ಕಿಲ್ಲಾರಹಟ್ಟಿ ಗ್ರಾಪಂನಲ್ಲಿ ಕುಡಿಯುವ ನೀರಿಗೆ ಪರದಾಟ

2-3 ವರ್ಷಗಳಿಂದ ಹನಿ ನೀರಿಗೂ ತತ್ವಾರ 720 ಅಡಿ ಆಳ ಬೋರ್‌ವೆಲ್ ಕೊರೆದರೂ ಸಿಗುತ್ತಿಲ್ಲ ನೀರು

Team Udayavani, Jun 28, 2019, 11:37 AM IST

kopala-tdy-2..

ದೋಟಿಹಾಳ: ಮಾದರಡೊಕ್ಕಿ ತಾಂಡಾಕ್ಕೆ ಹೋಗುವ ರಸ್ತೆಯ ಪಕ್ಕದ ಗುಡ್ಡಗಳ ಇಳಿಜಾರು ಪ್ರದೇಶದಲ್ಲಿರುವ ದೊಡ್ಡ ಕಂದಕಗಳು.

ದೋಟಿಹಾಳ: ಸತತ ಬರಗಾಲ, ಕಾಯ್ದು ಕೆಂಪಾದ ಭೂಮಿ, ಕಣ್ಮರೆಯಾದ ಮಳೆರಾಯ, ಕಣ್ಣಿಗೆ ಕಾಣುವ ಮೋಡಗಳು ಮಳೆ ಸುರಿಸುತ್ತಿಲ್ಲ. ಇಲ್ಲಿ ಹನಿ ನೀರಿಗೂ ಪರದಾಟ. ಇಂತಹ ಭೀಕರ ಪರಿಸ್ಥಿತಿ ಎದುರಿಸುತ್ತಿವೆ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳು.

ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿಗಾಗಿ ಜನ ತತ್ತರಿಸುವಂತಾಗಿದೆ. ಕೆರೆ, ಬಾವಿ, ಹಳ್ಳ ಬತ್ತಿವೆ. ಅಂತರ್ಜಲ ಕುಸಿತದಿಂದ ಕೊಳೆವೆಬಾವಿಗಳಲ್ಲೂ ನೀರು ಕಾಣದಾಗಿದೆ. ಹೀಗಾಗಿ ಅನೇಕ ಹಳ್ಳಿಗಳಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ.

ಅಮರಾಪೂರ ಗ್ರಾಮಸ್ಥರು ಸದ್ಯ ಕುಡಿಯುವ ಮತ್ತು ಬಳಕೆಯ ನೀರಿಗಾಗಿ ದೂರದಲ್ಲಿರುವ ತೋಟಗಳ ಬೋರ್‌ವೆಲ್ ಅವಲಂಬಿಸಿದ್ದಾರೆ. ವಿದ್ಯುತ್‌ ಸಂಪರ್ಕವಿದ್ದಾಗ ಮಾತ್ರ ನೀರು. ರೈತರು ಹೊಲಕ್ಕೆ ಹೋದರೆ ನಮಗೆ ನೀರು ಸಿಗುವುದಿಲ್ಲ. ಆದ್ದರಿಂದ ನೀರಿಗಾಗಿ ಬೆಳಗ್ಗಿನಿಂದ ಕೆಲಸ ಬಿಟ್ಟು ಕಾಯುವಂತಾಗಿದೆ ಎಂದು ಮಹಿಳೆಯರು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಗಡಿಭಾಗದಲ್ಲಿರುವ ಕಿಲ್ಲಾರಹಟ್ಟಿ, ಕಿಲ್ಲಾರಹಟ್ಟಿ ತಾಂಡಾ, ಅಮರಾಪೂರ, ಅಮರಾಪೂರ ತಾಂಡಾ, ಕಳಮಳ್ಳಿ ತಾಂಡ, ಗರ್ಜನಾಳ ಗ್ರಾಮಗಳಲ್ಲಿ ಮೂಲ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆಯಿಂದ ಇಲ್ಲಿಯ ಜನರು ವರ್ಷಗಳಿಂದ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ನೀರಿಗಾಗಿ ಗ್ರಾಪಂ, ಜಿಪಂ, ಶಾಸಕರು ಸೇರಿದಂತೆ ಅನೇಕ ನಾಯಕರು ಹಲವು ಭಾರಿ ಬೋರ್‌ವೆಲ್ ಹಾಕಿಸಿದರು ಹನಿ ನೀರು ಭೂಮಿಯಲ್ಲಿ ಸಿಗುತ್ತಿಲ್ಲ.

ಭೌಗಳಿಕವಾಗಿ ಈ ಗ್ರಾಮಗಳು ಗುಡದ ಮೇಲೆ ಇರುವುದರಿಂದ ನೀರು ಸಿಗುವುದು ಕಷ್ಟ, ಹಿಂದೆ ಕೇಂದ್ರ ಸರಕಾರ ಒಂದು ತಂಡ ಕಿಲ್ಲಾರಹಟ್ಟಿ ಮತ್ತು ಕಳಮಳ್ಳಿ ಈ ಗ್ರಾಮಗಳಿಗೆ ಭೇಟಿ ನೀಡಿ. ಇಲ್ಲಿಯ ನೀರಿ ಅಂತರ್ಜಲ ಬತ್ತಿ ಹೋಗಿದೆ ಸುಮಾರು 700 ಅಡಿ ಆಳದಲ್ಲಿ ನೀರು ಸಿಗಬಹುದು ಎಂದು ವರದಿ ನೀಡಿದ ಕಾರಣ ಕಿಲ್ಲಾರಹಟ್ಟಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮತ್ತು ಕಳಮಳ್ಳಿ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 720 ಅಡಿ ಆಳ ಬೋರ್‌ವೆಲ್ ಹಾಕಿದರು ಅಲ್ಲಿ ಒಂದು ಹನಿ ನೀರು ಸಿಗಲಿಲ್ಲ.

ಕೆರೆ ನಿರ್ಮಾಣ ಮುಂದಾಗಬೇಕು: ಈ ಭಾಗದಲ್ಲಿ ಗುಡಗಳೇ ಇರುವುದರಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೆಚ್ಚಾಗಿ ಗುಡ್ಡಗಳ ಇಳಿಜಾರು ಪ್ರದೇಶದಲ್ಲಿ ಚೆಕ್‌ಡ್ಯಾಂ ಅಥವಾ ಸಣ್ಣ ಸಣ್ಣ ಕೆರೆಗಳನ್ನು ನಿರ್ಮಿಸಬೇಕು. ಇದರಿಂದ ಈ ಭಾಗದ ಅಂತರ್ಜಲ ಅಭಿವೃದ್ಧಿಯಾಗುವುದರ ಜೊತೆಗೆ 3-4 ಹಳ್ಳಿಗಳಿಗೆ ನೀರು ಸಿಗುತ್ತದೆ.

ಮುದ್ದಲಗುಂದಿ ಗ್ರಾಮದಿಂದ ಬರುವ ರಸ್ತೆಯ ಮಾದರಡೊಕ್ಕಿ, ಮಾದರಡೊಕ್ಕಿ ತಾಂಡಾ ಹೋಗುವ ರಸ್ತೆ ಕ್ರಾಸ್‌ ಬಳಿ ದೊಡ್ಡ ಕಂದಕಗಳು ಇದ್ದು, ಇಲ್ಲಿ ದೊಡ್ಡಪ್ರಮಾಣದ ಚೆಕ್‌ ಡ್ಯಾಂ ಅಥವಾ ಕೆರೆ ನಿರ್ಮಾಣ ಮಾಡಲು ಉತ್ತಮ ಸ್ಥಳವಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ

ಇಂದು ಜನ ಸ್ಪಂದನ: ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ಅಮರಾಪೂರ ಗ್ರಾಮದಲ್ಲಿ ಜೂ. 28ರಂದು ಶಾಸಕರು ಜನ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಾದರೂ ಗ್ರಾಮದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೋ ಕಾದು ನೋಡಬೇಕು.

 

•ಮಲ್ಲಿಕಾರ್ಜುನ ಮೆದಿಕೇರಿ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.