ಅಕ್ರಮ ಗಣಿಗಾರಿಕೆ: ಮಾಲೀಕರಿಗೆ 32 ಕೋಟಿ ದಂಡ
Team Udayavani, Jun 29, 2019, 10:14 AM IST
ಕೊಪ್ಪಳ: ಪಟ್ಟಾ ಕಲ್ಲು ಗಣಿಗಾರಿಕೆ, ಗಾಯರಾಣ ಹಾಗೂ ಪರಂಪೋಕ್ನಲ್ಲ್ಲಿ ಅನಧಿಧೀಕೃತ ಗಣಿಗಾರಿಕೆ ನಡೆಸಿದ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ವಿವಿಧ ಗಣಿ ಮಾಲೀಕರಿಗೆ 32 ಕೋಟಿ ದಂಡ ವಿಧಿಸುವ ಮೂಲಕ ಜಿಲ್ಲಾಧಿಕಾರಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.
ಈ ಹಿಂದೆ ಜಿಲ್ಲೆಯಲ್ಲಿ ವಿವಿಧ ಭೂ ಮಾಲೀಕರು ತಮ್ಮ ಪಟ್ಟಾ ಜಮೀನಿನಲ್ಲಿ ಅಲಂಕಾರಿಕ ಶಿಲೆ ಪಡೆಯಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಗಣಿಗಾರಿಕೆಗೆ ಪರವಾನಗಿ ಪಡೆದು ಗಣಿಗಾರಿಕೆ ನಡೆಸಿದ್ದರು. ಆದರೆ ಲೈಸೆನ್ಸ್ ಮರು ನವೀಕರಣಕ್ಕೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದ ವೇಳೆ ಇಲಾಖೆ ಅವರ ಗಣಿಗಾರಿಕೆ ನಡೆಸಿದ ವ್ಯಾಪ್ತಿಯ ವಿಸ್ತಾರ ಅಳತೆ ಮಾಡಿದ್ದು, ನಿಯಮ ಮೀರಿ ಮಿತಿಯಾಚೆ ಅಕ್ರಮ ಗಣಿಗಾರಿಕೆ ನಡೆಸಿದ್ದರಿಂದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯಲ್ಲಿ ಕಾಯ್ದೆ ಅನುಸಾರ ದಂಡ ವಿಧಿಸಲಾಗಿದೆ.
ಪರವಾನಗಿ ಮರು ನವೀಕರಣಕ್ಕೆ 10 ಜನ ಭೂ ಮಾಲೀಕರು ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಸ್ಥಳ ತಪಾಸಣಾ ಮಾಡಿ ಜಿಲ್ಲಾಧಿಕಾರಿಗೆ ವರದಿ ಕೊಟ್ಟಿದ್ದು, 10 ಜನರಿಗೆ 4,45,37,176 ದಂಡ ವಿಧಿಸಲಾಗಿದೆ. ಇನ್ನೂ ಸರ್ಕಾರದ ಗಾಯರಾಣ ಜಮೀನಿನಲ್ಲಿ 6 ಜನರು ಅನುಮತಿ ಪಡೆದು ಕಲ್ಲು ಗಣಿಗಾರಿಕೆ ನಡೆಸಿದ್ದರು. ಈ ಪೈಕಿ ಅವರು ಇಲಾಖೆ ನಿಗದಿಪಡಿಸಿದ ವಾರ್ಷಿಕ ಮಿತಿ ಮೀರಿ ಅನಧೀಕೃತ ಗಣಿಗಾರಿಕೆ ನಡೆಸಿದ್ದರಿಂದ ಅವರಿಗೆ ನಿಯಮಾನುಸಾರ 22,32,41,700 ಕೋಟಿ ರೂ. ದಂಡ ವಿಧಿಸಲಾಗಿದೆ. ಜೊತೆಗೆ ಪರಂಪೋಕ್ನಲ್ಲಿ ಇಬ್ಬರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದು ಕಲ್ಲುಗಣಿಗಾರಿಕೆ ನಡೆಸಿದ್ದರು. ಅವರೂ ಸಹಿತ ಇಲಾಖೆ ನಿಗದಿಪಡಿಸಿದ ಮಿತಿಯನ್ನೂ ಮೀರಿ ಹೆಚ್ಚುವರಿ ಅನಧಿಧೀಕೃತ ಗಣಿಗಾರಿಕೆ ನಡೆಸಿದ್ದರಿಂದ ಅವರಿಗೂ 5,77,49,700 ದಂಡ ವಿಧಿಸಲಾಗಿದೆ.
ಗಣಿಗಾರಿಕೆ ನಡೆಸಿ ಮುಚ್ಚಿದ್ದಾರೆ: ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ಐವರು, ಗಂಗಾವತಿಯಲ್ಲಿ ಓರ್ವ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಇಬ್ಬರು ಕಲ್ಲು ಗಣಿಗಾರಿಕೆ ನಡೆಸಿದ್ದಲ್ಲದೇ, ತಾವು ಮಾಡಿದ ಗಣಿಗಾರಿಕೆಯನ್ನು ಇಲಾಖೆಗೆ ತಿಳಿಯದಂತೆ ಮಾಡಿ ಆ ಗಣಿಗಾರಿಕೆ ಸ್ಥಳದಲ್ಲಿ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತು ಸೇರಿದಂತೆ ಮಣ್ಣು ಹಾಕಿ ಮುಚ್ಚಿದ್ದಾರೆ. ಗಣಿಗಾರಿಕೆ ನಡೆಸಿ ಮಣ್ಣಿನಿಂದ ಮುಚ್ಚಿದ ಸ್ಥಳವನ್ನು 15 ದಿನಗಳೊಳಗೆ ತೆರವುಗೊಳಿಸಬೇಕು. ಗಣಿಗಾರಿಕೆ ನಡೆದ ಪ್ರಮಾಣಕ್ಕೆ ದಂಡ ಪಾವತಿಸಬೇಕೆನ್ನುವ ಎಚ್ಚರಿಕೆಯನ್ನೂ ನೀಡಲಾಗಿದೆ.
ದಂಡದ ರಾಜಸ್ವ ಪಾವತಿಸಿ: ಅನಧೀಕೃತ ಗಣಿಗಾರಿಕೆ ನಡೆಸಿದ ಪ್ರಮಾಣಕ್ಕೆ ತಕ್ಕಂತೆ ದಂಡ ಪಾವತಿಸಬೇಕು. ಇಲ್ಲದಿದ್ದರೆ ಮುಂದೆ ಪರವಾನಗಿ ನೀಡದೇ ಇರುವ ಕುರಿತು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಬಾರಿ ಹೊಸದಾಗಿ 5 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ನಾಲ್ಕು ಅರ್ಜಿಗಳಿಗೆ ಅನುಮತಿ ನೀಡಿ ಶಿಫಾರಸು ಮಾಡಲಾಗಿದೆ. ಇನ್ನುಳಿದಂತೆ ಒಂದು ಅರ್ಜಿಯನ್ನು ಮರು ಪರಿಶೀಲನೆ ಮಾಡುವ ಕುರಿತು ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಚರ್ಚೆಯಾಗಿದೆ.
ಒಟ್ಟಿನಲ್ಲಿ ಜಿಲ್ಲಾದ್ಯಂತ ಅಕ್ರಮ ಗಣಿಗಾರಿಕೆ ನಡೆದ ಬಗ್ಗೆ ಇಲಾಖೆ ಅಧಿಕಾರಿಗಳೇ ಸ್ಥಳ ತಪಾಸಣೆ ಮಾಡಿ ಟಾಸ್ಕ್ ಫೋರ್ಸ್ ಸಮಿತಿಗೆ ವರದಿ ನೀಡಿದ್ದು, ವರದಿ ಅನುಸಾರ ಅನಧೀಕೃತ ಕಲ್ಲುಗಣಿಗಾರಿಕೆ ನಡೆಸಿದ್ದಕ್ಕೆ ದಂಡ ಪಾವತಿ ಮಾಡಿದ ಬಳಿಕ ಪರವಾನಗಿ ನವೀಕರಣ ಸಮಿತಿಯಲ್ಲಿ ನಿರ್ಣಯಕ್ಕೆ ಬಂದಿದ್ದು ಈ ವಿಷಯದಲ್ಲಿ ಜಿಲ್ಲಾಧಿಕಾರಿ ದಿಟ್ಟ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಶ್ಲಾಘನೀಯ.
•ದತ್ತು ಕಮ್ಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !