3 ದಿನ ಉತ್ತಮ ಮಳೆ ಸಾಧ್ಯತೆ
Team Udayavani, Jun 28, 2019, 5:27 AM IST
ಜೂ.14ರಂದು ಕರಾವಳಿಗೆ ಕಾಲಿಟ್ಟ ಮುಂಗಾರು ಬಳಿಕ ದುರ್ಬಲಗೊಂಡಿತ್ತು. ಇದರಿಂದಾಗಿ ಕರಾವಳಿ ಭಾಗಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿತ್ತು. ಇದೀಗ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಗುರುವಾರ ಕೊಲ್ಲೂರು, ಕುಂದಾಪುರ, ಕುಮಟಾ, ತಾಳಗುಪ್ಪ, ಮೂಡಿಗೆರೆ, ಸಿದ್ದಾಪುರ, ಆಗುಂಬೆ, ಔರಾದ್, ಕಲಬುರಗಿ, ಭಾಗಮಂಡಲ, ಸಾಗರ ಸೇರಿ ರಾಜ್ಯದ ಹಲವೆಡೆ ಮಳೆಯಾಗಿದೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕುಂದಾಪುರದಲ್ಲಿ ರಾಜ್ಯದಲ್ಲಿಯೇ ಅಧಿಕ, 8 ಸೆಂ.ಮೀ. ಮಳೆ ಸುರಿಯಿತು.
ಇದೇ ವೇಳೆ, ಮೂಡುಬಿದಿರೆ ಸಮೀಪದ ಮುಗೇರಕಲದಲ್ಲಿ ಸಿಡಿಲು ಬಡಿದು ರುಕ್ಕಯ್ಯ ಎಂಬುವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪರಿಸರದಲ್ಲಿ ಉತ್ತಮ ಮಳೆಯಾದ ಕಾರಣ ಸೌಪರ್ಣಿಕಾ ಹಾಗೂ ಕಾಶಿಹೊಳೆಗಳು ತುಂಬಿ ಹರಿಯುತ್ತಿವೆ. ಕೊಲ್ಲೂರು ದೇಗುಲಕ್ಕೆ ಆಗಮಿಸಿದ್ದ ಭಕ್ತರು ತೊಯ್ದ ಬಟ್ಟೆಯಲ್ಲೇ ಶ್ರೀ ದೇವಿಯ ದರ್ಶನ ಪಡೆಯುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ