ತಿಂಗಳಾದರೂ ಕಡಲಿಗಿಳಿಯದ ನಾಡದೋಣಿಗಳು

ಚುರುಕಾಗದ ಮುಂಗಾರು, ಸಮುದ್ರದಲ್ಲೇಳದ ತೂಫಾನ್‌

Team Udayavani, Jun 30, 2019, 5:09 AM IST

doni

ಮಲ್ಪೆ: ನಾಡದೋಣಿ ಮೀನುಗಾರಿಕೆ ಆರಂಭವಾಗಿ ತಿಂಗಳು ಕಳೆದರೂ ಇನ್ನೂ ಸಂಪೂರ್ಣವಾಗಿ ದೋಣಿಗಳು ಸಮುದ್ರಕ್ಕೆ ಇಳಿದಿಲ್ಲ. ಕರಾವಳಿಯಾದ್ಯಂತ ಸಮುದ್ರದಲ್ಲಿ ಮೀನುಗಾರಿಕೆಗೆ ಪೂರಕವಾದ ವಾತಾವರಣ ಇಲ್ಲದೆ ಮೀನುಗಾರರು ಕೈ ಚೆಲ್ಲಿ ಕುಳಿತಿದ್ದಾರೆ.

ಕಡಲಾಳದಲ್ಲಿ ತೂಫಾನ್‌ ಎದ್ದು ನೀರಿನ ಬದಲಾವಣೆಯಿಂದಾಗಿ ವಿವಿಧ ಜಾತಿಯ ಮೀನುಗಳು ಕಡಲತೀರದತ್ತ ಧಾವಿಸುವುದು ವಾಡಿಕೆ. ಈ ಬಾರಿ ವಾಯು ಚಂಡಮಾರುತದ ಪ್ರಭಾವ ದಿಂದ ಉಂಟಾದ ತೂಫಾನ್‌ ಆಗಿದ್ದು ಬಿಟ್ಟರೆ ಮಳೆಗಾಲದಲ್ಲಿ ಉಂಟಾಗುವ ಸಾಮಾನ್ಯ ತೂಫಾನ್‌ ಏಳದಿರುವುದು ಮೀನುಗಾರರಲ್ಲಿ ನಿರಾಶೆ ಮೂಡಿಸಿದೆ.

ಒಂದು ದಿನ ಅಲ್ಪಸ್ವಲ್ಪ ಬೂತಾಯಿ

ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಬುಧವಾರ ದಂದು ಸುಮಾರು 20ರಷ್ಟು ನಾಡದೋಣಿಗಳು ಸಮುದ್ರಕ್ಕೆ ತೆರಳಿದ್ದು, ಅಲ್ಪಸ್ವಲ್ಪ ಬೂತಾಯಿ ಮೀನು ಲಭಿಸಿದೆ. ಅನಂತರದ ದಿನಗಳಲ್ಲಿ ಸಮುದ್ರದಲ್ಲಿ ಮೀನು ಲಭ್ಯತೆ ಲಕ್ಷಣ ಕಂಡು ಬಂದಿಲ್ಲ. ಎರಡು ದಿನದಿಂದ ಒಂದೇ ಸವನೆ ಬೀಸುತ್ತಿರುವ ಗಾಳಿಯಿಂದಾಗಿಯೂ ಮೀನುಗಾರಿಕೆಗೆ ತೆರಳಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಮಳೆ ಚುರುಕುಗೊಂಡಿಲ್ಲ.

ಜೂನ್‌ ತಿಂಗಳಿನಿಂದ ನಾಡದೋಣಿ ಮೀನುಗಾರಿಕೆಗೆ ಅವಕಾಶವಿದ್ದರೂ ಇದೀಗ ಒಂದು ತಿಂಗಳು ಪೂರ್ಣ ಕೈ ತಪ್ಪಿದೆ. ಆ. 1ರಿಂದ ಯಾಂತ್ರಿಕ ಬೋಟ್‌ಗಳು ಸಮುದ್ರಕ್ಕೆ ಇಳಿಯಲಿವೆ. ಕಡಲು ಪ್ರಕ್ಷುಬ್ಧವಾಗಿದ್ದರಿಂದ ಕಳೆದ ವರ್ಷವೂ ಕೂಡ ಈ ಹೊತ್ತಲ್ಲಿ ನಾಡದೋಣಿಗಳಿಗೆ ಕಡಲಿಗಿಳಿಯಲು ಸಾಧ್ಯವಾಗಿರಲಿಲ್ಲ. ಎರಡು ತಿಂಗಳ ಅವಧಿಯ ಕೊನೆಯ 10 ದಿವಸದಲ್ಲಿ ಮೀನು ದೊರಕಿತ್ತು. ಸಾಂಪ್ರದಾಯಿಕ ಮೀನುಗಾರಿಕೆಯಲ್ಲಿ ಮಳೆಗೆ ಹೆಚ್ಚು ಪ್ರಾಧಾನ್ಯ. ಜೋರಾದ ಮಳೆಗೆ ನೆರೆ ನೀರು ಬಂದು ಸಮುದ್ರ ಸೇರಬೇಕು. ಸಿಹಿ ನೀರು ಸಮುದ್ರ ಸೇರಿದಾಗ ತಮಗೆ ಆಹಾರ ಸಿಗಬಹುದು ಎಂದು ಮೀನುಗಳು ಸಮುದ್ರ ತೀರ ಪ್ರದೇಶಕ್ಕೆ ಬರುತ್ತವೆ. ಇದರಿಂದ ನಾಡದೋಣಿ ಮೀನುಗಾರರಿಗೆ ಅನುಕೂಲ. ಈ ಬಾರಿಯ ಮಳೆ ತೀರ ಕಡಿಮೆಯಾದ್ದರಿಂದ ಇದುವರೆಗೂ ಅಂತಹ ವಾತಾವರಣವೇ ಸೃಷ್ಟಿಯಾಗಿಲ್ಲ ಎನ್ನುತ್ತಾರೆ ಮೀನುಗಾರರು.

ಬ್ಯಾಂಕ್‌ ಸಾಲ ಸಿಗುತ್ತಿಲ್ಲ

ಮಳೆಗಾಲದ ಅಲ್ಪಾವಧಿಯ ನಾಡ ದೋಣಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಾಲ ಯೋಜನೆ ಸಿಗುವುದಿಲ್ಲ. ಹಾಗಾಗಿ ಬಹುತೇಕ ದೋಣಿಯವರು ಇನ್ನಿತರ ಮೂಲಗಳಿಂದ ಸಾಲ ಪಡೆದೇ ಮೀನುಗಾರಿಕೆ ನಡೆಸುತ್ತಾರೆ. ನಿಗದಿತ ದಿನದಂದು ವಾಪಸ್‌ ಕೊಡುವುದು ಕಷ್ಟವಾಗುತ್ತದೆ ಎನ್ನುತ್ತಾರೆ ಮೀನುಗಾರರು.

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.