ನಿದ್ದೆಗೆಟ್ಟರೂ ಸಿಗ್ತಿಲ್ಲ ಆಧಾರ್ ಕಾರ್ಡ್
•ನಿತ್ಯ 40 ಜನರಿಗೆ ಮಾತ್ರ ಅವಕಾಶ•ಬೆಳಗ್ಗೆ ನೀಡುವ ಟೋಕನ್ಗೆ ರಾತ್ರಿಯೇ ಪಾಳಿ
Team Udayavani, Jun 29, 2019, 2:14 PM IST
ಸಿದ್ದಾಪುರ: ಆಧಾರ್ ಕಾರ್ಡ್ ಪಡೆಯಲು ಕನಿಷ್ಟ ಐದಾರು ದಿನ ಕೆಲಸ ಬಿಟ್ಟು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಮತ್ತು ತಾಯಂದಿರು ಪ್ರತಿನಿತ್ಯ ಕಚೇರಿಯ ಮುಂದೆ ನಿಂತು, ನಿಂತು ಹೈರಾಣಾಗುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನಸಾಮಾನ್ಯರ ಸಮಸ್ಯೆ ಬಗ್ಗೆ ಚಿಂತಿಸುತ್ತಿಲ್ಲ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸಿದ್ದಾಪುರ ಸೇರಿದಂತೆ ಇತರೆ ಹೋಬಳಿ ವ್ಯಾಪ್ತಿಯ ಗ್ರಾಮಗಳ ಜನತೆ ನಿತ್ಯ ಸಿದ್ದಾಪುರ ನಾಡ ತಹಶೀಲ್ದಾರ್ ಕಚೇರಿ ಮುಂದೆ ನಿದ್ದೆಗೆಟ್ಟು ಕಾಯುವ ದುಸ್ಥಿತಿ ಎದುರಾಗಿದೆ. ಜೂನ್ ತಿಂಗಳು ಆಗಿರುವುದರಿಂದ ವಿದ್ಯಾರ್ಥಿಗಳು, ಮಕ್ಕಳು, ಮಹಿಳೆಯರು, ರೈತರು ವಿವಿಧ ಸೌಲಭ್ಯಗಳನ್ನು ಪಡೆಯಲು ಆಧಾರ್ ಅವಶ್ಯಕತೆ ಇರುವುದರಿಂದ ಜನ ಸಂದಣಿ ಹೆಚ್ಚಿದೆ.
ಟೋಕನ್ ವ್ಯವಸ್ಥೆ: ಇಲ್ಲಿಯ ನಾಡ ತಹಶೀಲ್ದಾರ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಪಡೆಯಲು ಒಂದೇ ಸಿಸ್ಟಮ್ ಇರುವುದರಿಂದ ನೂಕು ನುಗ್ಗಲು ಮತ್ತು ಗಲಾಟೆ ಆಗಬಾರದೆಂಬ ಉದ್ದೇಶದಿಂದ ಇಲ್ಲಿಯ ನಾಡ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಟೋಕನ್ ವ್ಯವಸ್ಥೆ ಮಾಡಿದ್ದು ಒಂದು ದಿನಕ್ಕೆ 40 ಟೋಕನ್ ಮಾತ್ರ ನೀಡುತ್ತಾರೆ.
ಸರದಿ: ಈ ಟೋಕನ್ ಪಡೆದುಕೊಳ್ಳಲು ನಿತ್ಯ ನೂರಕ್ಕಿಂತ ಹೆಚ್ಚಿನ ಜನ ಸರದಿಯಲ್ಲಿ ನಿಲ್ಲುತ್ತಾರೆ. ಸಿದ್ದಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನತೆ ನಸುಕಿನಲ್ಲೇ ಬರುತ್ತಾರೆ. ಇನ್ನೂ ಕೆಲವರು ದೂರದಿಂದ ಮಕ್ಕಳನ್ನು ಹೊತ್ತುಕೊಂಡು ರಾತ್ರೋ ರಾತ್ರಿ 8-10 ಕಿ.ಮೀ. ನಡೆದುಕೊಂಡು ಬಂದು ಸರದಿಯಲ್ಲಿ ನಿಲ್ಲುವ ಅನಿವಾರ್ಯತೆ ಸೃಷ್ಟಿಯಾಗಿದೆ.
ನಿತ್ಯ ನೂರಕ್ಕೂ ಹೆಚ್ಚು ಜನ ಬರುತ್ತಾರೆ. ಆದರೆ 40 ಜನಕ್ಕೆ ಮಾತ್ರ ಟೋಕನ್ ನಿಡುವುದರಿಂದ ಉಳಿದವರು ಮತ್ತೆ ರಾತ್ರಿ ಸರದಿಯಲ್ಲಿ ನಿಲ್ಲಬೇಕು. ಕೆಲವು ಬಾರಿ ಸರ್ವರ್, ವಿದ್ಯುತ್ ತೊಂದರೆ, ತಾಂತ್ರಿಕ ತೊಂದರೆ ಎದುರಾದಾಗ ಟೋಕನ್ ಪಡೆದುಕೊಂಡರೂ ಆಧಾರ್ ಕಾರ್ಡ್ ಪಡೆದುಕೊಳ್ಳಲು ಆಗದೇ ವ್ಯವಸ್ಥೆ ಬಗ್ಗೆ ಹಿಡಿಶಾಪ ಹಾಕುತ್ತಾ ವಾಪಾಸ್ಸಾಗುತ್ತಾರೆ.
•ಸಿದ್ದನಗೌಡ ಹೊಸಮನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ