ಅಧಿಕಾರಿಗಳಿಗೆ ಸಿದ್ದು ಆಡಳಿತ ಪಾಠ

•ರೈತರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಬಗೆಹರಿಸಿ•ನಿಖರ ಮಾಹಿತಿ ಇಲ್ಲದೇ ಸಭೆಗೆ ಬಂದಿದ್ದ ಅಧಿಕಾರಿಗಳ ತರಾಟೆ

Team Udayavani, Jun 30, 2019, 9:57 AM IST

bk-tdy-1..

ಬಾಗಲಕೋಟೆ: ನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾಗಲಕೋಟೆ: ಬಾದಾಮಿ ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಹಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಜತೆಗೆ ಅಭಿವೃದ್ಧಿ ಹಾಗೂ ಆಡಳಿತದ ಪಾಠ ಮಾಡಿದರು.

ಸಭೆ ಆರಂಭಕ್ಕೂ ಮೊದಲೇ ಆಗಮಿಸಿದ್ದ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಸುಮಾರು ಅರ್ಧ ಗಂಟೆ ಕಾದು ಕುಳಿತರು. ಸಭೆ ಆರಂಭಗೊಳ್ಳುತ್ತಿದ್ದಂತೆ, ಮೊದಲ ಬಾರಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಜಿಪಂನಿಂದ ಸನ್ಮಾನಿಸಲಾಯಿತು.

ಕೃಷಿ ಇಲಾಖೆಯೊಂದಿಗೆ ಆರಂಭಗೊಂಡ ಕೆಡಿಪಿ ಸಭೆ, ಬಿಟಿಡಿಎ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಮೂಲಕ ಮುಕ್ತಾಯಿತು. ಸಭೆಯುದ್ದಕ್ಕೂ ಜಿಲ್ಲೆಯ ವಿವಿಧ ಶಾಸಕರು, ಸಚಿವರ ಮಾತು ಆಲಿಸುತ್ತಿದ್ದ ಸಿದ್ದು, ಅಧಿಕಾರಿಗಳಿಗೆ ಛಾಟಿ ಬೀಸುತ್ತಲೇ ಇದ್ದರು.

ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳ ತರಾಟೆಗೆ: ಸಭೆ ಆರಂಭದಲ್ಲೇ ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಖರ ಮಾಹಿತಿ ಇಲ್ಲದೇ ಸಭೆಗೆ ಆಗಮಿಸಿದ್ದ ಇಬ್ಬರೂ ಅಧಿಕಾರಿಗಳ ಕುರಿತು ಮಾತನಾಡಿ, ಹೋಂ ವರ್ಕ್‌ ಇಲ್ಲದೇ ಸಭೆಗೆ ಏಕೆ ಬರುತ್ತೀರಿ. ಕೃಷಿ ಅಧಿಕಾರಿಗಳು, ರೈತರೇ ನಮ್ಮ ಬಳಿಗೆ ಬರಲಿ ಎಂದು ಕಾಯುತ್ತೀರಿ. ನೀವೆಲ್ಲ ನಿಮ್ಮದೇ ಆದ ಲೋಕದಲ್ಲಿದ್ದೀರಿ. ರೈತರ ಮನೆ ಬಾಗಿಲಿಗೆ ನೀವು ಹೋಗಬೇಕು. ವಿಜ್ಞಾನ-ತಂತ್ರಜ್ಞಾನ ಇಂದು ಬೆಳೆದಿದೆ. ಕೃಷಿ-ತೋಟಗಾರಿಕೆಯಲ್ಲೂ ಹೊಸ ಹೊಸ ಸಂಶೋಧನೆ ಬಂದಿವೆ. ಆದರೂ, ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ಇದು ಹೀಗೆಯೇ ಮುಂದುವರೆದರೆ, ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಸಚಿವರು ಹೇಳಿದರೂ ಟಿಸಿ ಕೊಡಲ್ಲ; ಹೆಸ್ಕಾಂ ಕುರಿತ ಚರ್ಚೆ ವೇಳೆ, ಸುಟ್ಟ ಟಿಸಿ ಬದಲಾಯಿಸಿ ಕೊಡಲು ಹೆಸ್ಕಾಂ ಅಧಿಕಾರಿಗಳು ರೈತರಿಂದ 30ರಿಂದ 50 ಸಾವಿರ ಲಂಚ ಪಡೆಯುತ್ತಾರೆ. ಶಾಸಕರು, ಸಚಿವರು ಹೇಳಿದರೆ 10 ದಿನವಾದರೂ ಟಿಸಿ ಬರಲ್ಲ. ಅದೇ ರೈತರು ನೇರವಾಗಿ ಹಣ ಕೊಟ್ಟರೆ ಟಿಸಿ ಕೊಡುತ್ತಾರೆ ಎಂದು ಸಕ್ಕರೆ ಸಚಿವ ಆರ್‌.ಬಿ. ತಿಮ್ಮಾಪುರ ಆರೋಪಿಸಿದರು.

ಇದಕ್ಕೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ತೇರದಾಳ ಶಾಸಕ ಸಿದ್ದು ಸವದಿ ಕೂಡ ಧ್ವನಿಗೂಡಿಸಿದರು. ಚಿಮ್ಮಡದ ಸುಟ್ಟ ಟಿಸಿ ಬದಲಿಸಿಕೊಡಲು ಎಷ್ಟು ದಿನ ಬೇಕಾಯಿತು. ಎಷ್ಟು ಹಣ ಕೊಟ್ಟಾಗ ಟಿಸಿ ಕೊಟ್ಟರೂ ನೀವೇ ಹೇಳಿ ಎಂದು ಸಿದ್ದು ಸವದಿ ಹೆಸ್ಕಾಂ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರ ಮಾತು ಆಲಿಸಿದ ಸಿದ್ದರಾಮಯ್ಯ, ಹೆಸ್ಕಾಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಕುಡಿಯುವ ನೀರಿಗೆ ಸಂಬಂಧಿಸಿದ ಟಿಸಿ ತಕ್ಷಣ ಬದಲಿಸಬೇಕು. ರೈತರ ಟಿಸಿಗಳಿದ್ದಲ್ಲಿ ಲಂಚ ಪಡೆಯದೇ ಬದಲಿಸಿಕೊಡಬೇಕು ಎಂದು ತಿಳಿಸಿದರು. ಹೆಸ್ಕಾಂ ಎಸ್‌ಇ ಹಿರೇಮಠ, ಲಂಚ ಪಡೆದು ಟಿಸಿ ಬದಲಿಸುವ ಪದ್ಧತಿ ಇಲ್ಲ. ಈಗ ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ಆಡಳಿತ ನಡೆದಿದೆ ಎಂದು ಉತ್ತರಿಸಿದರು.

ಹೆಸ್ಕಾಂ ಅಧಿಕಾರಿಯ ಈ ಹೇಳಿಕೆಗೆ ಮತ್ತಷ್ಟು ಗರಂ ಆದ ಸಿದ್ದು, ಲಂಚ ಪಡೆದು ಟಿಸಿ ಕೊಟ್ಟಿದ್ದರೆ, ನೀನು ರಾಜೀನಾಮೆ ಕೊಡ್ತಿಯಾ ಎಂದು ಪ್ರಶ್ನಿಸಿದರು.

ಭೂ ಬ್ಯಾಂಕ್‌ ಸ್ಥಾಪಿಸಿ: ಜಿಲ್ಲೆಯಲ್ಲಿ ವಿದ್ಯುತ್‌ ವಿತರಣೆ ಕೇಂದ್ರ, ವಸತಿ ನಿಲಯ, ಅಂಗನವಾಡಿ ಹೀಗೆ ವಿವಿಧ ಹೊಸ ಯೋಜನೆಗಳಿಗೆ ಭೂಮಿ ದೊರೆಯುತ್ತಿಲ್ಲ. ಇದರಿಂದ ಯೋಜನೆ ವಿಳಂಬವಾಗುತ್ತಿವೆ. ಹೀಗಾಗಿ ನಾನು ಸಿಎಂ ಆಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ಭೂ ಬ್ಯಾಂಕ್‌ ರಚಿಸಲು ಸೂಚಿಸಿದ್ದೆ. ಈಗ ಜಿಲ್ಲೆಯ ಎಲ್ಲ ತಾಲೂಕು ಮಟ್ಟದಲ್ಲಿ ಸರ್ಕಾರಿ ಭೂಮಿ ಎಷ್ಟಿದೆ, ಒತ್ತುವರಿಯಾದ ಭೂಮಿ ಎಷ್ಟು, ಯಾವ ಹಂತದಲ್ಲಿದೆ ಎಂಬುದು ಸಮೀಕ್ಷೆ ಮಾಡಿ, ಸರ್ಕಾರಿ ಭೂಮಿ ಗುರುತಿಸಿ, ಭೂ ಬ್ಯಾಂಕ್‌ ಸ್ಥಾಪಿಸಬೇಕು. ಅಗತ್ಯ ಯೋಜನೆಗಳಿಗೆ ಆ ಭೂಮಿ ಹಂಚಿಕೆ ಮಾಡಬೇಕು ಎಂದು ತಿಳಿಸಿದರು.

ಹೆರಕಲ್ ಯೋಜನೆ; ಜಂಟಿ ಪರಿಶೀಲನೆ: ಹೆರಕಲ್ ಬಳಿಯ ಘಟಪ್ರಭಾ ನದಿಯಿಂದ ಬಾಗಲಕೋಟೆಗೆ ಶಾಶ್ವತ ಕುಡಿಯುವ ನೀರು ಪೂರೈಕೆಯ 72 ಕೋಟಿ ಯೋಜನೆ ವಿಳಂಬ ಕುರಿತು ಕೆಡಿಪಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆಯಾಯಿತು. ಬಿಟಿಡಿಎ ಮತ್ತು ಅರಣ್ಯ ಅಧಿಕಾರಿಗಳನ್ನು ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ಶಾಸಕ ನಿರಾಣಿ ತರಾಟೆಗೆ ತೆಗೆದುಕೊಂಡರು.

2014ರಿಂದ ಆರಂಭಗೊಂಡ ಯೋಜನೆ ಇನ್ನೂ ಮುಗಿದಿಲ್ಲ. ಬಿಟಿಡಿಎ ಅಧಿಕಾರಿಗಳು, ಅರಣ್ಯ ಇಲಾಖೆ ಅನುಮತಿ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಇಲ್ಲಿನ ಅಧಿಕಾರಿಗಳಲ್ಲಿ ಸಮನ್ವಯತೆ ಇಲ್ಲ. ಪರಸ್ಪರ ಒಬ್ಬರಿಗೊಬ್ಬರು ಭೇಟಿಯಾಗಿ ಮಾತನಾಡುವುದೇ ಪ್ರತಿಷ್ಠೆ ಮಾಡಿಕೊಂಡಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳಲ್ಲಿ ಸಮನ್ವಯತೆ ಇರಬೇಕು. ಡಿಸಿ, ಸಿಇಒ ಇದನ್ನು ಮಾಡಬೇಕು ಎಂದು ಸೂಚಿಸಿದರು.

ಹೆರಕಲ್ ಯೋಜನೆ ಕುರಿತು ಜನಪ್ರತಿನಿಧಿಗಳು, ಬಿಟಿಡಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆಗೆ ಜು. 6ರಂದು ದಿನ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.