ಮನೆಮನೆಗಳಲ್ಲೂ ಮೂಡುತ್ತಿದೆ ಜಲಸಾಕ್ಷರತೆ

'ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನ ಯಶಸ್ವಿ

Team Udayavani, Jun 27, 2019, 5:00 AM IST

24

ಮಹಾನಗರ: ಜಲ ಸಾಕ್ಷರತೆ ಕುರಿತು ಉದಯವಾಣಿ ಹಮ್ಮಿಕೊಂಡ ಮನೆಮನೆಗೆ ಮಳೆಕೊಯ್ಲು ಅಭಿಯಾನದಿಂದ ಪ್ರೇರಿತರಾಗಿ ಮುಂದಿನ ದಿನಗಳಲ್ಲಿ ಜಲಸಂಪನ್ಮೂಲವನ್ನು ಉಳಿಸುವ ನಿಟ್ಟಿನಲ್ಲಿ ನಗರವಾಸಿಗಳು ಮಳೆ ನೀರು ಸಂಗ್ರಹಿಸಲು ಮಳೆಕೊಯ್ಲು ಅಳವಡಿಸುತ್ತಿದ್ದರೆ ಗ್ರಾಮೀಣ ಭಾಗಗಳಲ್ಲಿ ಇಂಗುಗುಂಡಿಯಂಥ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದಕ್ಕೆ ಮಂಗಳೂರಿನ ನಗರವಾಸಿಗಳಿಂದ ಬಂಟ್ವಾಳ ತಾಲೂಕಿನಿಂದಲೂ ಸ್ಪಂದನೆ ವ್ಯಕ್ತವಾಗಿದೆ.

ಬಂಟ್ವಾಳ ತಾಲೂಕಿನ ಅಮೂrರು ಬಾಳಿಕೆಯ ವಿಖ್ಯಾತ್‌ ಶೆಟ್ಟಿ ಅವರು ತಮ್ಮ ಮನೆಯಲ್ಲಿ ಮಳೆ ನೀರು ಇಂಗಿಸುವ ಸಲುವಾಗಿ ಇಂಗುಗುಂಡಿಯನ್ನು ನಿರ್ಮಾಣ ಮಾಡಿದ್ದಾರೆ.

ತಮ್ಮ ಮನೆಯ ಬೋರ್‌ವೆಲ್ ಪಕ್ಕದಲ್ಲಿ 5 ಫೀಟ್ ಮತ್ತು 11 ಫೀಟ್ ಆಗಲವಿರುವ ಗುಂಡಿಯನ್ನು ನಿರ್ಮಾಣ ಮಾಡಿದ್ದಾರೆ. ಮಳೆ ನೀರು ಈ ಗುಂಡಿಗೆ ಬೀಳುವಂತೆ ಮಾಡಿ ನೀರು ಇಂಗಿಸುತ್ತಿದ್ದಾರೆ. ಇನ್ನು ಎತ್ತರದ ಪ್ರದೇಶಗಳಿಂದ ಬರುವ ಮಳೆ ನೀರನ್ನು ಕಣಿಯ ಮುಖೇನ ಬಾವಿಗೆ ಸಂಪರ್ಕ ಕಲ್ಪಿಸಿದ್ದಾರೆ. ಈ ಬಾವಿಯ ನೀರನ್ನು ಇವರು ಕುಡಿಯುವ ಉದ್ದೇಶಕ್ಕೆ ಉಪಯೋಗಿಸದೇ ಇರುವ ಕಾರಣದಿಂದ ಕೇವಲ ನೀರು ಇಂಗಿಸಲು ಬಳಕೆ ಮಾಡುತ್ತಿದ್ದಾರೆ. ಪಕ್ಕದಲ್ಲಿಯೇ ಬೋರ್‌ವೆಲ್ ಇರುವುದರಿಂದ ಇಂಗುಗುಂಡಿ ನಿರ್ಮಾಣ ಮಾಡಿದ ಪರಿಣಾಮವಾಗಿ ನೀರಿನ ಮಟ್ಟ ಏರಿಕೆಯಾಗಬಹುದು ಮತ್ತು ಅಕ್ಕಪಕ್ಕದ ಮನೆಗಳ ಬಾವಿ, ಬೋರ್‌ವೆಲ್ಗಳಲ್ಲಿಯೂ ನೀರಿನ ಮಟ್ಟ ಏರಿಕೆಯಾಗಬಹುದು ಎಂಬ ಉದ್ದೇಶದಿಂದ ಇಂಗುಗುಂಡಿ ನಿರ್ಮಾಣ ಮಾಡಿದ್ದಾರೆ.

ಉದಯವಾಣಿ ಸುದಿನದಲ್ಲಿ ಪ್ರಕಟವಾಗುತ್ತಿದ್ದ ಮಳೆನೀರು ಕೊಯ್ಲು ಅಭಿಯಾನವನ್ನು ನಾನು ಗಮನಿಸಿದೆ. ಮಳೆ ನೀರನ್ನು ಪೋಲಾಗಲು ಬಿಡದೆ ಹಿಡಿದಿಟ್ಟುಕೊಂಡರೆ ಅಂತರ್ಜಲ ಮಟ್ಟ ಏರಿಕೆಯಾಗುತ್ತದೆ ಎಂಬ ಉದ್ದೇಶದಿಂದ ಇಂಗುಗುಂಡಿ ನಿರ್ಮಾಣ ಮಾಡಿದೆ ಎನ್ನುತ್ತಾರೆ ವಿಖ್ಯಾತ್‌.

ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿದ್ದಾರೆ. ಜತೆಗೆ ತಮ್ಮ ಖುಷಿಯನ್ನು ಉಳಿದವರೊಂದಿಗೂ ಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ, ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೊ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಹಲವು ವರ್ಷಗಳಿಂದ ನೀರಿನ ಕೊರತೆ ಎದುರಾಗುತ್ತಿತ್ತು. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಮನೆ ಮುಂಭಾಗದಲ್ಲಿ ಬಾವಿ ತೋಡಿಸಿ ಅದಕ್ಕೆ ಮಳೆಕೊಯ್ಲು ಅಳವಡಿಸಿದೆವು ಎನ್ನುತ್ತಾರೆ ಮೋರ್ಗನ್‌ಗೇಟ್ಸ್‌ನ ಭಗವಾನ್‌ದಾಸ್‌.

ಈ ಹಿಂದೆ ಬೇರೆ ಕಡೆ ಮನೆ ಮಾಡಿದ್ದ ಸಂದರ್ಭದಲ್ಲಿ ಅಲ್ಲಿ ಮಳೆಕೊಯ್ಲು ಅಳವಡಿಸಿದ್ದೆವು. ಅಲ್ಲಿ ಬೇಸಗೆಯಲ್ಲಿಯೂ ನೀರು ಆರುವುದಿಲ್ಲ. ಅದರ ಲಾಭದ ಬಗ್ಗೆ ಅರಿವಾದ ಬಳಿಕ ನಮ್ಮ ಮನೆಯಲ್ಲೂ ಮಳೆಕೊಯ್ಲು ಅಳವಡಿಸಬೇಕು ಎಂದು ಯೋಚಿಸಿದ್ದೆ. ಉದಯವಾಣಿ ಅಭಿಯಾನ ನೋಡಿದ ಬಳಿಕ ಬೋರ್‌ ವೆಲ್ ಬಗ್ಗೆ ಹೆಚ್ಚು ಆಸಕ್ತಿ ತಾಳದೆ ಬಾವಿ ತೋಡಿಸಿದೆವು. ಮನೆಯ ಟೆರೇಸ್‌ಗೆ ಬೀಳುವ ಮಳೆ ನೀರನ್ನು ಪೈಪ್‌ ಮೂಲಕ ಫಿಲ್ಟರ್‌ ಮಾಡಿ ಬಾವಿಗೆ ಬೀಳುವಂತೆ ಮಾಡಿದೆವು. ಬಾವಿಗೆ ಒಂದು ಲಕ್ಷದವರೆಗೆ ಖರ್ಚು ತಗಲಿದ್ದು, ಮಳೆಕೊಯ್ಲು ಅಳವಡಿಕೆಗೆ 30,000 ರೂ. ವರೆಗೆ ಖರ್ಚಾಗಿದೆ. ಆದರೆ ನೀರಿನ ಸಮಸ್ಯೆ ಮುಂದಿನ ಬಾರಿ ಎದುರಾಗುವುದಿಲ್ಲ ಎಂಬ ವಿಶ್ವಾಸ ಇದೆ ಎನ್ನುತ್ತಾರೆ ಅವರು.

ಬಾವಿ ತೋಡಿ ಮಳೆಕೊಯ್ಲು ಅಳವಡಿಕೆ

ಅಶೋನಗರದ ನಿವಾಸಿ ಲೋಬೊ ಅವರಿಗೆ ಈವರೆಗೆ ನೀರಿನ ಸಮಸ್ಯೆ ಉಂಟಾಗಲಿಲ್ಲ. ಮುಂಬರುವ ದಿನಗಳಲ್ಲಿಯೂ ನೀರಿನ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಉದಯವಾಣಿ ಅಭಿಯಾನದಿಂದ ಪ್ರೇರಿತರಾಗಿ ತಮ್ಮ ಮನೆಯಲ್ಲಿ ಮಳೆ ನೀರು ಕೊಯ್ಲ ವ್ಯವಸ್ಥೆಯನ್ನು ಅಳವಡಿಸಿದ್ದಾರೆ.

ಸುಮಾರು 40 ವರ್ಷಗಳ ಹಿಂದಿನ ಬಾವಿ ಇವರ ಮನೆಯಲ್ಲಿದ್ದು, ಈವರೆಗೆ ನೀರಿನ ಸಮಸ್ಯೆ ಉಂಟಾಗಿಲ್ಲ. ಈಗ ಮಳೆ ನೀರು ಪೋಲಾಗಬಾರದು ಎಂಬ ಉದ್ದೇಶದಿಂದ ಮನೆಯ ಛಾವಣಿಯ ನೀರನ್ನು ಪೈಪ್‌ಲೈನ್‌ ಮೂಲಕ ತಮ್ಮ ಬಾವಿಗೆ ಸಂಪರ್ಕ ಕಲ್ಪಿಸಿದ್ದಾರೆ. ಬಾವಿಯ ಬಳಿ ಫಿಲ್ಟರ್‌ ವ್ಯವಸ್ಥೆ ಮಾಡಲಾಗಿದ್ದು, ಕಸ, ಕಡ್ಡಿಗಳು ನೀರಿನಲ್ಲಿ ಬಂದರೆ ಬಟ್ಟೆಯಲ್ಲಿ ನಿಂತು ಶುದ್ಧ ನೀರು ಬಾವಿಗೆ ಹೋಗುತ್ತಿದೆ.

ನೀವೂ ಅಳವಡಿಸಿ, ವಾಟ್ಸಪ್‌ ಮಾಡಿ

ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿದ್ದಾರೆ. ಜತೆಗೆ ತಮ್ಮ ಖುಷಿಯನ್ನು ಉಳಿದವರೊಂದಿಗೂ ಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ, ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೊ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ನೀರಿನ ಸಮಸ್ಯೆ ತಡೆಯಲು ಮಳೆಕೊಯ್ಲು
ಅಶೋನಗರದ ನಿವಾಸಿ ಲೋಬೊ ಅವರಿಗೆ ಈವರೆಗೆ ನೀರಿನ ಸಮಸ್ಯೆ ಉಂಟಾಗಲಿಲ್ಲ. ಮುಂಬರುವ ದಿನಗಳಲ್ಲಿಯೂ ನೀರಿನ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಉದಯವಾಣಿ ಅಭಿಯಾನದಿಂದ ಪ್ರೇರಿತರಾಗಿ ತಮ್ಮ ಮನೆಯಲ್ಲಿ ಮಳೆ ನೀರು ಕೊಯ್ಲ ವ್ಯವಸ್ಥೆಯನ್ನು ಅಳವಡಿಸಿದ್ದಾರೆ. ಸುಮಾರು 40 ವರ್ಷಗಳ ಹಿಂದಿನ ಬಾವಿ ಇವರ ಮನೆಯಲ್ಲಿದ್ದು, ಈವರೆಗೆ ನೀರಿನ ಸಮಸ್ಯೆ ಉಂಟಾಗಿಲ್ಲ. ಈಗ ಮಳೆ ನೀರು ಪೋಲಾಗಬಾರದು ಎಂಬ ಉದ್ದೇಶದಿಂದ ಮನೆಯ ಛಾವಣಿಯ ನೀರನ್ನು ಪೈಪ್‌ಲೈನ್‌ ಮೂಲಕ ತಮ್ಮ ಬಾವಿಗೆ ಸಂಪರ್ಕ ಕಲ್ಪಿಸಿದ್ದಾರೆ. ಬಾವಿಯ ಬಳಿ ಫಿಲ್ಟರ್‌ ವ್ಯವಸ್ಥೆ ಮಾಡಲಾಗಿದ್ದು, ಕಸ, ಕಡ್ಡಿಗಳು ನೀರಿನಲ್ಲಿ ಬಂದರೆ ಬಟ್ಟೆಯಲ್ಲಿ ನಿಂತು ಶುದ್ಧ ನೀರು ಬಾವಿಗೆ ಹೋಗುತ್ತಿದೆ.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.