ಬಿಜೆಪಿ ಅಭಿಯಾನ : ಕೊಡಗಿನಲ್ಲಿ ಒಂದು ಲಕ್ಷ ಸದಸ್ಯರ ಗುರಿ


Team Udayavani, Jun 28, 2019, 5:25 AM IST

BJP-545

ಮಡಿಕೇರಿ: ಭಾರತೀಯ ಜನತಾ ಪಾರ್ಟಿಯನ್ನು ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಜು.6ರಿಂದ ಆ.11ರವರೆಗೆ ದೇಶಾದ್ಯಂತ ಸಂಘಟನ್‌ ಪರ್ವ ಸದಸ್ಯತ್ವ ಅಭಿಯಾನ ನಡೆಯಲಿದೆ. ಈ ಸಂದರ್ಭ ಕೊಡಗು ಜಿಲ್ಲೆಯಲ್ಲಿ ಒಂದು ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಬಿಜೆಪಿ ಈಗಾಗಲೇ ಸಮಾಜದ ಎಲ್ಲ ವರ್ಗದ ಜನರನ್ನು ತಲುಪುವುದರೊಂದಿಗೆ ವಿಶ್ವದ ನಂಬರ್‌ ಒನ್‌ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ದೇಶದಲ್ಲಿ ಸುಮಾರು 11 ಕೋಟಿ ಸಕ್ರಿಯ ಸದಸ್ಯರನ್ನು ಪಕ್ಷ ಹೊಂದಿದ್ದು, ಕರ್ನಾಟಕದಲ್ಲಿ 83 ಲಕ್ಷ ಹಾಗೂ ಕೊಡಗು ಜಿಲೆಯಲ್ಲಿ 45 ಸಾವಿರ ಸದಸ್ಯರು ಕಳೆದ ಬಾರಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಪ್ರತೀ ಆರು ವರ್ಷಗಳಿಗೊಮ್ಮೆ ಪಕ್ಷದ ಸದಸ್ಯತ್ವ ಅಭಿಯಾನ ಹಮ್ಮಿ ಕೊಳ್ಳಲಾಗುತ್ತಿದ್ದು, ಅದರಂತೆ ಈ ಬಾರಿ ಜು.6ರಿಂದ ಆ.11 ರವರೆಗೆ ಅಭಿ ಯಾನ ನಡೆ‌ಯಲಿದೆ. ಸದಸ್ಯರಾಗಲು ಬಯಸುವವರು ಜು.6ರಿಂದ 8980808080 ಸಂಖ್ಯೆಗೆ ಮಿಸ್ಡ್ ಕಾಲ್‌ ನೀಡುವ ಮೂಲಕ ನೋಂದಾಯಿ ಸಿಕೊಳ್ಳಬಹುದು. ಈ ರೀತಿ ಕರೆ ಮಾಡಿದ ಸದಸ್ಯರಿಗೆ ಅವರ ವಿಳಾಸ ನೀಡುವಂತೆ ಎಸ್‌ಎಂಎಸ್‌ ಬರಲಿದ್ದು, ಆ ಸಂದರ್ಭ ತಮ್ಮ ವಿಳಾಸವನ್ನು ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕಳೆದ ಬಾರಿ ಕೊಡಗು ಜಿಲ್ಲೆಯಲ್ಲಿ 45 ಸಾವಿರ ಮಂದಿ ಸದಸ್ಯರನ್ನು ನೋಂದಾಯಿಸಲಾಗಿದ್ದು, ಈ ಬಾರಿ ಇದನ್ನು ಒಂದು ಲಕ್ಷಕ್ಕೆ ತಲುಪಿಸುವ ಗುರಿ ಹೊಂದಲಾಗಿದೆ. ಸದಸ್ಯತ್ವ ನೋಂದಣೆಯ ಜವಾಬ್ದಾರಿಗಾಗಿ ಜಿಲ್ಲಾ ಸಂಚಾಲಕರಾಗಿ ಶಾಂತೆಯಂಡ ರವಿಕುಶಾಲಪ್ಪ, ಸಹ ಸಂಚಾಲಕರಾಗಿ ನಾಪಂಡ ರವಿ ಕಾಳಪ್ಪ ಹಾಗೂ ದಾಖಲಾತಿ ಪ್ರಮುಖರಾಗಿ ವಿ.ಕೆ.ಲೋಕೇಶ್‌ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಸದಾನಂದಗೌಡರೊಂದಿಗೆ ಚರ್ಚೆ
ಪ್ರಕೃತಿ ವಿಕೋಪ ಸಂತ್ರಸ್ತರ ನಿರ್ವಹಣೆ ಸೇರಿದಂತೆ ವಿವಿಧ ವಿಚಾರಗಳ ವೈಫ‌ಲ್ಯದ ಬಗ್ಗೆ ಬಿಜೆಪಿ ಹೋರಾಟದ ಎಚ್ಚರಿಕೆ ನೀಡಿದ ಬಳಿಕ ಆಡಳಿತ ವ್ಯವಸ್ಥೆಯಲ್ಲಿ ಸ್ವಲ್ಪ ಮಟ್ಟಿಗೆ ಸುಧಾರಣೆಯಾಗಿದೆ. ಆದರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಿಲ್ಲ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಮತ್ತಷ್ಟು ಚುರುಕು ಗೊಳ್ಳದಿದ್ದಲ್ಲಿ ಹೋರಾಟ ಅನಿವಾ ರ್ಯವಾಗಲಿದೆ ಎಂದರು.

ಕೊಡಗಿನ ಜ್ವಲಂತ ಸಮ ಸ್ಯೆಗಳ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರೊಂದಿಗೆ ಜಿಲ್ಲಾ ಬಿಜೆಪಿ ಚರ್ಚಿಸಿದೆ. ಜಿಲ್ಲೆ ಹಾಗೂ ರಾಜ್ಯದ ಸಂಸದರ ವಿಶೇಷ ಸಭೆ ನಡೆಸಿ ಆಯಾ ಪ್ರದೇಶಗಳ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಸದಾನಂದಗೌಡರಿಂದ ದೊರೆತ್ತಿದೆ ಎಂದು ಭಾರತೀಶ್‌ ಹೇಳಿದರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತೆಯಂಡ ರವಿ ಕುಶಾಲಪ್ಪ, ನಾಪಂಡ ರವಿ ಕಾಳಪ್ಪ, ರಾಬಿನ್‌ ದೇವಯ್ಯ, ವಿ.ಕೆ.ಲೋಕೇಶ್‌ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಕಾಳಚಂಡ ಅಪ್ಪಣ್ಣ ಉಪಸ್ಥಿತರಿದ್ದರು.

ಸಾಥ್‌ ಆಯೇ-ದೇಶ್‌ ಬನಾಯೇ
ಈ ಬಾರಿ ಸಾಥ್‌ ಆಯೇ-ದೇಶ್‌ ಬನಾಯೇ ಎಂಬ ಘೋಷ ವಾಕ್ಯದೊಂದಿಗೆ ಸದಸ್ಯತ್ವ ಅಭಿಯಾನ ನಡೆಯಲಿದ್ದು, ರಾಜಕೀಯದ ಮೂಲಕ ದೇಶ ಸೇವೆ ಮಾಡಲಿಚ್ಛಿಸುವ ಯುವಜನರು, ಎನ್‌ಜಿಒಗಳು, ಎಲ್ಲ ವರ್ಗದ ಜನರು ಈ ಸದಸ್ಯತ್ವ ಅಭಿಯಾನದಲ್ಲಿ ಭಾಗಿಯಾಗಬಹುದಾಗಿದೆ ಎಂದು ಭಾರತೀಶ್‌ ತಿಳಿಸಿದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.