೊಂಡು ಸಾಕ್ಷ್ಯ ಪಡೆಯಲಾಗುತ್ತದೆ. ಜತೆಗೆ ಎರಡು ಮನೆಗಳಿಗೆ ನುಗ್ಗಿದ ದರೋಡೆಕೋರರು ಉರ್ದು ಹೊರತು ಪಡಿಸಿ ಬೇರೆ ಯಾವುದೇ ಭಾಷೆ ಬರುತ್ತಿರಲಿಲ್ಲ. ರೈಫ‌ಲ್‌ಗ‌ಳು ಮತ್ತು ಮಾರಕಾಸ್ತ್ರಗಳನ್ನು ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.