ಜನರ ಸಲಹೆ ಆಲಿಸಲು ಸಚಿವರ ಸೂಚನೆ

ತೇರದಾಳ ತಾಲೂಕಿಗೆ ಗ್ರಾಮಗಳ ಸೇರ್ಪಡೆ ಕುರಿತು ಚರ್ಚೆ

Team Udayavani, Jun 30, 2019, 10:29 AM IST

bk-tdy-5..

ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿದರು.

ಬಾಗಲಕೋಟೆ: ಪ್ರಸ್ತುತ ಘೋಷಿತ ತೇರದಾಳ ತಾಲೂಕನ್ನು ಸದೃಢವಾಗಿ ರಚಿಸುವ‌ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ಜರುಗಿತು.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಘೋಷಿತ ತೇರದಾಳ ತಾಲೂಕಿಗೆ ಯಾವ ಯಾವ ಗ್ರಾಮಗಳನ್ನು ಸೇರಿಸಬೇಕು ಎಂಬುದರ ಹಾಗೂ ಸಾರ್ವಜನಿಕರ ಸಲಹೆ ಆಲಿಸಿ ಚರ್ಚಿಸಲಾಯಿತು. ತಾಲೂಕು ರಚನೆಗೆ ಬೇಕಾದ ಎಲ್ಲ ಅಂಶ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಹೋಬಳಿ ಕೇಂದ್ರ ಹಾಗೂ ನೆಮ್ಮದಿ ಕೇಂದ್ರಗಳ ಸ್ಥಾಪನೆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಸಾರ್ವಜನಿಕರ ಪ್ರಕಟಣೆ ನೀಡುವ ಮೂಲಕ ಒಂದು ತಿಂಗಳ ಅವ ಕೊಟ್ಟು ಸಾರ್ವಜನಿಕರಿಂದ ಆಕ್ಷೇಪಣೆ ಪಡೆದುಕೊಂಡು ಅವುಗಳನ್ನು ಪರಿಶೀಲಿಸಿದ ನಂತರ ಅಂತಿಮ ವರದಿ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ತಾಲೂಕು ಘೋಷಣೆಗೆ ಸಾರ್ವಜನಿಕರು ಅನೇಕ ಹೋರಾಟ ಮಾಡಿದ್ದು, ನಿಮ್ಮ ನಿರೀಕ್ಷೆಗೆ ತಕ್ಕಂತೆ ಸದೃಢ‌, ಸುಂದರ ತಾಲೂಕನ್ನಾಗಿ ರಚಿಸಲಾಗುವುದು ಎಂದರು.

ಹೊಸ ತಾಲೂಕು ರಚನೆ ಕುರಿತು ವಿವಿಧ ಸಮಿತಿಗಳು ಮಾಡಿರುವ ಶಿಫಾರಸ್ಸುಗಳು, ಸರ್ಕಾರದ ಸುತ್ತೋಲೆಗಳು ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರಣೆ ನೀಡಿದ ತೇರದಾಳ ವಿಶೇಷ ತಹಶೀಲ್ದಾರ್‌ ಮಹೆಬೂಬಿ, ತಾಲೂಕು ರಚನೆಗೆ ಕನಿಷ್ಠ 1 ಲಕ್ಷ ಜನಸಂಖ್ಯೆ ಇರಬೇಕು. ಆಡಳಿತಾತ್ಮಕ ಅನುಕೂಲತೆ, ಹೊಸ ಹೋಬಳಿ ಸೃಷ್ಟಿಸದೇ ತಾಲೂಕ ರಚನೆ ಹಾಗೂ ಜಿಲ್ಲಾ ವ್ಯಾಪ್ತಿದಾಟಿ ಬೇರೆ ಜಿಲ್ಲೆಗಳ ಗ್ರಾಮಗಳನ್ನು ಪರಿಗಣಿಸಲಾಗದು ಎಂದು ಹೇಳಿದರು. ಅಖಂಡ ಜಮಖಂಡಿ ತಾಲೂಕಿನ ಮೂಲ ತೇರದಾಳ ಹೋಬಳಿಗೆ 23 ಗ್ರಾಮಗಳು ಒಳಪಟ್ಟಿದ್ದು, ತೇರದಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ತೇರದಾಳ ಹೋಬಳಿಯ 23 ಗ್ರಾಮಗಳು ಹಾಗೂ ಮುಧೋಳ ತಾಲೂಕಿನ 10 ಗ್ರಾಮಗಳು ಸೇರಿ ಒಟ್ಟು 33 ಗ್ರಾಮಗಳನ್ನು ಒಳಗೊಂಡ ತೇರದಾಳ ಮತಕ್ಷೇತ್ರವಾಗಿರುತ್ತದೆ ಎಂದು ತಿಳಿಸಿದರು.

ನೂತನ ರಬಕವಿ-ಬನಹಟ್ಟಿ ತಾಲೂಕ ಕೇಂದ್ರವೆಂದು ಡಿಸೆಂಬರ 2017 ರಂದು ಸರ್ಕಾರವು ಅಂತಿಮ ಅಧಿಸೂಚನೆ ಹೊರಡಿಸಿದೆ. ಅದರ ವ್ಯಾಪ್ತಿಯಲ್ಲಿ ತೇರದಾಳ ಹೋಬಳಿಯ 21 ಗ್ರಾಮಗಳು ಹಾಗೂ ಮುಧೋಳ ತಾಲೂಕಿನ ತೇರದಾಳ ಮತಕ್ಷೇತ್ರ ವ್ಯಾಪ್ತಿಯ 10 ಗ್ರಾಮಗಳು ಸೇರಿ ಒಟ್ಟಾರೆಯಾಗಿ 31 ಗ್ರಾಮಗಳ ತಾಲೂಕಾ ಕೇಂದ್ರವಾಗಿ ರಬಕವಿ-ಬನಹಟ್ಟಿ ತಾಲೂಕು ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು. ಘೋಷಿತ ತೇರದಾಳ ತಾಲೂಕಾ ಕೇಂದ್ರಕ್ಕೆ ಈ ಗ್ರಾಮಗಳು 6ರಿಂದ 7 ಕಿ.ಮೀ ಅಂತರದಲ್ಲಿವೆ ಎಂದು ಸಭೆಗೆ ತಿಳಿಸಿದರು.

ಮುಧೋಳ ಶಾಸಕ ಗೋವಿಂದ ಕಾರಜೋಳ, ತೇರದಾಳ ಶಾಸಕ ಸಿದ್ದು ಸವದಿ, ವಿಧಾನಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ, ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌, ಜಿ.ಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಉಪವಿಭಾಗಾಧಿಕಾರಿ ಮೊಹಮ್ಮದ ಇಕ್ರಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.