ಭರದಿಂದ ಸಾಗಿದೆ ಸಸಿ ನೆಡುವ ಕಾರ್ಯ
•ರಸ್ತೆ ಎರಡೂ ಬದಿಯಲ್ಲಿ 15 ಸಾವಿರ ಸಸಿ ನೆಟ್ಟ ಅರಣ್ಯ ಇಲಾಖೆ
Team Udayavani, Jul 1, 2019, 9:59 AM IST
ಬೆಟಗೇರಿ: ಹೂಲಿಕಟ್ಟಿ ಸಸಿ ಪಾಲನಾ ಕೇಂದ್ರದಲ್ಲಿ ಬೆಳೆಸಲಾದ ವಿವಿಧ ಜಾತಿಯ ಸಸಿಗಳು.
ಬೆಟಗೇರಿ: ಪ್ರಸಕ್ತ ವರ್ಷ ಮುಂಗಾರು ಮಳೆ ಆರಂಭವಾಗುತ್ತಿದಂತೆ ಗೋಕಾಕ ವಲಯ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಗೋಕಾಕ ತಾಲೂಕಿನ ಹಳ್ಳಿಗಳಿಗೆ ಹೋಗುವ ಮುಖ್ಯ ರಸ್ತೆಗಳ ಎರಡೂ ಬದಿಗೆ ಹಾಗೂ ಶಾಲಾ ಕಾಲೇಜುಗಳ ಆವರಣಗಳಲ್ಲಿ ಸಸಿ ನೆಡುವ ಕಾರ್ಯ ಭರದಿಂದ ಸಾಗಿದೆ.
ಗೋಕಾಕ ತಾಲೂಕಿನ ಮಮದಾಪುರ ಕ್ರಾಸ್-ಹೂಲಿಕಟ್ಟಿ, ಮೆಳವಂಕಿ-ಬಿಲಕುಂದಿ ದಂಡಿನ ಮಾರ್ಗ ಹಾಗೂ ಕಳ್ಳಿಗುದ್ದಿ, ವೆಂಕಟಾಪುರ, ಗೋಸಬಾಳ ಸೇರಿದಂತೆ ಹಲವು ಹಳ್ಳಿಗಳ ಮುಖ್ಯ ರಸ್ತೆಗಳ ಎರಡೂ ಬದಿಗೆ ಪ್ರಸಕ್ತ ವರ್ಷ ಗೋಕಾಕ ಸಾಮಾಜಿಕ ಅರಣ್ಯ ವಲಯ ಸಸಿಗಳೆನ್ನಟ್ಟು ಪರಿಸರ ಬೆಳೆಸುವ ಮತ್ತು ಪ್ರಯಾಣಿಕರಿಗೆ ರಸ್ತೆಯ ಪಕ್ಕ ಬೇಸಿಗೆ ದಿನಗಳಲ್ಲಿ ನೆರಳು ನೀಡಲು ಮುಂದಾಗಿದೆ. ಈಗ 15 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವುದರಿಂದ ಪರಿಸರ ಪ್ರೇಮಿಗಳಿಗೆ ಸಂತಸ ತಂದಿದೆ.
ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದ ಹೂಲಿಕಟ್ಟಿ ಮತ್ತು ಶಿಂಗಾಳಾಪುರ ಸಸಿ ಪಾಲನಾ ಕೇಂದ್ರದಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಸಸಿಗಳನ್ನು ಪೋಷಣೆ ಮಾಡಿ ಬೆಳಸಲಾಗಿದೆ. ಅದರಲ್ಲೂ ಒಂದು ಲಕ್ಷದಷ್ಟು ರೇಷ್ಮೆ ಸಸಿಗಳನ್ನು ಬೆಳಸಲಾಗಿದೆ. ರೇಷ್ಮೆ ಸೇರಿದಂತೆ ರಕ್ತ ಚಂದನ, ಸಾಗವಾಣಿ, ಶ್ರೀಗಂಧ, ಸಸಿಗಳನ್ನು ರೈತರಿಗೆ ಉಚಿತವಾಗಿ ನೀಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಗಿರೀಶ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಗೋಕಾಕ ತಾಲೂಕಿನ ಹಲವು ಮುಖ್ಯ ರಸ್ತೆಗಳ ಎರಡೂ ಬದಿಗೆ, ಅರಣ್ಯ ಪ್ರದೇಶದಲ್ಲಿ ಇನ್ನೂ 15 ಸಾವಿರಕ್ಕೂ ಹೆಚ್ಚು ಸಸಿಗಳನ್ನೆಡಲು ಪ್ರಯತ್ನಿಸಲಾಗುವುದು.• ಗಿರೀಶ ಸಂಕರಿ, ಗೋಕಾಕ ಅರಣ್ಯ ವಲಯ ಅರಣ್ಯಾಧಿಕಾರಿ.
•ಅಡಿವೇಶ ಮುಧೋಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ