ಬಿಜೆಪಿ ಶಾಸಕರ ಕ್ಷೇತ್ರದಲ್ಲೂ ಗ್ರಾಮ ವಾಸ್ತವ್ಯ: ದೇವೇಗೌಡ
Team Udayavani, Jun 28, 2019, 5:44 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೂ ಗ್ರಾಮವಾಸ್ತವ್ಯ ಮಾಡಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಗ್ರಾಮ ವಾಸ್ತವ್ಯ ಕೇವಲ ಜೆಡಿಎಸ್-ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಷ್ಟೇ ಅಲ್ಲ. ಬಿಜೆಪಿ ಶಾಸಕರ ಕ್ಷೇತ್ರಗಳಲ್ಲೂ ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ಹೇಳಿದ್ದಾರೆ. ಕರೇಗುಡ್ಡದಲ್ಲಿ ಕುಮಾರಸ್ವಾಮಿ ಗ್ರಾಮವಾಸ್ತವ್ಯ ವೇಳೆ ಬಿಜೆಪಿ ಶಾಸಕರು ಅಡ್ಡಿ ಪಡಿಸಿದ್ದಾರೆ.
ಮೊದಲು ನಮ್ಮ ಪಕ್ಷದಲ್ಲೇ ಇದ್ದವರು ಅವರು. ನಾನು ಆ ಬಗ್ಗೆ ಹೆಚ್ಚು ಮಾತನಾಡಲು ಹೋಗುವುದಿಲ್ಲ. ಜನರೇ ಆ ಬಗ್ಗೆ ಎಲ್ಲವನ್ನೂ ಗಮನಿಸುತ್ತಾರೆ, ಉತ್ತರವನ್ನೂ ಕೊಡುತ್ತಾರೆ ಎಂದರು. ರೇವಣ್ಣ ಗ್ರಾಮ ವಾಸ್ತವ್ಯ ಮಾಡ್ತೀನಿ ಅಂದಿದ್ದಾರೆ. ಉಪ ಮುಖ್ಯಮಂತ್ರಿ ಪರಮೇಶ್ವರ್ ಸೇರಿ ಕಾಂಗ್ರೆಸ್ನವರು ಗ್ರಾಮ ವಾಸ್ತವ್ಯಕ್ಕೆ ತೀರ್ಮಾನಿಸಿದ್ದಾರೆ. ಇದೊಂದು ಉತ್ತಮ ಕಾರ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ