ಹೈಕ ಅಭಿವೃದ್ಧಿಗೆ 10 ದಿನಗಳಲ್ಲಿ ಸಭೆ

ಬೆಂಗಳೂರಲ್ಲಿ ಶೀಘ್ರವೇ ಅಧಿಕಾರಿಗಳ ಜತೆ ಸಭೆ•ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ

Team Udayavani, Jun 28, 2019, 9:48 AM IST

28-June-1

ಕಲಬುರಗಿ: ಬಸವಕಲ್ಯಾಣದ ಉಜಳಂಬ ಗ್ರಾಮಕ್ಕೆ ತೆರಳುವ ಮಾರ್ಗದ ನಡುವೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ್‌ ಖರ್ಗೆ ಜತೆಗಿದ್ದರು.

ಕಲಬುರಗಿ: ಹಿಂದುಳಿದ ಹೈದ್ರಾಬಾದ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಶಾಶ್ವತ ಕ್ರಮ ಕೈಗೊಳ್ಳಲು 10 ದಿನದೊಳಗೆ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ರಾಯಚೂರು ಜಿಲ್ಲೆ ಕರೆಗುಡ್ಡದಿಂದ ಬಸವಕಲ್ಯಾಣಕ್ಕೆ ತೆರಳುವ ಮಾರ್ಗದ ನಡುವೆ ಕಲಬುರಗಿಯಲ್ಲಿ ಕೆಲ ಕಾಲ ತಂಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹೈದ್ರಾಬಾದ ಕರ್ನಾಟಕದ ಶಾಲೆಗಳ ಸ್ಥಿತಿಗತಿ ನೋಡಿಕೊಂಡು ಅಗತ್ಯವಿದ್ದಲ್ಲಿ ಶಾಲೆಗಳ ದುರಸ್ತಿ ಇಲ್ಲವೇ ಹೊಸ ಕಟ್ಟಡ ಹಾಗೂ ಹೆಚ್ಚುವರಿ ಕೋಣೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದರು.

ಬರೀ ಶಾಲೆಗಳನ್ನು ನಿರ್ಮಿಸುವುದಿಲ್ಲ. ಮುಖ್ಯವಾಗಿ ಹೈ.ಕ ಭಾಗದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರೆಲ್ಲರನ್ನು ಭರ್ತಿ ಮಾಡಿ ಶೈಕ್ಷಣಿಕ ಸುಧಾರಣೆಗೆ ಮುಂದಾಗಲಾಗುವುದು. ಶಾಲಾ ಸುಧಾರಣೆ ಹಾಗೂ ಅನುದಾನ ಬಳಕೆ ಕುರಿತಾಗಿ ಎಚ್ಕೆಆರ್‌ಡಿಬಿ ಕಾರ್ಯದರ್ಶಿ ಹಾಗೂ ಇತರ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ತಾವು ಕೈಗೊಳ್ಳುವ ಗ್ರಾಮ ವಾಸ್ತವ್ಯದ ಜತೆಗೆ ಇತರ ಗ್ರಾಮಗಳಲ್ಲೂ ಮೂಲ ಸೌಕರ್ಯಕ್ಕೆ ಒತ್ತು ಕೊಡಲಾಗುವುದು. ವಾಸ್ತವ್ಯ ಮಾಡುವ ಹಳ್ಳಿಗಳು ಮಾತ್ರ ಅಭಿವೃದ್ಧಿ ಹೊಂದಿದರೆ ಅದರ ಸಾರ್ಥಕತೆ ವ್ಯಾಪಕವಾಗುವುದಿಲ್ಲ. ಎಲ್ಲ ಗ್ರಾಮಗಳು ಅಭಿವೃದ್ಧಿ ಹೊಂದಬೇಕೆಂಬುದೇ ತಮ್ಮ ಉದ್ದೇಶವಾಗಿದೆ. ಹೇರೂರ ಬಿ. ಗ್ರಾಮಕ್ಕೆ ಜುಲೈ ತಿಂಗಳಲ್ಲಿ ವಾಸ್ತವ್ಯ ಹೂಡಲಾಗುವುದು. ಈಗಾಗಲೇ ಈ ಗ್ರಾಮದ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಆದೇಶ ನೀಡಲಾಗಿದೆ. ಒಟ್ಟಾರೆ ಅಂದಾಜು 500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ ಎಂದರು.

ಸಮಯ ನೀಡದ ಮಹಾ ಸಿಎಂ: ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರಿಂದ ಭೀಮಾ ನದಿಗೆ ನೀರು ಬಿಡುವುದು ಸೇರಿದಂತೆ ಇತರ ವಿಷಯಗಳ ಕುರಿತಾಗಿ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರಿಗೆ ಎರಡು ಸಲ ಸಮಯ ಕೇಳಲಾಗಿದೆ. ಆದರೆ ಅವರು ಸಮಯವನ್ನು ಕೊಟ್ಟಿಲ್ಲ ಎಂದರು.

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.