2020ಕ್ಕೆ ದೇಶದ 21 ನಗರಗಳಲ್ಲಿ ತೀವ್ರ ಜಲಕ್ಷಾಮ: ಭರತ

ಕೈಗಾರಿಕಾ ಘಟಕದಲ್ಲಿ ಮಳೆನೀರು ಕೊಯ್ಲು ವ್ಯವಸ್ಥೆಗೆ ಶೇ. 75 ಸಹಾಯಧನ

Team Udayavani, Jun 27, 2019, 12:42 PM IST

27-June-21

ಹುಬ್ಬಳ್ಳಿ: ಕೆಸಿಸಿಐನಲ್ಲಿ ಆಯೋಜಿಸಿದ್ದ ಮಳೆ ನೀರು ಕೊಯ್ಲು, ಸೌರಶಕ್ತಿ, ಇ-ತ್ಯಾಜ್ಯ ನಿರ್ವಹಣೆ ಕುರಿತ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.

ಹುಬ್ಬಳ್ಳಿ: 2020ರ ಅಂತ್ಯಕ್ಕೆ ದೇಶದ ಪ್ರಮುಖ 21 ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಆದ್ದರಿಂದ ಈಗಲೇ ನಾವು ಎಚ್ಚರಿಕೆ ವಹಿಸಬೇಕು. ಪ್ರತಿ ಉದ್ಯಮಿ ಸಾಮಾಜಿಕ ಜವಾಬ್ದಾರಿ ಮೆರೆದು ನೀರು ಉಳಿಸಲು ಪ್ರಯತ್ನಿಸಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಭರತ ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಸೂಕ್ಷ್ಮ, ಲಘು, ಮಧ್ಯಮ ಉದ್ಯಮಗಳ ಮಂತ್ರಾಲಯ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಜೆಸಿ ನಗರದ ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ ಮಳೆ ನೀರು ಕೊಯ್ಲು, ಸೌರಶಕ್ತಿ, ಇ-ತ್ಯಾಜ್ಯ ನಿರ್ವಹಣೆ ಹಾಗೂ ಬ್ಯಾಂಕ್‌ ಆಫ್‌ ಬರೋಡಾದಿಂದ ದೊರೆಯುವ ಯೋಜನೆ ಮತ್ತು ಆರ್ಥಿಕ ನೆರವು ಕುರಿತ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಪ್ರದಾಯಿಕ ಎನರ್ಜಿ ಬಳಕೆಯಿಂದ, ಅದರಿಂದ ಉತ್ಪಾದಿತ ಉತ್ಪನ್ನ ಉಪಯೋಗಿಸುವುದರಿಂದ ಲಾಭವಾಗುತ್ತದೆ. ಸರಕಾರದ ಕೈಗಾರಿಕಾ ನೀತಿ ತುಂಬಾ ಉಪಯುಕ್ತವಾಗಿದೆ. ಕಾರ್ಖಾನೆಗೆ ಬಳಸುವ ನೀರನ್ನು ಮರುಪೂರ್ಣ ಮಾಡುವ ವ್ಯವಸ್ಥೆಯಿದ್ದು, ಅದನ್ನು ಬಳಸಿಕೊಳ್ಳಬೇಕು. ಕೈಗಾರಿಕಾ ಘಟಕದಲ್ಲಿ ಮಳೆನೀರು ಕೊಯ್ಲು ಹಾಗೂ ತ್ಯಾಜ್ಯನೀರು ಪುನರ್‌ ಬಳಕೆಗೆ ವ್ಯವಸ್ಥೆ ಮಾಡಿಕೊಂಡರೆ, ಅದಕ್ಕೆ ಉಪಕರಣಗಳನ್ನು ಬಳಸಿದರೆ ಸರಕಾರದಿಂದ ಶೇ. 75 ಸಬ್ಸಿಡಿ ದೊರೆಯುತ್ತದೆ. ಕೈಗಾರಿಕಾ ನೀತಿ ಅನ್ವಯ ಎಲ್ಲ ಕಾರ್ಖಾನೆಗಳು ಕೆಲಸ ಮಾಡಬೇಕು ಎಂದರು.

ಒಆರ್‌ಬಿ ಸೌರಶಕ್ತಿ ಕಂಪೆನಿಯ ಪ್ರತಿನಿಧಿ ರಮೇಶ ಎಂ.ಪಿ. ಮಾತನಾಡಿ, ಪ್ರಾಕೃತಿಕವಾಗಿ ದೊರೆಯುವ ಶಕ್ತಿ ಬಳಸುವಂತಾಗಬೇಕು. ಸೌರಶಕ್ತಿಯಿಂದ ಗಳಿಕೆ ಮಾಡಿದ ಯುನಿಟ್ಅನ್ನು ಗ್ರೀಡ್‌ನ‌ಲ್ಲಿ ಉಳಿಸಿಕೊಂಡು ರಾತ್ರಿಯಲ್ಲಿ ಮನೆಯಲ್ಲಿ ವಿದ್ಯುತ್‌ ಆಗಿ ಬಳಸಬಹುದು. ಇದರಿಂದ ವಿದ್ಯುತ್‌ ಕೊರತೆ ಆಗುವುದಿಲ್ಲ. ದೊರೆಯುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ವಾಣಿಶ್ರೀ ಹಡಗಲಿ ಮಾತನಾಡಿ, ಟಿವಿ, ಡಿವಿಡಿ, ಲ್ಯಾಪ್‌ಟಾಪ್‌, ಮೊಬೈಲ್ ಸೇರಿದಂತೆ ಇನ್ನಿತರೆ ಇಲೆಕ್ಟ್ರಾನಿಕ್ಸ್‌ ಉಪಕರಣಗಳಿಂದ ಇ-ತ್ಯಾಜ್ಯ ಹೆಚ್ಚಾಗುತ್ತಿದೆ. ಇದರ ಪರಿಣಾಮ ಮನುಷ್ಯನ ಜೀವನದ ಮೇಲೆ ಆಗುತ್ತಿದೆ. ಕಿಡ್ನಿ, ಡಿಎನ್‌ಎ, ಮೆದುಳಿಗೆ ಹಾನಿ ಆಗುತ್ತಿದೆ. ಇ-ತ್ಯಾಜ್ಯ ಪುನರ್‌ ಬಳಕೆ ಇಲ್ಲವೆ ಮರುಪೂರ್ಣಗೊಳಿಸಲು ಹಾಗೂ ಹೊಸ ಉದ್ಯಮ ಸ್ಥಾಪಿಸಲು ಅವಕಾಶವಿದೆ. ಒಂದು ವರ್ಷದಲ್ಲಿ ಶೇ. 27 ಮಾತ್ರ ಇ-ತ್ಯಾಜ್ಯ ನಿರ್ವಹಣೆ ಮರುಪೂರ್ಣ ಮಾಡುತ್ತಿದ್ದೇವೆ. ಅದು ಹೆಚ್ಚಾಗಬೇಕು ಎಂದರು.

ಕೆಸಿಸಿಐ ಅಧ್ಯಕ್ಷ ವಿ.ಪಿ. ಲಿಂಗನಗೌಡರ, ಬ್ಯಾಂಕ್‌ ಆಫ್‌ ಬರೋಡಾದ ಪ್ರಾದೇಶಿಕ ಕಚೇರಿ ಮಹಾಪ್ರಬಂಧಕ ರಾಮಕೃಷ್ಣ ನಾಯರ್‌, ಎಂಎಸ್‌ಎಂಇ-ಡಿಐ ನಿರ್ದೇಶಕ ಮಿಲಿಂದ ಬಾರಪತ್ರೆ, ಸಹಾಯಕ ನಿರ್ದೇಶಕ ಆರ್‌.ಬಿ. ಅರ್ಕಸಾಲಿ, ರಮೇಶ ಪಾಟೀಲ, ಅಶೋಕ ತೋಳನ್ನವರ, ಕೆಸಿಸಿಐನ ಮಹಿಳಾ ವಿಭಾಗದ ಅಧ್ಯಕ್ಷೆ ರತಿ ಶ್ರೀನಿವಾಸನ್‌, ಶ್ರೀನಿವಾಸ ಡಿ., ಸುದರ್ಶನ ಡಿ. ಮೊದಲಾದವರಿದ್ದರು. ಮಹೇಂದ್ರ ಲದ್ದಡ ಸ್ವಾಗತಿಸಿದರು. ಅಶೋಕ ಗಡಾದ ನಿರೂಪಿಸಿದರು. ವಿನಯ ಜವಳಿ ವಂದಿಸಿದರು.

ದೀಪಾವಳಿ ಸೇರಿದಂತೆ ಇನ್ನಿತರೆ ಹಬ್ಬಗಳ ಸಂದರ್ಭದಲ್ಲಿ, ಗುರುಗಾಂವ್‌ ಒಳಗೊಂಡು ಕೈಗಾರಿಕಾ ಪ್ರದೇಶಗಳಲ್ಲಿ ವಾಯುಮಾಲಿನ್ಯ ಮಿತಿ ಮೀರುತ್ತಿದೆ. ನಮಗೆ ಅತ್ಯಂತ ಅವಶ್ಯವಾದ ಸಾಂಪ್ರದಾಯಿಕ ಬಳಕೆ, ಸಂಪನ್ಮೂಲ ಕ್ಷೀಣಿಸುತ್ತಿದೆ. ಪ್ರತಿಯೊಬ್ಬ ನಾಗರಿಕರು, ಉದ್ಯಮದಾರರು ಆ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ.
ಭರತ,
ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.