ಸಾಹಿತ್ಯದಲ್ಲಿ ಎಡ-ಬಲ ಎಂಬುದಿಲ್ಲ


Team Udayavani, Jun 30, 2019, 3:06 AM IST

sahitya

ಬೆಂಗಳೂರು: ಸಾಹಿತ್ಯದಲ್ಲಿ ಎಡ-ಬಲ ಎಂಬುವುದಿಲ್ಲ. ಎಡಬಲದ ಲೇಪನವು ಸಾಹಿತ್ಯವಲಯಕ್ಕೆ ಒಳ್ಳೆಯದಲ್ಲ ಎಂದು ಲೇಖಕ ಡಾ.ಮೊಗಳ್ಳಿ ಗಣೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಟ್ರಸ್ಟ್‌, ಶನಿವಾರ ಭಾರತೀಯ ವಿದ್ಯಾಭನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಸಾಲಿನ “ಮಾಸ್ತಿ ಪುರಸ್ಕಾರ’ ಸ್ವೀಕರಿಸಿ ಮಾತನಾಡಿದ ಅವರು, ತಾಯಿಯ ಎದೆ ಹಾಲಿಗೆ ಎಡಬಲ ಎಂಬುವುದಿಲ್ಲವೋ ಹಾಗೇ ಸಾಹಿತ್ಯ ಲೋಕದಲ್ಲೂ ಎಡ ಪಂಥೀಯ ಮತ್ತು ಬಲ ಪಂಥೀಯ ಎಂಬುವುದಿಲ್ಲ ಎಂದು ಹೇಳಿದರು.

ಯಾವುದೇ ಲೇಖಕನಾಗಿರಲಿ ತನ್ನ ಬರಹದ ಮೂಲಕ ಮನುಷ್ಯತ್ವವನ್ನು ಓದುಗರಲ್ಲಿ ಬಿತ್ತಬೇಕು. ಮಾಸ್ತಿ ವೆಂಕಟೇಶ ಅಯ್ಯಂಗಾರ್‌, ರಾಷ್ಟ್ರಕವಿ ಕುವೆಂಪು, ಪೂರ್ಣ ಚಂದ್ರ ತೇಜಸ್ವಿ, ಲಂಕೇಶ್‌ ಸೇರಿದಂತೆ ಹಲವು ಸಾಹಿತಿಗಳು ತಮ್ಮ ಬರಹದ ಮೂಲಕ ಮನುಷ್ಯತ್ವವನ್ನು ಬಿತ್ತಿದ್ದಾರೆ. ಆ ದಾರಿಯಲ್ಲಿ ಸಾಹಿತ್ಯ ವಲಯ ಸಾಗಬೇಕಾಗಿದೆ ಎಂದರು.

ಕನ್ನಡ ಸಾಹಿತ್ಯಕ್ಕೆ ಹಿರಿಯ ಸಾಹಿತಿಗಳು ಸುಭದ್ರವಾದ ನೆಲೆಯನ್ನು ಹಾಕಿಕೊಟ್ಟಿದ್ದಾರೆ. ಉತ್ತಮವಾದ ಕಥೆ, ಕಾದಂಬರಿ, ಕವಿತೆ ರಚನೆ ಮೂಲಕ ದೇಶದ ತುಂಬೆಲ್ಲ ಮನೆ ಮಾತಾಗಿದ್ದಾರೆ. ಅವರನ್ನೆಲ್ಲಾ ಸ್ಫೂರ್ತಿಯಾಗಿಟ್ಟು ಕೊಂಡು, ಸಾಹಿತ್ಯ ಬರವಣಿಗೆ ಮೂಲಕ ಮುಂದಿನ ತಲೆಮಾರಿಗೆ ಮಾನವೀಯತೆಯನ್ನು ಬಿತ್ತೋಣ ಎಂದು ಹೇಳಿದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮನ್ನಣೆ: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ದಪ್ಪ ಮಾತನಾಡಿ, ಕುವೆಂಪು ಅವರ “ಶೂದ್ರತಪಸ್ವಿ’ ನಾಟಕ ರಚನೆಯಾದ ವೇಳೆ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅವರು ಈ ಬಗ್ಗೆ ಅಪಸ್ವರ ಎತ್ತಿದ್ದರು. ಆದರೆ ಅದು ಕುವೆಂಪು ಅವರೊಂದಿಗಿನ ಪತ್ರ ಬರವಣಿಗೆ ವಿನಿಮಯಕ್ಕಷ್ಟೇ ಸೀಮಿತವಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಾಸ್ತಿ ಅವರು ಮನ್ನಣೆ ನೀಡುತ್ತಿದ್ದರು ಎಂದು ಹೇಳಿದರು.

ಇಪ್ಪತ್ತನೇ ಶತಮಾನದ ಅಗ್ರಗಣ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದ ಮಾಸ್ತಿ ವೆಂಕಟೇಶ ಅಂಯ್ಯಗಾರ್‌ ಅವರು ನವೋದಯ ಸಾಹಿತ್ಯದ ಕಾಲಘಟ್ಟದ ಎಲ್ಲಾ ಸಾಹಿತಿಗಳಿಗೆ ಪ್ರೋತ್ಸಾಹ ನೀಡಿದರು. ಅಷ್ಟೇ ಅಲ್ಲದೆ ಹಲವು ಕಿರಿಯ ಲೇಖಕರ ಕೃತಿಗಳನ್ನು ಪ್ರಕಟಿಸಿದರು. ಕನ್ನಡ ಸಾಹಿತ್ಯವನ್ನು ಹೊಸ ರೀತಿಯಲ್ಲಿ ಕಟ್ಟಿದ ಶ್ರೇಯಸ್ಸು ಮಾಸ್ತಿ ಅವರದ್ದಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎಂ.ಜಾನಕಿ ಮಾತನಾಡಿ, ಮಾಹಿತಿ ತಂತ್ರಜ್ಞಾನ ಯುಗ ವೇಗವಾಗಿ ಬೆಳೆಯುತ್ತಿದ್ದರೂ ಪುಸ್ತಕವನ್ನು ಕೊಂಡು ಓದುವ ಸಂಸ್ಕೃತಿ ಇನ್ನೂ ನಿಂತಿಲ್ಲ. ಪುಸ್ತಕ ಕೊಂಡು ಓದುವ ಸಂಸ್ಕೃತಿ ಮತ್ತಷ್ಟು ಬೆಳೆಯಲಿ ಎಂದು ಆಶಿಸಿದರು. ಹಿರಿಯ ಸಂಶೋಧಕ ಡಾ.ಹಂಪ ನಾಗರಾಜಯ್ಯ ಅವರು ಮಾಸ್ತಿ ಅವರೊಂದಿಗಿನ ಒಡನಾಟವನ್ನು ಮೆಲುಕು ಹಾಕಿದರು.

ಇದೇ ವೇಳೆ ಲೇಖಕಿ ಸವಿತಾ ನಾಗಭೂಷಣ್‌, ಈಶ್ವರಚಂದ್ರ, ಡಾ.ಕೆ.ಮರುಳಸಿದ್ದಪ್ಪ ಅವರಿಗೂ 2019ನೇ ಸಾಲಿನ ಮಾಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾದಂಬರಿಕಾರ ಎಂ.ಆರ್‌.ದತ್ತಾತ್ರಿ ಅವರಿಗೆ ಮಾಸ್ತಿ ಕಾದಂಬರಿ ಪುರಸ್ಕಾರ, ಕಥೆಗಾರ ಎ.ಎನ್‌.ಪ್ರಸನ್ನ ಮತ್ತು ಶೇಷಾದ್ರಿ ಕಿನಾರ ಅವರಿಗೆ ಮಾಸ್ತಿಕಥಾ ಪುರಸ್ಕಾರ ಪ್ರದಾನ ಮಾಡಲಾಯಿತು. ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಟ್ರಸ್ಟ್‌ ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್‌, ಹಿರಿಯ ಸಾಹಿತಿ ಡಾ.ಜಿ.ಎಸ್‌.ಸಿದ್ಧಲಿಂಗಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.