2ರಂದು ಡಾ| ಫ‌.ಗು. ಹಳಕಟ್ಟಿ ಜಯಂತಿ

ವಚನ ಪಿತಾಮಹನ ಸ್ಮರಣೆಗೆ ಹಲವು ಕಾರ್ಯಕ್ರಮ

Team Udayavani, Jun 29, 2019, 2:55 PM IST

29-June-24

ವಿಜಯಪುರ: ವಚನ ಪಿತಾಮಹ ಡಾ| ಫ‌.ಗು. ಹಳಕಟ್ಟಿ ಅವರು ಸ್ಥಾಪಿಸಿರುವ ಶತಮಾನ ಕಂಡಿರುವ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ನಿಂದ ಜು. 2ರಂದು ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಅವರ 139ನೇ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಹರ್ಷಗೌಡ ಪಾಟೀಲ ಹೇಳಿದರು.

ಶುಕ್ರವಾರ ಬ್ಯಾಂಕ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರದ ಶಿವಾನುಭವ ಮಂಟಪದಲ್ಲಿ ಡಾ| ಫ.ಗು. ಹಳಕಟ್ಟಿ ಜಯಂತಿ ಸಮಾರಂಭ ಜರುಗಲಿದೆ. ಚಿತ್ತರಗಿಯ ಡಾ| ಬಸವರಾಜ ಶ್ರೀಗಳು ಸಾನ್ನಿಧ್ಯ ವಹಿಸಲಿದ್ದಾರೆ. ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಗೌರವ ಸಲಹೆಗಾರ ಡಾ| ಗೊ.ರೂ. ಚನ್ನಬಸಪ್ಪ ಆಗಮಿಸಲಿದ್ದು, ಡಾ| ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ| ಎಂ.ಎಸ್‌. ಮದಭಾವಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಶರಣ ಸಾಹಿತ್ಯ ಸಂಶೋಧಕ ಬೆಂಗಳೂರಿನ ಅಶೋಕ ದೊಮ್ಮಲೂರು ಡಾ| ಫ.ಗು. ಹಳಕಟ್ಟಿ ಅವರ ಸಾಮಾಜಿಕ ಕಾರ್ಯಗಳು ಕುರಿತು ಉಪನ್ಯಾಸ ಮಂಡಿಸಲಿದ್ದಾರೆ ಎಂದು ವಿವರಿಸಿದರು.

ಬರದ ನಾಡು ವಿಜಯಪುರ ಜಿಲ್ಲೆಗೆ ವಚನ ಪಿತಾಮಹ ಡಾ| ಫ‌.ಗು. ಹಳಕಟ್ಟಿ ಅವರ ಕೊಡುಗೆ ಅನನ್ಯ, ಅನುಪಮ. ವಚನ ಸಾಹಿತ್ಯಕ್ಕೆ ಮಾತ್ರವಲ್ಲ ಬ್ಯಾಂಕ್‌ ಸಂಸ್ಥಾಪಕರೂ ಆಗಿರುವ ಕಾರಣ ರಾವ್‌ ಬಹಾದ್ದೂರ್‌ ಡಾ| ಫ.ಗು. ಹಳಕಟ್ಟಿ ಅವರ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ವಚನ ಪಿತಾಮಹ ಡಾ| ಹಳಕಟ್ಟಿ ಅವರು ಸಿದ್ದೇಶ್ವರ ಬ್ಯಾಂಕ್‌ ಸ್ಥಾಪಿಸುವ ಮೂಲಕ ಈ ಭಾಗವನ್ನು ಆರ್ಥಿಕವಾಗಿ ಮೇಲೆತ್ತಲು ಅಪರಿಮಿತ ಕೊಡುಗೆ ನೀಡಿದ್ದಾರೆ. ನಾಡು ಕಟ್ಟುವಲ್ಲಿ ಶತಮಾನದ ಹಿಂದೆಯೇ ಕೈಗೊಂಡ ಹಲವು ಬಗೆಯ ಪರಿಶ್ರಮದ ಕುರಿತು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದೆ. ಇದಕ್ಕಾಗಿ ವಚನ ಪಿತಾಮಹನ ಬಹುಮುಖ ವ್ಯಕ್ತಿತ್ವದ ಬಗ್ಗೆ ಚರ್ಚೆ, ಲೇಖನ ಸ್ಪರ್ಧೆ, ವಿಚಾರ ಸಂಕಿರಣ ಸೇರಿದಂತೆ ಹಲವು ಬಗೆಯ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಉದಾತ್ತ ಸೇವೆ, ಧ್ಯೇಯ ಹಾಗೂ ಚಿಂತನೆಗಳನ್ನು ಮನವರಿಕೆ ಮಾಡಿಕೊಡಲು ಕಾರ್ಯಕ್ರಮ ಯೋಜಿಸಲಾಗಿದೆ ಎಂದರು.

ಡಾ| ಫ.ಗು. ಹಳಕಟ್ಟಿ ಅವರು 1912ರಲ್ಲಿ 2,500 ರೂ. ಷೇರು ಬಂಡವಾಳದೊಂದಿಗೆ ಸ್ಥಾಪಿಸಿರುವ ನಮ್ಮ ಸಿದ್ದೇಶ್ವರ ಬ್ಯಾಂಕ್‌ ಇಂದು ಹೆಮ್ಮರವಾಗಿ ಬೆಳೆದಿದೆ. ಜನರಿಗೆ ಆರ್ಥಿಕ ಸಹಾಯ ಕಲ್ಪಿಸಬೇಕು ಎಂಬ ಡಾ| ಹಳಕಟ್ಟಿ ಅವರ ನಿಸ್ವಾರ್ಥ ಸೇವಾ ಮನೋಭಾವದಿಂದ ಅವರ ಆದರ್ಶಗಳ ಹಾದಿಯಲ್ಲಿ ನಮ್ಮ ಬ್ಯಾಂಕ್‌ ಸಾಗುತ್ತಿದೆ ಎಂದರು.

ಇದಕ್ಕಾಗಿ ಶರಣ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಡಾ| ಫ‌.ಗು. ಹಳಕಟ್ಟಿ ಅವರ ಚಿಂತನೆಗಳನ್ನು ನಾಡಿನೆಲ್ಲೆಡೆ ನಿರಂತರ ಪಸರಿಸಲು ಪ್ರತಿ ಜಿಲ್ಲೆ-ತಾಲೂಕಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ದತ್ತಿ ನಿಧಿ ಸ್ಥಾಪಿಸಲು, ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಸ್ಥಾಪನೆಯಂಥ ಹಲವು ರಚನಾತ್ಮಕ ಕಾರ್ಯಕ್ರಮಗಳನ್ನು ಬರುವ ವರ್ಷದಿಂದ ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಇದಲ್ಲದೇ ಶಾಲಾ-ಕಾಲೇಜು ಪಠ್ಯದಲ್ಲಿ ಡಾ| ಹಳಕಟ್ಟಿ ಅವರ ನಿಸ್ವಾರ್ಥ ಸೇವೆ ಕುರಿತು ಪಠ್ಯ ಅಳವಡಿಸುವಂತೆ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಡಾ| ಫ‌.ಗು. ಹಳಕಟ್ಟಿ ಅವರ ಹೆಸರನ್ನು ಇನ್ನೂ ಅವಿಸ್ಮರಣೀಯವಾಗಿ ಮಾಡಲು ಅವರಿಂದಲೇ ಸ್ಥಾಪಿತವಾಗಿ ಶತಮಾನ ಕಂಡಿರುವ ಬಿಎಲ್ಡಿಇ ಸಂಸ್ಥೆ ಹಾಗೂ ಸಿದ್ದೇಶ್ವರ ಸಂಸ್ಥೆಗಳ ಹಾಲಿ ಮುಖ್ಯಸ್ಥರು ಹಾಗೂ ಅಡಳಿತ ಮಂಡಳಿ ಜೊತೆ ಚರ್ಚಿಸಿ ಬೃಹತ್‌ ದತ್ತಿನಿಧಿ ಸ್ಥಾಪನೆ ಮುಂದಾಗಲಿದ್ದೇವೆ ಎಂದು ವಿವರಿಸಿದರು.

ಸಿದ್ದೇಶ್ವರ ಬ್ಯಾಂಕ್‌ ಉಪಾಧ್ಯಕ್ಷ ರಮೇಶ ಬಿದನೂರ, ನಿರ್ದೇಶಕರಾದ ಶಾಂತಪ್ಪಣ್ಣ ಜತ್ತಿ, ರವೀಂದ್ರ ಬಿಜ್ಜರಗಿ ಇದ್ದರು.

ಡಾ| ಫ.ಗು. ಹಳಕಟ್ಟಿ ಅವರು 1912ರಲ್ಲಿ 2,500 ರೂ. ಷೇರು ಬಂಡವಾಳದೊಂದಿಗೆ ಸ್ಥಾಪಿಸಿರುವ ನಮ್ಮ ಸಿದ್ದೇಶ್ವರ ಬ್ಯಾಂಕ್‌ ಇಂದು ಹೆಮ್ಮರವಾಗಿ ಬೆಳೆದಿದ್ದು ಅವರ ಆದರ್ಶಗಳ ಹಾದಿಯಲ್ಲಿ ನಮ್ಮ ಬ್ಯಾಂಕ್‌ ಸಾಗುತ್ತಿದೆ.
ಹರ್ಷಗೌಡ ಪಾಟೀಲ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.