ಸಭೆ ಕರೆಯದ ಅಧ್ಯಕ್ಷರಿಗೆ ಸದಸ್ಯರಿಂದ ತರಾಟೆ

6 ತಿಂಗಳ ನಂತರ ಕರೆದ ಸಾಮಾನ್ಯ ಸಭೆ ಬಹಿಷ್ಕರಿಸುವ ಬೆದರಿಕೆ

Team Udayavani, Jun 29, 2019, 10:33 AM IST

hasan-tdy-1..

ಹಾಸನ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಾಸನ: ಜಿಪಂ ಸಾಮಾನ್ಯ ಸಭೆಗಳನ್ನು ನಿಯಮಿತ ವಾಗಿ ನಡೆಸದೆ ಅಧ್ಯಕ್ಷರು ನಿರ್ಲಕ್ಷ್ಯ ತಾಳಿದ್ದಾರೆಂದು ಜಿಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಪಕ್ಷ ಭೇದ ಮರೆತು ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಜಿಪಂ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆಯೇ ಅಧ್ಯಕ್ಷರು ಸಾಮಾನ್ಯ ಸಭೆಯ ಕಾರ್ಯಸೂಚಿಗಳ ಬಗ್ಗೆ ಮಾತು ಆರಂಭಿಸುವ ಮುನ್ನವೇ ಹಿರಿಯ ಕಾಂಗ್ರೆಸ್‌ ಸದಸ್ಯ ಎ.ಡಿ.ಶೇಖರ್‌ ಅವರು ಕಳೆದ ಜ.2 ರಂದು ಸಾಮಾನ್ಯ ಸಭೆ ನಡೆದ ನಂತರ 6 ತಿಂಗಳ ನಂತರ ಸಾಮಾನ್ಯ ಸಭೆ ಕರೆದಿದ್ದೀರಿ.

ಸಭಾತ್ಯಾಗದ ಬೆದರಿಕೆ: ಸಾಮಾನ್ಯ ಸಭೆಯನ್ನು ಎರಡು ತಿಂಗಳಿಗೊಮ್ಮೆ ಕರೆಯಬೇಕು. ಆದರೆ 6 ತಿಂಗಳಿಗೊಮ್ಮೆ ಸಾಮಾನ್ಯ ಸಭೆ ಕರೆದರೆ ಸದಸ್ಯರು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಯಾರ ಬಳಿ ಹೇಳಿ ಕೊಳ್ಳಬೇಕಿತ್ತು? ಜಿಲ್ಲಾ ಪಂಚಾಯತಿ ಕಚೇರಿಗೆ ಬಂದರೆ ಸದಸ್ಯರು ಕೂರಲು ಒಂದು ಕೊಠಡಿಯಿಲ್ಲ. ಅಧಿಕಾರಿಗಳು ಸದಸ್ಯರ ಅಹವಾಲು ಕೇಳುವುದಿಲ್ಲ. ನೀವು ಅಧಿಕಾರಿಗಳನ್ನು ನಿಮ್ಮ ಕಚೇರಿಗೆ ಅಧಿಕಾರಿ ಗಳನ್ನು ಕರೆಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೀರಿ ಸದಸ್ಯರು ಏನು ಮಾಡಬೇಕು? ನಾವು ಇಂದಿನ ಸಭೆಯಲ್ಲಿ ಕೂರಬೇಕಾ? ಅಥವಾ ಸಭಾತ್ಯಾಗ ಮಾಡಬೇಕಾ ಸ್ಪಷ್ಟಪಡಿಸಡಿಸಿ ಎಂದರು.

ಫೋನ್‌ ಸ್ವೀಕರಿಸದ ಅಧಿಕಾರಿಗಳು: ಚಂದ್ರಶೇಖರ್‌ ಅವರಿಗೆ ದನಿಗೂಡಿಸಿದ ಜೆಡಿಎಸ್‌ ಸದಸ್ಯರಾದ ಪುಟ್ಟಸ್ವಾಮಿಗೌಡ, ಲೊಕೇಶ್‌, ಹನುಮೇಗೌಡ, ಮಂಜೇಗೌಡ ಅವರು, ಅಧಿಕಾರಿಗಳು ಸದಸ್ಯರ ಫೋನ್‌ ಸ್ವೀಕರಿಸಲ್ಲ. ಬರದಿಂದಾಗಿ ಜಾನುವಾರುಗಳಿಗೆ ಮೇವು, ನೀರು ಇಲ್ಲದೆ ಜನರು ಪರದಾಡು ತ್ತಿದ್ದಾರೆ. ಕ್ಷೇತ್ರದಲ್ಲಿ ಜನರಿಗೆ ನಾವು ಹೇಗೆ ಉತ್ತರ ಹೇಳಬೇಕು ಎಂದು ತರಾಟೆಗೆ ತೆಗೆದುಕೊಂಡರು.

ಯಾವಾಗ ಸಭೆ ಕರೆದಿದ್ದೀರಿ ಹೇಳಿ?: ನೀವು ಅಧ್ಯಕ್ಷ ರಾದ ನಂತರ ಯಾವಾಗ 2 ತಿಂಗಳಿಗೊಮ್ಮೆ ಸಾಮಾನ್ಯ ಸಭೆ ಕರೆದು ಸದಸ್ಯರ ಅಹವಾಲು ಕೇಳಿದ್ದೀರಿ ಹೇಳಿ ನೋಡೋಣ ಎಂದು ಜೆಡಿಎಸ್‌ ಸದಸ್ಯೆ ಉಜ್ಮಾರಿಜ್ವಿ ಅವರು ಸವಾಲು ಹಾಕಿದರೆ, ಕಾಂಗ್ರೆಸ್‌ ಸದಸ್ಯ ರೇವಣ್ಣ ಹಾಸನ ಜಿಪಂನಲ್ಲಿ ಪಂಚಾಯತ್‌ರಾಜ್‌ ಕಾಯ್ದೆಯಂತೆ ಸಭೆಗಳು ನಡೆಯುತ್ತಿಲ್ಲ. ಅಧಿಕಾರಿ ಗಳು ಸದಸ್ಯರಿಗೆ ಮಾರ್ಗದರ್ಶಕರಾಗಬೇಕಿತ್ತು. ಆದರೆ ಸಿಇಒ ಮತ್ತು ಮುಖ್ಯ ಯೋಜನಾಧಿಕಾರಿ ಯವರ ಮೇಲೆಯೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ ಎಂದರು.

ಒಡೆದಾಳುವ ನೀತಿ ನಡೆಯುತ್ತಿದೆ: ಕಾಂಗ್ರೆಸ್‌ ಸದಸ್ಯ ಮಂತರ್‌ಗೌಡ ಮಾತನಾಡಿ, ಈ ಬಾರಿಯ ಜಿಪಂಗೆ ಶೇ.90 ರಷ್ಟು ಮೊದಲ ಬಾರಿ ಆಯ್ಕೆಯಾಗಿ ಬಂದಿ ದ್ದಾರೆ. ಒಳ್ಳೆಯ ಕೆಲಸ ಮಾಡಬೇಕು ಎಂಬ ಉತ್ಸಾಹ ದಲ್ಲಿದ್ದಾರೆ. ಆದರೆ 2 ತಿಂಗಳಿಗೊಮ್ಮೆ ಸಾಮಾನ್ಯ ಸಭೆ ನಡೆಯುತ್ತದೆ. ಆ ಸಭೆಗಳಲ್ಲೂ ಸದಸ್ಯರ ನಡುವಿನ ಕಚ್ಚಾಟದಿಂದ ಅಧಿಕಾರಿಗಳಿಗೆ ಹಬ್ಬವಾಗಿದೆ. ಅಧಿಕಾರಿ ಗಳಿಂದ ಸಹಕಾರ ಸಿಗುತ್ತಿಲ್ಲ. ಜಿಲ್ಲಾ ಪಂಚಾಯತಿಯಲ್ಲಿ ಒಡೆದು ಆಳುವ ನೀತಿ ನಡೆದುಕೊಂಡು ಬರುತ್ತಿದ್ದು, ಅಧಿಕಾರಿಗಳದ್ದೇ ದರ್ಬಾರ್‌ ಆಗಿದೆ.

ಅಧಿಕಾರಿಗಳು ಸಷ್ಟನೆ ನೀಡಿ: ಕುಡಿಯುವ ನೀರಿಯ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ 18 ಕೋಟಿ ರೂ. ಅನುದಾನ ಬಂದಿದೆ. ಅದರಲ್ಲಿ 16 ಕೋಟಿ ರೂ. ವಿದ್ಯುತ್‌ ಸರಬರಾಜು ನಿಗಮಕ್ಕೆ ಪಾವತಿಯಾಗಿದೆ. ಹಾಗಾದರೆ ಕುಡಿಯುವ ನೀರಿನ ಯೋಜನೆಗಳಿಗೆಲ್ಲಿ ಹಣ ಸಿಗುತ್ತದೆ? ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಜಿಪಂ ಸದಸ್ಯರ ಹೆಸರು ಹಾಕುತ್ತಿಲ್ಲ. ಕೆಪಿಟಿಎಲ್ ಇತ್ತೀಚೆಗೆ ಹಮ್ಮಿಕೊಂಡ್ದಿ ಸಕಲೇಶಪುರ ತಾಲೂಕು ಹೆತ್ತೂರು ಮತ್ತು ಅರಕಲಗೂಡು ತಾಲೂಕು ರುದ್ರಪಟ್ಟಣ ವಿದ್ಯುತ್‌ ಉಪ ಕೇಂದ್ರಗಳ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯಲ್ಲಿ ಆಯಾಯ ಕ್ಷೇತ್ರದ ಸದಸ್ಯರ ಹೆಸರು ಹಾಕಿಲ್ಲ. ಆದರೆ ಸಭೆಗೆ ಆಹ್ವಾನಿಸಿದರು. ನಾವು ಸಭೆಗೆ ಹೋಗಬೇಕೇ? ಅಧಿಕಾರಿಗಳನ್ನು ಸಭೆಗೆ ಕರೆಸಿ ಸ್ಪಷ್ಟನೆ ಕೊಡಿಸಿ ಎಂದು ಪಟ್ಟು ಹಿಡಿದರು.

ಜೆಡಿಎಸ್‌ ಸದಸ್ಯರಾದ ಉಜ್ಮಾರಿಜ್ವಿ, ಹನುಮೇಗೌಡ ಅವರೂ ಮಂತರ್‌ಗೌಡ ಅವರ ಒತ್ತಾಯಕ್ಕೆ ದನಿ ಗೂಡಿಸಿ ಜಿಪಂ ಸದಸ್ಯರಿಗೆ ಗೌರವ ಸಿಗುತ್ತಿಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಕ್ಷ, ಉಪಾಧ್ಯಕ್ಷರು ಅಸಹಾಯಕರು: ಹಾಸನ ಜಿಪಂಯಲ್ಲಿ ಮೂರುವರೆ ವರ್ಷಗಳ ನಂತರ ಸದಸ್ಯರು ಅಸ್ತಿತ್ವದ ಬಗ್ಗೆ ಚರ್ಚೆ ಮಾಡು ತ್ತಿದ್ದೇವೆ. ಆದರೆ ಅಧ್ಯಕ್ಷರು, ಉಪಾಧ್ಯಕ್ಷರೇ ಅಸಹಾಯಕರಾಗಿ ದ್ದಾರೆ. ಅಧಿಕಾರಿಗಳು ಅಧ್ಯಕ್ಷರ ಮಾತು ಕೇಳುತ್ತಿಲ್ಲ. ಜಿಪಂ, ತಾಲೂಕು ಪಂಚಾಯತ್‌ ಗೌರವ ಕೊಡುತ್ತಿಲ್ಲ. ಶಾಸಕರಿಗೆ ಗೌರವ ಕೊಟ್ಟರೆ ಸಾಕು ಎಂಬುದು ಅಧಿಕಾರಿಗಳ ಧೋರಣೆ. ಅಧ್ಯಕ್ಷ, ಉಪಾಧ್ಯಕ್ಷರು ಅಸಹಾಕತೆಯನ್ನು ಸಭೆಯಲ್ಲಿ ಹೇಳಿ ಕೊಳ್ಳಲಿ. ನಾವು ಆಯಾಯ ಇಲಾಖೆ ಮುಂದೆ ಧರಣಿ ನಡೆಸುತ್ತೇವೆ. ಸಾಮಾನ್ಯ ಸಭೆಯನ್ನೂ ಬಹಿಷ್ಕರಿಸು ತ್ತೇವೆ. ಮೊದಲು ಅಧ್ಯಕ್ಷರು ಅಸಹಾಕತೆ ಹೇಳಿಕೊಳ್ಳಲಿ ಎಂದರು.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.