ಓಪನ್‌ ಬಾರ್‌ ಆಗುತ್ತಿರುವ ಕಾಗಿನಹರೆ: ನಿಸರ್ಗಕ್ಕೆ ಧಕ್ಕೆ

ವಾರಾಂತ್ಯ ಕಳೆಯಲು ನಗರಗಳಿಂದ ಬರುವ ಪ್ರವಾಸಿಗರಿಂದ ಪಶ್ಚಿಮಘಟ್ಟದ ತಪ್ಪಲಿನಲ್ಲಿ ದಾಂಧಲೆ

Team Udayavani, Jul 1, 2019, 11:00 AM IST

hasan-tdy-1..

ಸಕಲೇಶಪುರ: ವಾರಾಂತ್ಯವನ್ನು ಕಳೆಯಲು ನಗರಗಳಿಂದ ಬರುವ ಪ್ರವಾಸಿಗರು ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಕಾಗಿನಹರೆ ಗ್ರಾಮದಲ್ಲಿ ಸೌಂದರ್ಯ ಧಕ್ಕೆ ತರುವ ಕೆಲಸವನ್ನು ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿದೆ.

ತಾಲೂಕಿನ ಹೆತ್ತೂರು ಹೋಬಳಿಯ ಕಾಗಿನಹರೆ ಗ್ರಾಮ ಕುಗ್ರಾಮವಾಗಿದ್ದು ಪ್ರಖ್ಯಾತ ಎಡಕುಮೇರಿ ರೈಲು ನಿಲ್ದಾಣದಿಂದ ಕೇವಲ 5 ಕಿ.ಮೀ. ದೂರದಲ್ಲಿದೆ. ಪಶ್ಚಿಮಘಟ್ಟಗಳ ಬೆಟ್ಟಗಳ ಮಧ್ಯೆ ಇರುವ ಕಾಗಿನಹರೆ ಗ್ರಾಮದ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನಡೆ ಸೆಳೆಯುತ್ತಿದೆ.

ರೆಸಾರ್ಟ್‌, ಹೋಂಸ್ಟೇ ಹಾವಳಿ: ಈ ಹಿಂದೆ ಕಾಗಿನಹರೆ ಗ್ರಾಮಕ್ಕೆ ಕೇವಲ ಹೆತ್ತೂರು ಸುತ್ತಮುತ್ತ ಲಿನ ಗ್ರಾಮಸ್ಥರು ಮಾತ್ರ ಗ್ರಾಮದ ಐತಿಹಾಸಿಕ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬಂದು ಹೋಗುತ್ತಿ ದ್ದರು. ಆದರೆ ಇತ್ತೀಚೆಗೆ ವನಗೂರು, ಹೆತ್ತೂರು ಭಾಗದಲ್ಲಿರುವ ಹೋಂ ಸ್ಟೇ ರೆಸಾರ್ಟ್‌ಗಮಿಸುವ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾಗಿನಹರೆ ಗ್ರಾಮಕ್ಕೆ ಬರುತ್ತಿದ್ದಾರೆ.

ಮದ್ಯದ ಬಾಟಲಿ, ಪ್ಲಾಸ್ಟಿಕ್‌ ಕಸ ಹೆಚ್ಚಳ: ಕೇವಲ ಸೌಂದರ್ಯ ಸವಿಯಲು ಪ್ರವಾಸಿಗರು ಬರುತ್ತಿದ್ದಲ್ಲಿ ಯಾವುದೇ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಇಲ್ಲಿಗೆ ಬರುವ ಹೊರ ಊರಿನ ಕಿಡಿಗೇಡಿಗಳು ಮದ್ಯಪಾನ, ಧೂಮ ಪಾನ ಮೋಜು ಮಸ್ತಿ ಮಾಡಿ ಮದ್ಯದ ಬಾಟಲಿಗಳನ್ನು ಎಲ್ಲಿ ಬೇಕೆಂದರಲ್ಲಿ ಎಸೆಯುತ್ತಿದ್ದಾರೆ. ಮದ‌್ಯದ ಬಾಟಲಿಗಳು ಅಲ್ಲಲ್ಲಿ ಒಡೆದು ಚೂರಾಗುವುದರಿಂದ ಗ್ರಾಮದಲ್ಲಿರುವ ಜಾನುವಾರು ಗಳು ಹಾಗೂ ಕಾಡು ಪ್ರಾಣಿಗಳ ಕಾಲುಗಳಿಗೆ ಒಡೆದ ಗಾಜಿನ ಚೂರುಗಳು ಚುಚ್ಚುತ್ತಿದ್ದು, ಇದರಿಂದ ವನ್ಯಜೀವಿಗಳು ವಿನಾಕಾರಣ ತೊಂದರೆ ಅನುಭವಿ ಸಬೇಕಾಗಿದೆ. ಕೇವಲ ಮದ್ಯದ ಬಾಟಲಿಗಳನ್ನು ಮಾತ್ರವಲ್ಲ ಎಲ್ಲಿ ಬೇಕೆಂದರಲ್ಲಿ ಪ್ಲಾಸ್ಟಿಕ್‌ ಬಾಟಲಿ, ಪ್ಲಾಸ್ಟಿಕ್‌ ಲೋಟಗಳು, ಪ್ಲಾಸ್ಟಿಕ್‌ ತಟ್ಟೆಗಳನ್ನು, ಕಾಗದದ ಪಟ್ಟಣ ಗಳನ್ನು ಬಿಸಾಡುತ್ತಿದ್ದು ಇದರಿಂದ ಪರಿಸರದ ಮೇಲೆ ನೇರ ಹಾನಿಯುಂಟಾಗುತ್ತಿದೆ.

ಪ್ರಾಣಿಗಳಿಗೆ ಮಾರಕವಾದ ಪ್ಲಾಸ್ಟಿಕ್‌: ನದಿಯ ನೀರನ್ನು ಹಾಗೂ ಪ್ರವಾಸಿಗರು ಎಸೆದ ಚೂರುಪಾರು ಆಹಾರವನ್ನು ಕಾಡುಪ್ರಾಣಿಗಳು ತಿನ್ನಲು ಹೋಗಿ ಪ್ಲಾಸ್ಟಿಕ್‌ ತಿನ್ನುತ್ತಿದ್ದು, ಗಂಟಲಿನಲ್ಲಿ ಪ್ಲಾಸ್ಟಿಕ್‌ ಸಿಕ್ಕಿ ಹಾಕಿ ಕೊಂಡು ಹಲವು ವನ್ಯಪ್ರಾಣಿಗಳು ಸಾವನ್ನಪ್ಪಿರುವ ವರದಿಗಳು ಇದೆ. ಇದಿಷ್ಟು ಸಾಲದಂತೆ ಹೊರ ಊರಿನಿಂದ ಬರುವ ಕೆಲವು ಮಹಿಳೆಯರು ಅಸಭ್ಯ ವಾಗಿ ಬಟ್ಟೆಗಳನ್ನು ಧರಿಸಿ ಬರುತ್ತಿರುವುದರಿಂದ ಇಲ್ಲಿನ ಸಂಸ್ಕೃತಿಗೂ ಸಹ ಧಕ್ಕೆಯುಂಟಾಗುತ್ತಿದೆ. ಕೆಲವು ಹುಡುಗ, ಹುಡುಗಿಯರು ನೈತಿಕತೆಯೆ ಗೆರೆಯನ್ನು ದಾಟಿ ವರ್ತಿಸುತ್ತಿರುವುದು ಸ್ಥಳೀಯರಿಗೆ ಮುಜು ಗರದ ವಿಷಯವಾಗಿದೆ.

ಪ್ರವಾಸಿಗರಿಗೆ ಮೂಲ ಸೌಕರ್ಯ ಕಲ್ಪಿಸಿ: ಈ ಹಿನ್ನೆಲೆ ಯಲ್ಲಿ ತಾಲೂಕು ಆಡಳಿತ, ಗ್ರಾಮ ಪಂಚಾಯತಿ ಯವರು ಇತ್ತ ಗಮನವರಿಸಿ ಪ್ರವಾಸಿಗರಿಗೆ ಶೌಚಾಲಯ, ಕುಡಿಯುವ ನೀರು, ಕುಳಿತುಕೊಳ್ಳುವ ತಾಣ, ಸಾರಿಗೆ, ಊಟೋಪಚಾರದ ವ್ಯವಸ್ಥೆಯನ್ನು ಕಲ್ಪಿಸಿ ಪ್ರವಾಸಿಗರ ಮೇಲೆ ಸೂಕ್ತ ನಿಯಂತ್ರಣ ಹೇರಬೇಕಾಗಿದೆ.

ಇಲ್ಲದಿದ್ದಲ್ಲಿ ಕಾಗಿನಹರೆಯ ಸೌಂದರ್ಯ ಕಿಡಿಗೇಡಿಗಳಿಂದ ಶಾಶ್ವತವಾಗಿ ಹದಗೆಡುವುದರಲ್ಲಿ ಯಾವುದೇ ಅನುಮಾನವಿಲ್ಲ.

 

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.