ಕೂಳೂರು ಸೇತುವೆ ಸಂಚಾರ ಸ್ಥಗಿತ ಸದ್ಯಕ್ಕಿಲ್ಲ !


Team Udayavani, Jul 2, 2019, 5:00 AM IST

30

ಮಹಾನಗರ: ಮಂಗಳೂರು – ಉಡುಪಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಾ.ಹೆ.66ರಲ್ಲಿ ಕೂಳೂರುವಿನಲ್ಲಿರುವ 67 ವರ್ಷಗಳ ಹಳೆಯ ಕಮಾನು ಸೇತುವೆ ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂಬ ತಜ್ಞರ ವರದಿಯ ಆಧಾರದಲ್ಲಿ ಘನ ವಾಹನ ಗಳ ಸಂಚಾರವನ್ನು ಕೆಲವೇ ದಿನಗಳಲ್ಲಿ ಸಂಪೂರ್ಣ ಸ್ಥಗಿತಗೊಳಿಸುವಂತೆ ಜೂ. 4ರಂದು ದ.ಕ. ಜಿಲ್ಲಾಡಳಿತ ಆದೇಶಿ ಸಿದ್ದರೂ ಅದು ಇನ್ನೂ ಕೂಡ ಜಾರಿಗೆ ಬಂದಿಲ್ಲ !

ಎಲ್ಪಿಜಿ ಸಾಗಾಟ ಮಾಡುವ ಟ್ಯಾಂಕರ್‌ಗಳನ್ನು ಹಳೆಯ ಸೇತುವೆಯಲ್ಲಿ ಸಂಚರಿಸುವುದನ್ನು ನಿಷೇಧಿಸಿದರೆ ಅವರಿಗೆ ಪರ್ಯಾಯವಾಗಿ ಇರುವ ಮಾರ್ಗಗಳು ಸಮಸ್ಯೆ, ಅಪಾಯಕಾರಿಯಾಗಿವೆ. ಹಾಗಾಗಿ ಎಲ್ಪಿಜಿ ಟ್ಯಾಂಕರ್‌ನವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೇತುವೆ ಮೇಲಿನ ಸಂಚಾರ ಸ್ಥಗಿತ ತಡವಾಗಿದೆ.

ಇನ್ನೊಂದು ಸರ್ವೆಗೆ ಚಿಂತನೆ
ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುವ ಮತ್ತು ಬೆಂಗಳೂರಿನಿಂದ ಎಂಆರ್‌ಪಿಎಲ್ ಉಡುಪಿ ಕಡೆಗೆ ಬರುವ ಬುಲೆಟ್ ಟ್ಯಾಂಕರ್‌ಗಳು ಪಡುಬಿದ್ರಿ, ಕಾರ್ಕಳ – ಗುರುವಾಯನ ಕೆರೆ- ಧರ್ಮಸ್ಥಳ ಕೊಕ್ಕಡ-ಪೆರಿಯಶಾಂತಿ ಮೂಲಕ ಸಂಚರಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿತ್ತು. ಕೇರಳದಿಂದ ಉಡುಪಿ ಕಡೆಗೆ ಬರುವ ಬುಲೆಟ್ ಟ್ಯಾಂಕರ್‌ಗಳು ಕೆ.ಪಿ.ಟಿ.ಯಿಂದ ಕಾವೂರು ಬಜಪೆ ಕಾನ ಸುರತ್ಕಲ್ ಮೂಲಕ ಸಂಚರಿಸಲು ಸೂಚಿಸಿತ್ತು. ಈ ಮಾರ್ಗವು ಟ್ಯಾಂಕರ್‌ ಸಾಗಾಟಕ್ಕೆ ಪೂರಕವಾಗಿಲ್ಲ ಎಂದು ಸಂಬಂಧಪಟ್ಟ ಎಲ್ಪಿಜಿ ಟ್ಯಾಂಕರ್‌ನವರಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿತ್ತು. ಇದರಂತೆ ಮಂಗಳೂರು ಸಹಾಯಕ ಆಯುಕ್ತರು, ಎನ್‌.ಎಚ್. ಅಧಿಕಾರಿಗಳು, ಟ್ರಾಫಿಕ್‌ ಪೊಲೀಸ್‌ ಸಹಿತ ಇತರ ಅಧಿಕಾರಿಗಳಿಂದ ರಚಿತವಾದ ಸಮಿತಿಯಲ್ಲಿ ಈ ಸಂಬಂಧ ಚರ್ಚೆ ನಡೆದು ಪರ್ಯಾಯ ಮಾರ್ಗಗಳ ಬಗ್ಗೆ ಇನ್ನೊಂದು ಸರ್ವೆ ನಡೆಸುವ ಬಗ್ಗೆ ಚಿಂತಿಸಲಾಗಿದೆ. ಹೀಗಾಗಿ ಒಂದು ತಿಂಗಳಿನಿಂದ ಕೂಳೂರು ಸೇತುವೆ ಸಂಚಾರ ಮಾರ್ಗ ಬದಲಾವಣೆ ಆದೇಶ ಜಾರಿಗೆ ಬಂದಿಲ್ಲ.

ಸಂಚಾರ ಅಯೋಗ್ಯ: ವರದಿ
ಭೂಸಾರಿಗೆ ಸಚಿವಾಲಯದ ನಿರ್ದೇಶನ ಅನ್ವಯ ಹೈದರಾಬಾದ್‌ನ ಆರ್ವಿ ಅಸೋಸಿಯೇಟ್ಸ್‌ ಎಂಬ ಖಾಸಗಿ ಸಂಸ್ಥೆ ಕೂಳೂರು ಸೇತುವೆ ಸ್ಥಿತಿ ಪರಿಶೀಲಿಸಿ ಘನ ವಾಹನಗಳ ಸಂಚಾರಕ್ಕೆ ‘ಅಯೋಗ್ಯ’ ಎಂದು ಈ ಹಿಂದೆಯೇ ವರದಿ ನೀಡಿತ್ತು. ಬಳಿಕ ಭಾರತ್‌ಮಾಲಾ ಯೋಜನೆ ಬಗ್ಗೆ ಸಮೀಕ್ಷೆ ನಡೆಸಿದ ತಜ್ಞರ ತಂಡ ಕೂಡ ಹಳೆ ಸೇತುವೆ ವಾಹನ ಸಂಚಾರಕ್ಕೆ ಯೋಗ್ಯ ವಾಗಿಲ್ಲ ಎಂದು ವರದಿ ನೀಡಿತ್ತು.

ತಜ್ಞರ ವರದಿ ಆಧರಿಸಿ ಪ್ರಸ್ತಾವಿತ ಹಳೆ ಸೇತುವೆ ಮತ್ತು ಸುಸ್ಥಿತಿಯಲ್ಲಿರುವ ಇನ್ನೊಂದು ಸೇತುವೆ ನಡುವೆ ನಿರ್ಮಿಸಲು ಉದ್ದೇಶಿಸಲಾಗಿರುವ 65 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಸೇತುವೆಗೆ ಈಗಾಗಲೇ ಸರಕಾರದ ಅನುಮೋದನೆ ಕೂಡ ದೊರಕಿತ್ತು.

ಇನ್ನೂ ತಡವಾಗುವ ಸಾಧ್ಯತೆ
ಈ ಮಧ್ಯೆ ಸೇತುವೆ ಕಾಮಗಾರಿ ಮಾಡಲು ರಾಷ್ಟ್ರೀಯ ಹೆದ್ದಾರಿ ವಿಭಾಗದವರು ಇನ್ನು ಕೂಡ ಡಿಪಿಆರ್‌ ಸಿದ್ಧಪಡಿಸದ ಪರಿಣಾಮ ಟೆಂಡರ್‌ ಕಾರ್ಯವಾಗದೇ ಸೇತುವೆಯ ಕಾಮಗಾರಿ ಆರಂಭವಾಗುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದಲೂ ಸೇತುವೆ ಮೇಲೆ ಸಂಚಾರ ಸ್ಥಗಿತ ವಿಚಾರ ಇನ್ನೂ ತಡವಾಗುವ ಸಾಧ್ಯತೆಯಿದೆ.

ಮಾಹಿತಿ ಪಡೆದು ಕ್ರಮ

ಎಲ್ಪಿಜಿ ಸಾಗಾಟ ಮಾಡುವ ಟ್ಯಾಂಕರ್‌ಗಳ ಸಂಚಾರವನ್ನು ಹಳೆಯ ಸೇತುವೆಯಲ್ಲಿ ನಿಷೇಧ ಮಾಡಿದರೆ ಅವರಿಗೆ ಪರ್ಯಾಯವಾಗಿ ಇರುವ ಮಾರ್ಗಗಳು ಸಮಸ್ಯೆ ಹಾಗೂ ಅಪಾಯಕಾರಿ ಎಂಬ ಕಾರಣದಿಂದ ಎಲ್ಪಿಜಿ ಟ್ಯಾಂಕರ್‌ನವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೇತುವೆ ಮೇಲಿನ ಸಂಚಾರ ಸ್ಥಗಿತ ತಡವಾಗಿದೆ. ಈ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಪಡೆದು ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು.
– ಶಶಿಕಾಂತ್‌ ಸೆಂಥಿಲ್, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.