ಬಾಲ್ಯ ವಿವಾಹ ತಡೆಗೆ ಜಾಗೃತಿ
Team Udayavani, Jun 30, 2019, 11:33 AM IST
ಹೊಳೆಆಲೂರ: ಹೊಳೆಮಣ್ಣೂರ ಗ್ರಾಮದಲ್ಲಿ ಜರುಗಿದ ಬಾಲ್ಯ ವಿವಾಹ ಜನ ಜಾಗೃತಿ ಕಾರ್ಯಕ್ರಮದಲ್ಲಿ ಭಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.
ಹೊಳೆಆಲೂರ: ಸಮಾಜದಲ್ಲಿ ಬಾಲ್ಯ ವಿವಾಹ ನಿಲ್ಲಬೇಕಾದರೆ ಕಾಯ್ದೆಗಳಿಗಿಂತ ಸಮಾಜದ ಮನಸ್ಥಿತಿ ಬದಲಾವಣೆ ಆಗಬೇಕು ಎಂದು ಸುಗ್ರಾಮ ಸಂಘಟನೆ ತಾಲೂಕು ಕಾರ್ಯದರ್ಶಿ ರೇಣುಕಾ ಜೈನಾಪುರ ಹೇಳಿದರು.
ದಿ| ಹಂಗರ್ ಪ್ರೊಜೆಕ್ಟ್ ಬೆಂಗಳೂರು, ಸ್ಫೂರ್ತಿ ಸಂಸ್ಥೆ ಹೊಳೆಆಲೂರ ಹಾಗೂ ಗ್ರಾ.ಪಂ. ಹೊಳೆಮಣ್ಣುರ ಇವರ ಸಹಯೋಗದಲ್ಲಿ ಶನಿವಾರ ಹೊಳೆಮಣ್ಣೂರ ಸರಕಾರಿ ಕನ್ನಡ ಶಾಲೆಯಲ್ಲಿ ಜರುಗಿದ ಬಾಲ್ಯ ವಿವಾಹ ಜನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾ.ಪಂ. ಅಧಿಕಾರಿಗಳು, ಜನಪ್ರತಿನಿಧಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಎಚ್ಚರಿಕೆ ವಹಿಸಿದರೆ ಬಾಲ್ಯ ವಿವಾಹ ಪದ್ಧತಿ ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದರು.
ಸ್ಫೂತಿ ಸಂಸ್ಥೆ ಸಯೋಜಕಿ ಸುನಿತಾ ಹಿರೇಮಠ ಮಾತನಾಡಿ, ಹೆಣ್ಣು ಮಗುವಿಗೆ ದೈಹಿಕ ಹಾಗೂ ಬೌದ್ಧಿಕ ವಿಕಸನವಾಗದ ಹೊರತು ಅವಳಿಗೆ ವಿವಾಹ ಮಾಡುವಂತಿಲ್ಲ ಎಂದು 2017ರಲ್ಲಿ ಸರಕಾರ ಕಠಿಣ ಕಾನೂನು ಜಾರಿಗೊಳಿಸಿದ್ದರು. ಆದರೂ ಗ್ರಾಮೀಣ ಭಾಗದಲ್ಲಿ ಹೆಣ್ಣು ಋತುಮತಿಯಾದ ತಕ್ಷಣ ಅವಳನ್ನು ಶಾಲೆ ಬಿಡಿಸಿ ಮದುವೆ ಮಾಡುವ ಪ್ರಕರಣಗಳು ವರದಿಯಾಗುತ್ತಿವೆ. ಇಂತಹ ಕೆಲಸದಲ್ಲಿ ತೊಡಗುವವರಿಗೆ ದಂಡ, ಶಿಕ್ಷೆಯ ಜೊತೆಗೆ ಸಮಾಜದಲ್ಲಿ ಜನ ಜಾಗೃತಿ ಅವಶ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಜರುಗಿತು.
ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಗಾಣಿಗೇರ ಅಧ್ಯಕ್ಷತೆ ವಹಿಸಿದ್ದರು. ಸ್ಫೂರ್ತಿ ಸಂಸ್ಥೆ ಸಂಯೋಜಕ ಲಕ್ಷ ್ಮಣ ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪ. ಮಾಜಿ ಅಧ್ಯಕ್ಷ ಎಸ್.ವೈ. ಗಾಣಿಗೇರ, ಗ್ರಾ.ಪಂ. ಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ತಿಮ್ಮನಗೌಡ್ರ, ಗ್ರಾಮ ಲೆಕ್ಕಾಧಿಕಾರಿ ಕೆ.ಡಿ. ಗೌಂಡಿ, ಗ್ರಾ.ಪಂ. ಸದಸ್ಯೆ ಸರಸ್ವತಿ ಕಮ್ಮಾರ, ನಿರ್ಮಲಾ ಮುಂಡರಗಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಕನ್ನಡ ಶಾಲಾ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ