“ಸಹಜ ಆಹಾರ ವಸ್ತುಗಳ ಬಳಕೆಯೇ ಉತ್ತಮ’
ಹಲಸು ಸಂಭ್ರಮಕ್ಕೆ ಚಾಲನೆ
Team Udayavani, Jul 2, 2019, 5:51 AM IST
ಕಾಸರಗೋಡು: ಬದುಕು ಎಷ್ಟು ಬದಲಾಗಿದೆ ಎಂಬುದಕ್ಕೆ ಇಂದಿನ ಜನರ ಆಹಾರ ಜೀವನದ ಬದಲಾವಣೆಯೇ ಸಾಕ್ಷಿ. ಸಹಜವಾಗಿ ನಮ್ಮ ಪರಿಸರದಲ್ಲಿ ಸಿಗುವಂತಹ ಆಹಾರ ವಸ್ತುಗಳ ಬಳಕೆಯೇ ಉತ್ತಮ ಎಂದು ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಶಿಕ್ಷಕರು ಅಭಪ್ರಾಯಪಟ್ಟರು.
ಕೂಡಾ ಜನರ ನಡೆ ವಿಷಕಾರಿ ಆಹಾರದ ಕಡೆಗೆ ಸಾಗುತ್ತಿದೆ ಎಂಬುದನ್ನು ಮನಗಂಡು ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಹಯೋಗದೊಂದಿಗೆ ಹಲಸು ಸಂಭ್ರಮವು ಪ್ರತಿವರ್ಷದಂತೆ ಈ ಬಾರಿಯೂ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿತು. ಅಧ್ಯಾಪಕ ಗೋವಿಂದ ಭಟ್, ಶಿವಪ್ರಸಾದ್ ಚೆರುಗೋಳಿ, ರಾಜಕುಮಾರ್ ಕಾಟುಕುಕ್ಕೆ, ಪ್ರದೀಪ ಕರ್ವಜೆ, ಪ್ರಶಾಂತ ಹೊಳ್ಳ ಎನ್., ತುಳಸಿ ಕೆ., ಸೌಮ್ಯ, ಗಂಗಮ್ಮ, ಕೇಶವ ಪ್ರಸಾದ ಎಡಕ್ಕಾನ, ಗಣೇಶ ನೇತೃತ್ವ ನೀಡಿದರು.
ಉಪ್ಪಿನಲ್ಲಿ ಹಾಕಿ ಸಂರಕ್ಷಣೆ
ಈ ಸಂದರ್ಭದಲ್ಲಿ ಹಲಸು ಸಂಭ್ರಮಕ್ಕೆ ಚಾಲನೆ ನೀಡಿದ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಭಟ್ ನೇರೋಳು ಅವರು ಮಾತನಾಡಿ, ಸಹಜವಾಗಿ ನಮ್ಮ ಪರಿಸರದಲ್ಲಿ ಸಿಗುವಂತಹ ಆಹಾರ ವಸ್ತುಗಳ ಬಳಕೆಯೇ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧ್ಯಾಪಿಕೆ ವಿಚೇತಾ ಲೋಕೇಶ್ ಅವರ ಸಹಕಾರದಿಂದ ಸುಮಾರು ನೂರರಷ್ಟು ಹಲಸನ್ನು ಮಧ್ಯಾಹ್ನದ ಊಟಕ್ಕೆ ಅನುಕೂಲವಾಗುವಂತೆ ಶಾಲೆಯಲ್ಲಿ ಅಧ್ಯಾಪಕ ವಿದ್ಯಾರ್ಥಿಗಳ ಸಹಕಾರದಿಂದ ಉಪ್ಪಿನಲ್ಲಿ ಹಾಕಿ ಇಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !