ಪೊಲೀಸ್‌ ಭದ್ರತೆಯಲ್ಲಿ ಚರಂಡಿ ಒಡ್ಡು ತೆರವು


Team Udayavani, Jun 30, 2019, 11:30 AM IST

gadaga-tdy-4..

ಲಕ್ಷ್ಮೇಶ್ವರ: ಸೂರಣಗಿ ಗ್ರಾಮದಲ್ಲಿ ಚರಂಡಿ ನೀರು ಹರಿಯದಂತೆ ಅಡ್ಡಲಾಗಿ ತಡೆ ಹಾಕಿರುವ ಪ್ರದೇಶವನ್ನು ಗ್ರಾಪಂ ಮತ್ತು ಪೊಲೀಸರು ಪರಿಶೀಲಿಸಿದರು.

ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿ ಗ್ರಾಮದ ಬಾಲೇಹೊಸೂರ ರಸ್ತೆಗೆ ಹೊಂದಿಕೊಂಡ 3 ಮತ್ತು 5ನೇ ವಾರ್ಡ್‌ನಲ್ಲಿ ಹರಿಯುವ ಚರಂಡಿ ನೀರಿಗೆ ಅಡ್ಡಲಾಗಿ ಸ್ಥಳೀಯರು ಹಾಕಿದ್ದ ಒಡ್ಡನ್ನು ಗ್ರಾಪಂನವರು ಪೊಲೀಸರ ಭದ್ರತೆಯಲ್ಲಿ ಶನಿವಾರ ತೆರವುಗೊಳಿಸಿದರು.

ಗ್ರಾಮದ ಉರ್ದು ಶಾಲೆಯಿಂದ ತಾಂಡಾವರೆಗಿನ ರಸ್ತೆ ಬದಿ ಹರಿಯುವ ಚರಂಡಿ ನೀರಿಗೆ ಸಮರ್ಪಕ ವ್ಯವಸ್ಥೆ ಇಲ್ಲದಿದ್ದರಿಂದ ಇಲ್ಲಿನ ನಿವಾಸಿಗರು ಅಲ್ಲಲ್ಲಿ ನೀರಿಗೆ ತಡೆ ಹಾಕಿದ್ದರು. ಇದರಿಂದ ಅನೇಕ ವರ್ಷಗಳಿಂದಲೂ ಈ ಪ್ರದೇಶದಲ್ಲಿನ ಚರಂಡಿ ನೀರು ರಸ್ತೆ ಮೇಲೆಯೇ ಹರಿಯುತ್ತಿರುವುದರಿಂದ ಇಡೀ ಪ್ರದೇಶ ಕೊಳಚೆಮಯವಾಗಿತ್ತು.

ಈ ಕುರಿತು ಪತ್ರಿಕೆಗಳು ಸಾಕಷ್ಟು ಬಾರಿ ವರದಿ ಮಾಡಿದ್ದರಿಂದ ಎಚ್ಚೆತ್ತ ಗ್ರಾಪಂನವರು ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ತೀರ್ಮಾನಿಸಿತ್ತು.

ಅದರನ್ವಯ ಶನಿವಾರ ಗ್ರಾಪಂನವರು ಪೊಲೀಸ್‌ ಇಲಾಖೆ ಸಹಕಾರದಲ್ಲಿ ಚರಂಡಿಗೆ ಅಡ್ಡಲಾಗಿ ಹಾಕಿದ್ದ ತಡೆಯನ್ನು ತೆರವುಗೊಳಿಸಲು ಮುಂದಾಗಿ ಜನರಿಗೆ ಎಲ್ಲ ರೀತಿಯಲ್ಲಿ ತಿಳಿ ಹೇಳಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ 3ಮತ್ತು 5ನೇ ವಾರ್ಡ್‌ನ ನಿವಾಸಿಗರು ಚರಂಡಿಗೆ ಅಡ್ಡಲಾಗಿ ಹಾಕಿರುವ ತಡೆ ತೆರವುಗೊಳಿಸಲು ನಮ್ಮದೇನೂ ತಕರಾರಿಲ್ಲ. ಆದರೆ ಈ ಮೂಲಕ ಹಾದು ಹೋಗುವ ಚರಂಡಿ ನೀರು ಎಲ್ಲಿಯೂ ನಿಲ್ಲದಂತೆ ಸಮರ್ಪಕ ವ್ಯವಸ್ಥೆ ಮಾಡಬೇಕೆಂದು ಬಿಗಿಪಟ್ಟು ಹಿಡಿದರು.

ಆಗ ಗ್ರಾಪಂ ಅಧ್ಯಕ್ಷ ಶಶಿಕಾಂತ ದಾಸರ, ಸದಸ್ಯರಾದ ಶರಣಪ್ಪ ಇಚ್ಚಂಗಿ, ವಿಜಯ ಹಳ್ಳಿ ಮತ್ತಿತರರು ನೆರೆದಿದ್ದ ಜನತೆಗೆ, ಸದ್ಯ ಹಾಕಿರುವ ತಡೆ ತೆರವುಗೊಳಿಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳೊಣ. ಸದ್ಯ ಅಡ್ಡಲಾಗಿ ಹಾಕಿರುವ ತಡೆ ತೆರವುಗೊಳಿಸಲು ಸಹಕರಿಸಿ ಎಂದರು. ಆದರೆ ತಾಂಡಾ ನಿವಾಸಿಗರು ಇದಕ್ಕೆ ಒಪ್ಪಲಿಲ್ಲ. ಆಗ ಪಿಡಿಒ ಎಂ.ಎನ್‌. ಮಲ್ಲೂರ ತಹಶೀಲ್ದಾರರಿಗೆ ವಿಷಯ ತಲುಪಿಸಿದಾಗ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರರು ಮೊದಲು ಭೂ ಮಾಪನ ಇಲಾಖೆಯಿಂದ ಈ ಮೊದಲಿನಿಂದಲೂ ಸೈಸರ್ಗಿಕವಾಗಿ ನೀರು ಹರಿದು ಹೋಗುವ ಪ್ರದೇಶ ಗುರುತಿಸಿ ಸಮೀಕ್ಷೆ ಮಾಡಿಸಬೇಕು. ಬಳಿಕ ಇಲ್ಲಿನ ಜನರಿಗೆ ತೊಂದರೆಯಾಗದಂತೆ ಶಾಶ್ವತ ಪರಿಹಾರಕೊಳ್ಳಲು ಗ್ರಾಪಂ ನವರು ಇಲಾಖೆಗೆ ಪತ್ರ ಬರೆಯುವಂತೆ ಸೂಚಿಸಿದರು. ಮತ್ತು ಎಲ್ಲರೂ ಸೇರಿ ಎರಡ್ಮೂರು ದಿನಗಳಲ್ಲಿ ಸಮಸ್ಯೆಗೊಂದು ಪರಿಹಾರಕ್ಕೆ ಕ್ರಮ ಕೈಗೊಳ್ಳೊಣ ಎಂದು ಭರವಸೆ ನೀಡಿದರು.

ಗ್ರಾಪಂ ಬಸಣ್ಣ ಇಟಗಿ, ವಿರೂಪಾಕ್ಷಪ್ಪ ಶಿರನಹಳ್ಳಿ, ಸೋಮಶೇಖರ ಲಮಾಣಿ, ಬಾಬಣ್ಣ ಲಮಾಣಿ, ಗ್ರಾಮದ ಹಿರಿಯರು, ಪೊಲೀಸ್‌ ಮತ್ತು ಗ್ರಾಪಂ ಸಿಬ್ಬಂದಿಗಳಿದ್ದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.