ರಭಸದ ಮಳೆಗೆ ಬಂತು ಮಲಪ್ರಭೆಗೆ ಕಳೆ


Team Udayavani, Jun 30, 2019, 10:57 AM IST

bg-tdy-3..

ಖಾನಾಪುರ: ಬರಿದಾಗಿದ್ದ ಖಾನಾಪುರ ಪಟ್ಟಣದ ಹಳೆ ಸೇತುವೆ ಬಳಿ ಮಲಪ್ರಭಾ ನದಿ ಮತ್ತೆ ಒಡಲು ತುಂಬಿಕೊಂಡಿದೆ.

ಖಾನಾಪುರ: ತಾಲೂಕಿನಲ್ಲಿ ಶುಕ್ರವಾರ ಮಳೆ ಆರಂಭವಾಗಿದ್ದು ಶನಿವಾರ ಕೂಡ ಮಳೆ ಬಿಡದೇ ಸುರಿಯುತ್ತಿದೆ.

ಇದರಿಂದ ತಾಲೂಕಿನ ರೈತರು ಗದ್ದೆಗಳಲ್ಲಿ ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಜೂನ್‌ ತಿಂಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ರೈತರನ್ನು ಇನ್ನಷ್ಟು ಆತಂಕದಲ್ಲಿ ದೂಡಿತ್ತು. ಇದ್ದಕ್ಕಿದ್ದಂತೆ ವರುಣ ಕೃಪೆ ತೋರಿದ್ದು ರೈತರ ಆತಂಕ ತಕ್ಕ ಮಟ್ಟಿಗೆ ಶಮನವಾಗಿದೆ. ಪಟ್ಟಣದ ಮಲಪ್ರಭಾ ನದಿಗೆ ಕಣಕುಂಬಿ ಕಡೆಯಿಂದ ಶುಕ್ರವಾರ ರಾತ್ರಿ ನೀರು ಹರಿದು ಬಂದಿದ್ದು ಬರಿದಾಗಿದ್ದ ಮಲಪ್ರಭಾ ನದಿ ಮತ್ತೆ ಒಡಲು ತುಂಬಿಕೊಳ್ಳುತ್ತಿದೆ. ಮಳೆ ಇಲ್ಲದೇ ಪಟ್ಟಣದ ಜನರು ನೀರಿನ ಸಮಸ್ಯೆ ಎದುರಿಸುತ್ತಿದ್ದು ನೀರು ಬಂದು ಪರದಾಡುವುದು ತಪ್ಪಿತು ಎನ್ನುವ ಸಮಾಧಾನವಾಗಿದೆ.

ಮಳೆ ಇಲ್ಲದೇ ಪರಿಸ್ಥಿತಿ ಹೀಗೇ ಮುಂದುವರೆದರೆ ಕುಡಿಯುವ ನೀರಿಗೂ ಪರದಾಡ ಬೇಕಿತ್ತು. ಹಳ್ಳಿಗಳಲ್ಲಿ ದನಕರುಗಳಿಗೆ ನೀರು ಮೇವಿಲ್ಲದೇ ಆಗಲೇ ಬಿಸಿ ತಟ್ಟಿತ್ತು. ಇನ್ನೇನು ಪೂರ್ತಿ ಬರಗಾಲ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದುಕೊಳ್ಳುತ್ತಿರುವಾಗಲೇ ಮಳೆರಾಯ ಕೃಪೆ ತೋರಿ ಜನರ ಆತಂಕ ದೂರ ಮಾಡಿದ್ದಾನೆ. ಜೂನ ಕೊನೆಯಲ್ಲಿ ಮಳೆ ಆರಂಭವಾಗಿದ್ದು ಸಂಭ್ರಮಕ್ಕೆ ಕಾರಣವಾಗಿದೆ.

ಎರಡು ದಿನಗಳ ಮಳೆಯಿಂದ ಜನ ಮತ್ತೆ ಮಳೆರಾಯನ ಅರ್ಭಟಕ್ಕೆ ಖುಷಿಯಾಗಿದ್ದಾರೆ. ರೈತರು ಬೆಳೆಗಳು ಬದುಕಿದವು ಎನ್ನುವ ಸಮಾಧಾನದ ಉಸಿರು ಬಿಟ್ಟಿದ್ದಾರೆ. ತಾಲೂಕಿನ ಕಣಕುಂಬಿ ಮತ್ತು ಜಾಮಗಾಂವ ಅರಣ್ಯ ಪ್ರದೇಶದಲ್ಲಿ ಮಳೆ ಸತತವಾಗಿ ಬಿಳುತ್ತಿದ್ದು ಜನರಿಗೆ ದೈನಂದಿನ ಕೆಲಸಗಳಿಗೆ ಅಡಚಣೆಯಾಗಿದೆ. ಶುಕ್ರವಾರ ಖಾನಾಪುರ ಪಟ್ಟಣದಲ್ಲಿ 20.8 ಮಿಮೀ ಮಳೆಯಾದರೆ ಕಣಕುಂಬಿಯಲ್ಲಿ 103.4 ಮಿಮೀ ಮಳೆಯಾಗಿದೆ. ನಾಗರಗಾಳಿ 22.2, ಬೀಡಿ 11.8, ಕಕ್ಕೇರಿ 9.6, ಅಸೋಗಾ 27.0, ಲೋಂಡಾ ರೇಲ್ವೆ ಸ್ಟೇಶನ್‌ 28.0, ಲೋಂಡಾ ಪಿಡ್ಲೂಡಿ 35.0, ಜಾಂಬೋಟಿ 46.0 ಮಿಮೀ ಮಳೆಯಾದ ವರದಿ ಇದೆ. ಶನಿವಾರ ಮಳೆ ಸತತವಾಗಿ ಹಿಡಿದಿದ್ದು ಶಾಲಾ ಮಕ್ಕಳಿಗೆ ನಿತ್ಯ ಓಡಾಡುವ ಪ್ರವಾಸಿಗರಿಗೆ ತೊಂದರೆಯಾಯಿತು.

ಮಳೆಯ ಅಭಾವದಿಂದ ಕೊಳವೆ ಬಾವಿ ಮತ್ತು ಬಾವಿಗಳಲ್ಲಿ ನೀರಿನ ಅಭಾವ ಎದ್ದು ಕಾಣಿಸುತ್ತಿತ್ತು. ಜಾಂಬೋಟಿ ಲೋಂಡಾ ನಾಗರಗಾಳಿಯಲ್ಲಿ ಮಳೆ ಗದ್ದೆ ಕೆಲಸಗಳಿಗೆ ಅಡ್ಡಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಜನರು ಮಳೆಯಿಂದ ಹೊರಗೆ ಓಡಾಡುವದು ಕಷ್ಟವಾಗಿದೆ. ಮಳೆರಾಯನ ಅರ್ಭಟ ಜನರ ಮೊಗದಲ್ಲಿ ಸಂತಸ ಮೂಡಿಸಿದ್ದು ಮಳೆ ಹೀಗೆ ಮುಂದುರೆಯಲಿ ಎನ್ನುವುದು ಜನರ ಪ್ರಾರ್ಥನೆಯಾಗಿದೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.