ದುರುಗಮ್ಮನಹಳ್ಳ ಕಾಯಕಲ್ಪ ಅಂತಿಮ ಹಂತಕ್ಕೆ

•ನಮ್ಮೂರು ನಮ್ಮ ಹಳ್ಳ ಸಮಿತಿಗೆ ಉತ್ತಮ ಸ್ಪಂದನೆ•ಜಿಲ್ಲಾಧಿಕಾರಿಗಳ ಮಾರ್ಗದರ್ಶನಕ್ಕೆ ಸಿಕ್ಕಿತು ಫಲ

Team Udayavani, Jul 1, 2019, 10:36 AM IST

kopala-tdy-2..

ಗಂಗಾವತಿ: ಹಳ್ಳ ಹೂಳೆತ್ತುವ ಕಾರ್ಯವನ್ನು ವೀಕ್ಷಿಸಿದ ಶಾಸಕ ಪರಣ್ಣ ಮುನವಳ್ಳಿ.

ಗಂಗಾವತಿ: ನಗರದ ಮಧ್ಯೆ ಭಾಗದಲ್ಲಿರುವ ದುರುಗಮ್ಮನಹಳ್ಳದ ಕಾಯಕಲ್ಪ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ನಮ್ಮೂರು ನಮ್ಮ ಹಳ್ಳ ಸ್ವಚ್ಛತಾ ಸಮಿತಿಯ ಶ್ರಮ ಇದೀಗ ಸಾರ್ಥಕವಾಗುತ್ತಿದೆ. ನಗರದ ಎಸ್‌ಬಿಐ ಬ್ಯಾಂಕ್‌ನಿಂದ ಗುಂಡಮ್ಮನಕ್ಯಾಂಪ್‌ ಬಾಲಾಜಿ ಗ್ಯಾಜ್‌ ಕಂಪನಿವರೆಗೆ ಇಡೀ ಹಳ್ಳವನ್ನು ಸ್ವಚ್ಛಗೊಳಿಸುವ ಜತೆಗೆ ಇದೇ ಪ್ರಥಮಬಾರಿ ಹೂಳು ತೆಗೆದು ಸುಂದರವಾಗಿಸಲಾಗಿದೆ. ದುರುಗಮ್ಮನಹಳ್ಳವೋ ಚರಂಡಿಯೋ ಎಂದು ಅನುಮಾನ ಮೂಡಿಸುತ್ತಿದ್ದ ಹಳ್ಳ ಇದೀಗ ಘನತ್ಯಾಜ್ಯ, ನಗರದ ಕಸವನ್ನು ಸ್ವಚ್ಛಗೊಳಿಸಿ ಸುಂದರವಾಗಿ ಕಾಣುವಂತೆ ಮಾಡಲಾಗಿದೆ.

ಹಳ್ಳಕ್ಕೆ ಸಂತೆಯಲ್ಲಿ ಉಳಿದ, ಕೊಳೆತ ತರಕಾರಿ ಮತ್ತು ಹೋಟೆಲ್ನಲ್ಲಿ ಉಳಿದ ಆಹಾರ ಸುರಿಯುವ ಮೂಲಕ ಚರಂಡಿಯನ್ನಾಗಿಸಿದ ಪರಿಣಾಮ ಇಡೀ ದುರುಗಮ್ಮನಹಳ್ಳ ಗಬ್ಬೆದ್ದು ನಾರುತ್ತಿತ್ತು. ಹಳ್ಳದ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುವವರು ಮೂಗು ಮುಚ್ಚಿಕೊಂಡು ಹೋಗುವಂತಹ ಸ್ಥಿತಿಯುಂಟಾಗಿತ್ತು. ಜತೆಗೆ ಪೌರಕಾರ್ಮಿಕರು ನಗರದಲ್ಲಿ ಉತ್ಪಾದನೆಯಾಗುತ್ತಿದ್ದ ಹಸಿ ಮತ್ತು ಒಣ ತ್ಯಾಜ್ಯವನ್ನು ಹಳ್ಳಕ್ಕೆ ಸುರಿದು ಬೆಂಕಿ ಹಚ್ಚುತ್ತಿದ್ದರು. ಈ ಗಾಳಿಯನ್ನು ಸೇವಿಸುವ ಜನರಿಗೆ ಅಲರ್ಜಿ, ಅಸ್ತಮಾ ಸೇರಿ ಉಸಿರಿನ ತೊಂದರೆಯಾಗುತ್ತಿತ್ತು. ಈ ಎಲ್ಲಾ ಸಮಸ್ಯೆಗಳ ಕುರಿತು ‘ಉದಯವಾಣಿ’ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತ್ತು.

ನಂತರ ಎಚ್ಚೆತ್ತ ಡಾ| ಶಿವಕುಮಾರ ಮಾಲೀಪಾಟೀಲ್ ನೇತೃತ್ವದ ನಮ್ಮೂರು ನಮ್ಮ ಹಳ್ಳ ಸ್ವಚ್ಛತಾ ಸಮಿತಿ ಸದಸ್ಯರು ಹಳ್ಳ ಸ್ವಚ್ಛತೆ ಬಗ್ಗೆ ಆಗಾಗ ಸಭೆ ನಡೆಸಿ, ವಿವಿಧ ಸಂಘ ಸಂಸ್ಥೆಗಳು, ವಿದ್ಯಾರ್ಥಿಗಳ, ವೈದ್ಯರ ಸಹಕಾರದಿಂದ ಹಳ್ಳದಲ್ಲಿದ್ದ ಕಸ, ಪ್ಲಾಸ್ಟಿಕ್‌ ವಿವಿಧ ಅಪಾಯಕಾರಿ ಘನತ್ಯಾಜ್ಯವನ್ನು ನಗರಸಭೆಯ ಸ್ವಚ್ಛತಾ ಸಿಬ್ಬಂದಿ ನೆರವಿನೊಂದಿಗೆ ಸ್ವಚ್ಛಗೊಳಿಸಿ ಮಲಕನಮರಡಿ ಯಾರ್ಡ್‌ಗೆ ಸಾಗಿಸಲಾಯಿತು.

ಈ ಮಧ್ಯೆ ದುರುಗಮ್ಮನಹಳ್ಳಕ್ಕೆ ಎರಡು ಕಡೆ ಗೋಡೆ ನಿರ್ಮಿಸಿ ವಾಹನ ನಿಲುಗಡೆ ಮಾಡಲು ಯೋಜನೆ ಸಿದ್ಧಪಡಿಸಿ ಸರಕಾರ ಟೆಂಡರ್‌ ಕರೆದು ಗುತ್ತಿಗೆ ನೀಡಿತ್ತು. ಈ ಕಾಮಗಾರಿ ಅವೈಜ್ಞಾನಿಕವಾಗಿದ್ದು ಹಳ್ಳವನ್ನು ಸ್ವಚ್ಛಗೊಳಿಸಿ ಹೂಳೆತ್ತಿದ ನಂತರವೇ ಹಳ್ಳದಲ್ಲಿ ಅಮೃತಸಿಟಿ ಕಾಮಗಾರಿ ನಡೆಯುವಂತೆ ನಮ್ಮೂರು ನಮ್ಮ ಹಳ್ಳ ಸಮಿತಿಯವರು ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದ ನಂತರವೇ ಅಮೃತಸಿಟಿ ಕಾಮಗಾರಿಯನ್ನು ಕೆಲ ಬದಲಾವಣೆ ಮಾಡಿ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚನೆ ನೀಡಿ ಹೂಳೆತ್ತಲು ಜಿಲ್ಲಾಡಳಿತದಿಂದ 5 ಲಕ್ಷ ಮಂಜೂರಿ ಮಾಡಿದರು.

5 ಲಕ್ಷ ರೂ. ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದ್ದರಿಂದ ಸಮಿತಿಯವರು ಶಾಸಕ ಪರಣ್ಣ ಮುನವಳ್ಳಿಗೆ ಮನವಿ ಮಾಡಿದ್ದರಿಂದ ಶಾಸಕರು ಹೂಳೆತ್ತುವ ಕಾಮಗಾರಿ ನಡೆಯಲಿ. ಸರಕಾರ ಮತ್ತು ಸಾರ್ವಜನಿಕರ ವಂತಿಗೆ ಪಡೆದು ಹಳ್ಳವನ್ನು ಸೌಂದರ್ಯ ಮಾಡುವ ಸಂಕಲ್ಪ ಮಾಡಿದರು. ಉದ್ಯಮಿ ಕಳಕನಗೌಡ ತಮ್ಮ ಯಂತ್ರೋಪಕರಣಗಳ ಮೂಲಕ 16 ದಿನಗಳಿಂದ ಹೂಳೆತ್ತಿ ಇಡೀ ಹಳ್ಳವನ್ನು ಸ್ವಚ್ಛ, ಸುಂದರವಾಗಿಸಿದ್ದಾರೆ. ಹೂಳೆತ್ತಿದ ನಂತರ ಹಳ್ಳದ ಎರಡು ಕಡೆ ಗೋಡೆ ನಿರ್ಮಿಸಿ ಬದಿಯಲ್ಲಿ ಸಸಿ ನೆಟ್ಟು ಬೆಳೆಸುವ ಉದ್ದೇಶ ಹೊಂದಿದ್ದಾರೆ.

 

•ಕೆ.ನಿಂಗಜ್ಜ

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.