ಮಡಿಕೇರಿ: ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ


Team Udayavani, Jun 30, 2019, 5:07 AM IST

pratibatane

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ದಲಿತರು, ಆದಿವಾಸಿಗಳು, ಬಡ ರೈತರು, ಕೂಲಿ ಕಾರ್ಮಿಕರಿಗೆ ಕೃಷಿಭೂಮಿ, ನಿವೇಶನದ ಹಕ್ಕುಪತ್ರ ಹಾಗೂ ಮೂಲಭೂತ ಸೌಕರ್ಯಗಳು ಮತ್ತು ಉದ್ಯೋಗ ದೊರಕಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಕೊಡಗು ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್‌.ನಿರ್ವಾಣಪ್ಪ, ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್‌ ಕಂದೆಗಾಲ್, ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಸಣ್ಣಪ್ಪ ಅವರುಗಳ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಗಾಂಧಿ ಮಂಟಪದ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ದಿಡ್ಡಳ್ಳಿ ಆದಿವಾಸಿಗಳನ್ನು ಬಸವನಹ‌ಳ್ಳಿ ಬ್ಯಾಡಗೊಟ್ಟಗಳಿಗೆ ಸ್ಥಳಾಂತರಿಸಿದ್ದು, ಇಲ್ಲಿರುವವರಿಗೆ ಅಗತ್ಯ ಕೆಲಸವಿಲ್ಲದೆ ಆಹಾರಕ್ಕೆ ಪರದಾಡುವಂತಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಕಡು ಬಡವರು, ಸರಕಾರದ ಪರಿಹಾರ, ಮನೆ, ಮೂಲ ಸೌಕರ್ಯಗಳಿಂದ ವಂಚನೆಗೆ ಒಳಗಾಗಿದ್ದಾರೆ. ಸಂಘ‌ಟನೆಯ ಮೂಲಕ ಬಡವರ್ಗದ ಮಂದಿಗೆ ನಿವೇಶನ, ಭೂಮಿ, ಹಕ್ಕುಪತ್ರ ನೀಡುವಂತೆ ಸಲ್ಲಿಸಿದ ಮನವಿಗೆ ನ್ಯಾಯ ದೊರಕಿಲ್ಲ. ಆದ್ದರಿಂದ ಜಿಲ್ಲಾಡಳಿತ ತಮ್ಮ ಬೇಡಿಕೆಗಳಿಗೆ ತಿಂಗಳ ಒಳಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯಿಸಿದರು.

ಬೇಡಿಕೆಗಳು

ಕುಶಾಲನಗರ ಹೋಬಳಿ 6ನೇ ಹೊಸಕೋಟೆಯ ಅಂದಾನಿಪುರದಲ್ಲಿರುವ 70 ಬಡ ಮತ್ತು ದಲಿತ ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಪೊಲೀಸ್‌ ಇಲಾಖೆಗೆ ಸೇರಿಸಿರುವುದನ್ನು ರದ್ದುಗೊಳಿಸಿ, ಸಾಗುವಳಿ ಮಾಡಿರುವ ಬಡವರಿಗೆ ಮತ್ತು ದಲಿತರಿಗೆ ಹಕ್ಕುಪತ್ರ ನೀಡಬೇಕು, ದಿಡ್ಡಳ್ಳಿಯಿಂದ ಬಸವನಹಳ್ಳಿ ಬ್ಯಾಡಗೊಟ್ಟಕ್ಕೆ ಸ್ಥಳಾಂತರಿಸಿರುವ ಆದಿವಾಸಿಗಳಿಗೆ ಉದ್ಯೋಗ ದೊರಕಿ ಸಿಕೊಡಬೇಕು, ತಲಾ 3 ಏಕರೆ ಕೃಷಿ ಭೂಮಿ ನೀಡಬೇಕು, ನಾಗರಹೊಳೆ ಅರಣ್ಯದ ಗೋಣಿಗದ್ದೆ ಕೊಡಂಗೆ ಹಾಡಿಯ ಜನರಿಗೆ ಹಕ್ಕುಪತ್ರ ನೀಡುವುದರೊಂದಿಗೆ ಮೂಲಭೂತ ಸೌಕರ್ಯದೊಂದಿಗೆ ಅರಣ್ಯದಂಚಿನಲ್ಲಿ ಭೂಮಿ ನೀಡಿ ಹಕ್ಕು ಪತ್ರ ನೀಡಬೇಕು, ಜಿಲ್ಲೆಯಲ್ಲಿರುವ ಸಿ ಮತ್ತು ಡಿ ದರ್ಜೆಯ ಭೂಮಿಯನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ದಲಿತ ಆದಿವಾಸಿಗಳಿಗೆ, ಭೂಹೀನ ಬಡವರಿಗೆ ತಲಾ 3 ಏಕರೆ ಹಂಚಬೇಕು, ಸೋಮವಾರಪೇಟೆಯ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿಯಲ್ಲಿ ಇರುವ ಕುಟುಂಬ ಹಾಗೂ ದಲಿತ ಕಾರ್ಮಿಕರಿಗೆ ಸರ್ವೆ ನಂ. 56/1 ರಲ್ಲಿ 3 ಏಕರೆ ನಿವೇಶನ ಹಂಚಬೇಕು ಮತ್ತು ಅಂಬೇಡ್ಕರ್‌ ಭವನಕ್ಕೆ 50 ಸೆಂಟ್ ಜಾಗ ನೀಡಬೇಕು, ಕರ್ನಾಟಕ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎಚ್. ಜೆ. ಪ್ರಕಾಶ್‌, ಸದಸ್ಯ ಜಯಣ್ಣ, ಸಿಪಿಐಎಂಎಲ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್‌.ಆರ್‌. ಮಂಜುನಾಥ್‌ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ವಿಲೇವಾರಿ ಆಗಿಲ್ಲ ಜಿಲ್ಲೆಯ ಹಲವು ಭಾಗಗಳಲ್ಲಿ ದಲಿತರು, ಆದಿವಾಸಿಗಳೂ ಬಡ ರೈತರ ಕೂಲಿ ಕಾರ್ಮಿಕರು ಸ್ವಂತ ಭೂಮಿ ಇಲ್ಲದೆ ಉದ್ಯೋಗವಿಲ್ಲದೆ, ಸ್ವಂತ ನಿವೇಶನ ಇಲ್ಲದೇ ಪರದಾಡುತ್ತಿದ್ದು, ಇನ್ನು ಹಲವರು ಒಂದು, ಎರಡು ಏಕರೆ ಸರಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸುತ್ತ ಇದ್ದರೂ, ಬಡವರ ಅರ್ಜಿಗಳು ವಿಲೇವಾರಿ ಆಗದೆ ಮೂಲೆ ಸೇರಿವೆಯೆಂದು ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ್‌ ಕಂದೆಗಲ್ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.