ಬೈಕ್ ಕಳವು ಆರೋಪಿಗಳ ಬಂಧನ
Team Udayavani, Jun 29, 2019, 3:00 AM IST
ಬೆಂಗಳೂರು: ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ನಾಲ್ವರು ಆರೋಪಿಗಳನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಾಜಿನಗರದ ನಿವಾಸಿ ಯಾಸೀನ್ ಯಾಸರ್ ರೆಹಮಾನ್ ( 20) ಆರ್.ಟಿನಗರದ ನಿವಾಸಿ ನಿಖೀಲ್ (19), ನಾಸೀರ್ (19) ಹಿಂದೂಪುರದ ಆರೀಫ್ ಉಲ್ಲಾಖಾನ್ ( 20) ಬಂಧಿತರು. ಆರೋಪಿಗಳಿಂದ ವಿವಿಧ ಮಾದರಿಯ ಎಂಟು ಲಕ್ಷ ರೂ. ಮೌಲ್ಯದ 16 ಬೈಕ್ಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಆರೋಪಿಗಳು ಪರಸ್ಪರ ಸ್ನೇಹಿತರಾಗಿದು ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸುತ್ತಿದ್ದ ಬೈಕ್ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದರು.ಬಳಿಕ ಚಿಕ್ಕಬಳ್ಳಾಪುರ, ಆಂಧ್ರದ ಹಿಂದೂಪುರ ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಮಾರಾಟ ಮಾಡಿ ಬಂದ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದರು.
ಇತ್ತೀಚೆಗೆ ಠಾಣೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಾಸೀನ್ ಬೈಕ್ ಚಲಾಯಿಸಿಕೊಂಡು ಬಂದವನು ಪೊಲೀಸರನ್ನು ನೋಡಿದ ಕೂಡಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹೀಗಾಗಿ ಅನುಮಾನದ ಮೇರೆಗೆ ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬೈಕ್ಕಳವು ಪ್ರಕರಣಗಳ ಬಗ್ಗೆ ಬಾಯ್ಬಿಟ್ಟಿದ್ದ.
ಆರೋಪಿಗಳ ಬಂಧನದಿಂದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ 16 ಬೈಕ್ ಪ್ರಕರಣಗಳು ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ