ಕೆಲಸ ಮಾಡಿದ್ರೂ ಮತ ಹಾಕದಿದ್ರೆ ಬೇಸರವಾಗುತ್ತೆ
Team Udayavani, Jun 29, 2019, 3:03 AM IST
ಬೆಂಗಳೂರು: “ಸಂಸದರಾಗಿ ಮಲ್ಲಿಕಾರ್ಜುನ ಖರ್ಗೆ ಮಾಡಿರುವಷ್ಟು ಕೆಲಸವನ್ನು ಬೇರೆ ಯಾರೂ ಮಾಡಿರಲಿಲ್ಲ. ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ, ಧ್ರುವ ನಾರಾಯಣ ಎಲ್ಲರೂ ಜನಪರವಾಗಿ ಕೆಲಸ ಮಾಡಿದ್ದರೂ, ಚುನಾವಣೆಯಲ್ಲಿ ಅವರನ್ನು ಜನ ಸೋಲಿಸಿರುವುದರಿಂದ ರಾಜಕೀಯವಾಗಿ ನೋವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
“ಮೋದಿಗೆ ಓಟ್ ಹಾಕಿ, ನಮ್ಮ ಬಳಿ ಮತ ಕೇಳುತ್ತೀರಾ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, “ಕಾಂಗ್ರೆಸ್ ಸಂಸದರು ಎಷ್ಟೆಲ್ಲಾ ಜನಪರ ಕೆಲಸ ಮಾಡಿ, ಹೋರಾಟ ಮಾಡಿದರೂ. ರಾಜ್ಯದಲ್ಲಿ ಕೇವಲ ಒಂದು ಸ್ಥಾನ ನೀಡಿರುವುದರಿಂದ ರಾಜಕೀಯವಾಗಿ ನೋವಾಗಿದೆ. ಜನರು ನಮ್ಮನ್ನು ಯಾಕೆ ಪರಿಗಣಿಸಲಿಲ್ಲ ಎಂಬ ಕಾರಣಕ್ಕೆ ಬೇಸರವಾಗಿದೆ’ ಎಂದು ಹೇಳಿದರು.
ಪ್ರಚೋದನಾತ್ಮಕ ಭಾಷಣ ಮಾಡಿದವರು ದೊಡ್ಡ ಅಂತರದಲ್ಲಿ ಗೆದ್ದರು. ಪ್ರಾಮಾಣಿಕವಾಗಿ ಕೆಲಸ ಮಾಡಿದರೂ ಜನರು ಯಾಕೆ ನಮ್ಮ ಪರವಾಗಿ ನಿಲ್ಲಲಿಲ್ಲ ಎಂದು ಪ್ರಶ್ನಿಸಿದ್ದಾರೆ. ನಾವು ಯಾರ ಪರ ಹೋರಾಟ ಮಾಡಿದ್ದೆವೋ ಅವರೇ ನಮಗೆ ಮತ ಹಾಕಿಲ್ಲ. ಹೀಗಾಗಿ ಸಹಜವಾಗಿ ಮಾತನಾಡುವ ಸಂದರ್ಭದಲ್ಲಿ ಆ ರೀತಿ ಕೇಳಿದ್ದಾರೆಯೇ ಹೊರತು ಮತದಾರರಿಗೆ ಅಗೌರವ ತೋರುವ ಉದ್ದೇಶದಿಂದಲ್ಲ ಎಂದು ಸಮರ್ಥಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
MUST WATCH
ಹೊಸ ಸೇರ್ಪಡೆ
Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!
Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು