‘ರಸ ಮಂಟಮೆ’ ತುಳು ಸಂಸ್ಕೃತಿ ವೈಭವ


Team Udayavani, Jun 30, 2019, 5:53 AM IST

tulu

ಕಡಬ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ರಾಮ ಕುಂಜದ ನೇತ್ರಾವತಿ ತುಳುಕೂಟದ ಆಶ್ರಯದಲ್ಲಿ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಸಹಯೋಗದೊಂದಿಗೆ ರಾಮಕುಂಜದಲ್ಲಿ ಶನಿವಾರ ಜರಗಿದ ತುಳು ಕಲಿಕೆಯ ವಿದ್ಯಾರ್ಥಿಗಳು ಹಾಗೂ ವಿವಿಧ ತುಳುಕೂಟಗಳ ಸದಸ್ಯರ ತುಳು ಸಾಂಸ್ಕೃತಿಕ ಸ್ಪರ್ಧೆಗಳ ‘ರಸ ಮಂಟಮೆ’ ತುಳು ಸಂಸ್ಕೃತಿಯ ವೈಭವವನ್ನು ಸಾಕ್ಷೀಕರಿಸಿತು.

ಅವಿಭಜಿತ ದ.ಕ. ಜಿಲ್ಲೆಯ ವಿವಿಧ ಕಡೆಯಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಹಾಗೂ ವಿವಿಧ ತುಳುಕೂಟಗಳ ಸದಸ್ಯರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ತುಳು ಜಾನಪದ ಕವಿತೆ, ತುಳು ಭಾವಗೀತೆ, ತೆಂಗಿನ ಗರಿಯಲ್ಲಿ ಕರಕುಶಲ ವಸ್ತು ತಯಾರಿ, ತುಳು ಹಳ್ಳಿ ಜೀವನದ ಚಿತ್ರ ಬಿಡಿಸುವುದು, ತುಳು ಭಾಷಣ, ತುಳು ಜಾನಪದ ಕವಿತೆ, ತುಳು ಗಾದೆ, ತುಳು ಜಾನಪದ ಕುಣಿತ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶ್ರೀ ರಾಮಕುಂಜ ಆಂಗ್ಲಮಾಧ್ಯಮ ಶಾಲೆಯಲ್ಲಿ ತೆರೆಯಲಾದ ತುಳುನಾಡ ಬಳಕೆಯ ಹಳೆಯ ವಸ್ತುಗಳ ಪ್ರದರ್ಶನ ತುಳುನಾಡಿನ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿತ್ತು.

ಸಾಧಕರಿಗೆ ಸಮ್ಮಾನ

ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತುಳು ಶಿಕ್ಷಕಿ, ತುಳು ಸಂಸ್ಕೃತಿ, ಭಾಷೆಗೆ ಪ್ರೋತ್ಸಾಹ ನೀಡು ತ್ತಿರುವ ಸರಿತಾ ಜನಾರ್ದನ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ತುಳು ಸಂಸ್ಕೃತಿ, ತುಳು ಭಾಷೆಗೆ ಪ್ರೋತ್ಸಾಹ ನೀಡು ತ್ತಿರುವ ಕುಶಾಲಾಕ್ಷಿ ಕಣ್ವತೀರ್ಥ, ನಾರಾಯಣ ರೈ ಕುಕ್ಕುವಳ್ಳಿ, ವಿಜಯ ಲಕ್ಷ್ಮೀ ಕಟೀಲು, ನರೇಶ್‌ ಸಸಿಹಿತ್ಲು, ಅಕ್ಷತಾ ರಾಜ್‌ ಪೆರ್ಲ, ಚಿದಾನಂದ ನಾಯಕ್‌, ನಿವೃತ್ತ ಶಿಕ್ಷಕ ಗುಮ್ಮಣ್ಣ ಗೌಡ ರಾಮಕುಂಜ, ಉಮೇಶ್‌ ಶೆಟ್ಟಿ ಸಾಯಿರಾಂ, ಧನ್ಯಶ್ರೀ ಆಲಂಕಾರು, ಸುಮನಾ ಕೆರೆಕರೆ ಅವರನ್ನು ಗೌರವಿಸಲಾಯಿತು. ತುಳು ಪರಪೋಕು ಕರಜನಕ್ಕೆ (ತುಳುನಾಡ ಹಳೆಯ ವಸ್ತುಗಳ ಸಂಗ್ರಹ) ತುಳು ಸಂಸ್ಕೃತಿ ಬಿಂಬಿಸುವ ಹಳೆಯ ಸಾಮಗ್ರಿಗಳನ್ನು ಒದಗಿಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರನ್ನೂ ಗುರುತಿಸಲಾಯಿತು. ಶಿಕ್ಷಕಿ ಜ್ಯೋತಿ ಸಮ್ಮಾನಿತರ ಹೆಸರು ವಾಚಿಸಿದರು.

‘ದೊಂಪದ ಬಲಿ’ ಪುಸ್ತಕ ಬಿಡುಗಡೆ

ನಿವೃತ್ತ ಶಿಕ್ಷಕ ಗೋಪಾಲ ಶೆಟ್ಟಿ ಕಳೆಂಜ ಬರೆದಿರುವ ‘ದೊಂಪದ ಬಲಿ’ ಪುಸ್ತಕವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ ಬಿಡುಗಡೆಗೊಳಿಸಿದರು.

ಬೆಲ್ಲ, ನೀರಿನ ಸ್ವಾಗತ

ತುಳುವ ಸಂಪ್ರದಾಯದಂತೆ ಅತಿಥಿಗಳನ್ನು ಬೆಲ್ಲ, ನೀರು, ಅಡಿಕೆ ಮತ್ತು ವೀಳ್ಯದೆಲೆ ನೀಡಿ ತುಳುನಾಡ ಮುಂಡಾಸು ತೊಡಿಸಿ ಸ್ವಾಗತಿಸಲಾಯಿತು. ವಿದ್ಯುತ್‌ ದೀಪ ಇಲ್ಲದ ಹಿಂದಿನ ಕಾಲದಲ್ಲಿ ಮನೆಗಳನ್ನು ಬೆಳಗುತ್ತಿದ್ದ ಗ್ಯಾಸ್‌ಲೈಟ್ ಮಾದರಿಯ ಲಾಟೀನು ಉರಿಸುವ ಮೂಲಕ ಅತಿಥಿಗಳು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ತೆಂಗಿನ ಮಡಲು ಉಪಯೋಗಿಸಿ ರಚಿಸಲಾಗಿದ್ದ ಪ್ರಧಾನ ವೇದಿಕೆಗೆ ತುಳುನಾಡ ಅವಳಿ ವೀರರಾದ ಕೋಟಿ-ಚೆನ್ನಯರ ಹೆಸರಿಡಲಾಗಿತ್ತು. ಸಭಾ ಕಾರ್ಯಕ್ರಮದ ಕೊನೆಗೆ ಹರಿವಾಣ, ತೆಂಗಿನಕಾಯಿ ಹಾಗೂ ಕಂಚಿನ ದೀಪ ನೀಡಿ ಅತಿಥಿಗಳನ್ನು ಸತ್ಕರಿಸಲಾಯಿತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.