ಬಾಲ್ಯ ವಿವಾಹ ತಡೆಗಟ್ಟಲು ‘ಭಾಗ್ಯಲಕ್ಷ್ಮೀ’ ಸಹಕಾರಿ

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ

Team Udayavani, Jun 29, 2019, 2:09 PM IST

kopala-tdy-4..

ಯಲಬುರ್ಗಾ: ಪಟ್ಟಣದ ಬುದ್ಧ ಬಸವ ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಫಲಾನುಭವಿಗಳಿಗೆ ಶಾಸಕ ಹಾಲಪ್ಪ ಆಚಾರ್‌ ಭಾಗ್ಯಲಕ್ಮೀ್ಮ ಬಾಂಡ್‌ ವಿತರಿಸಿದರು.

ಯಲಬುರ್ಗಾ: ಸಾಮಾಜಿಕ ಅನಿಷ್ಟ ಪದ್ಧತಿಗಳಾದ ಭ್ರೂಣ ಹತ್ಯೆ, ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.

ಪಟ್ಟಣದ ಬುದ್ಧ, ಬಸವ, ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಾಂಡ್‌ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳಾ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಇದು ಸಹಕಾರಿಯಾಗಿದೆ. ಲಿಂಗಾನುಪಾತ ಕಾಯ್ದುಕೊಳ್ಳಲು ಈ ಯೋಜನೆ ಮಹತ್ವದ್ದಾಗಿದೆ. ಬಡ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ ಅನ್ವಯವಾಗಲಿದೆ. ಕುಟುಂಬದಲ್ಲಿ ಮಕ್ಕಳ ಮಿತಿ ಇರುವುದರಿಂದ ಜನಸಂಖ್ಯೆ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಶೇ. 50ರಷ್ಟು ಇರುವುದರಿಂದ ಸರಕಾರ ಹಲವು ಯೋಜನೆ ರೂಪಿಸಿದೆ. ಮಹಿಳೆಯರ ಆರ್ಥಿಕ ಸಬಲೀಕರಣದಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಪರಿವರ್ತನೆಯಾಗಿ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಸರಕಾರ ಮಹಿಳೆಯರಿಗಾಗಿ ವಿಶೇಷ ಯೋಜನೆ ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಹೇಳಿದರು.

ಬಿ.ಎಸ್‌.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಸೇರಿದಂತೆ ಹಲವರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಧಿಧೀಮಂತ ನಾಯಕರಾಗಿದ್ದಾರೆ. ರೈತ ನಾಯಕರಾಗಿ ಕೃಷಿಕರ, ಬಡವರ ನಾಡಿ ಮಿಡಿತಕ್ಕೆ ಅನುಗುಣವಾಗಿ ಒಳ್ಳೆಯ ಕಾರ್ಯಗಳನ್ನು ಕೈಗೊಂಡಿದ್ದರು. ಸಮಾಜದ ಎಲ್ಲಾ ವರ್ಗದವರನ್ನೂ ಅರ್ಥೈಸಿಕೊಂಡು ಮುನ್ನಡೆಸಿದ್ದರು ಎಂದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಮ್ಮ ಕಾರನೂರು ಪ್ರಾಸ್ತವಿಕ ಮಾತನಾಡಿದರು. ಒಟ್ಟು 530 ಫಲಾನುಭವಿಗಳಿಗೆ ಬಾಂಡ್‌ ವಿತರಣೆ ಮಾಡಲಾಯಿತು.

ಜಿಪಂ ಸದಸ್ಯರಾದ ಗಂಗಮ್ಮ ಗುಳಗಣ್ಣನವರ, ಪ್ರೇಮಾ ಕುಡಗುಂಟಿ, ತಾಪಂ ಉಪಾಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ, ಸದಸ್ಯರಾದ ಶರಣಪ್ಪ ಈಳಿಗೇರ, ರಾಮಚಂದ್ರ ಹೊಸಮನಿ, ಶಂಕರಗೌಡ ಬೇವೂರು, ಜಗನ್ನಾಥಗೌಡ ಪಾಟೀಲ, ದುರಗಮ್ಮ ಗಾದಿ, ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್. ಪೊಲೀಸಪಾಟೀಲ, ವೀರಣ್ಣ ಹುಬ್ಬಳ್ಳಿ, ಈರಪ್ಪ ಕುಡಗುಂಟಿ, ಹಂಚ್ಯಾಳಪ್ಪ ತಳವಾರ, ಶಿವಶಂಕರರಾವ್‌ ದೇಸಾಯಿ, ಶಕುಂತಲಾದೇವಿ ಪಾಟೀಲ, ಶಿವಲೀಲಾ ದಳವಾಯಿ, ತಹಶೀಲ್ದಾರ್‌ ರಮೇಶ ಅಳವಂಡಿಕರ್‌, ಡಿ. ಮೋಹನ್‌, ಶರಣಪ್ಪ ವಟಗಲ್, ಮಹೇಶ ನಿಡಶೇಷಿ, ಲಲಿತಾ ನಾಯಕ್‌, ಮಾಧವಿ ವೈದ್ಯ, ರಾಜೇಶ್ವರಿ, ನಜ್ಮಾಬೇಗಂ, ಹಾಲೇಶ ಇತರರಿದ್ದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.