ಬಹುದಿನಗಳ ರೈತರ ಬೇಡಿಕೆ ಈಡೇರಿಕೆ: ಶಾಸಕ ಕತ್ತಿ
Team Udayavani, Jul 2, 2019, 8:19 AM IST
ಹುಕ್ಕೇರಿ: ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿರುವ ಹಿರಣ್ಯಕೇಶಿ ನದಿಯ ದಡದಲ್ಲಿ ಬರುವ ಗ್ರಾಮಗಳ ಹತ್ತಿರ ನಿರ್ಮಿಸುತ್ತಿರುವ ಬ್ರಿಜ್ ಕಮ್ ಬ್ಯಾರೇಜ್ಗಳಿಂದ ಹಾಗೂ ಕರೆಗಳಗೆ ನೀರು ತುಂಬಿಸುವ ಯೋಜನೆಗಳು ರೈತರಿಗೆ ವರದಾನವಾಗಲಿದೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.
ತಾಲೂಕಿನ ಸುಲ್ತಾನಪುರ ಬಳಿ ಹಿರಣ್ಯಕೇಶಿ ನದಿಗೆ ಅಡ್ಡಲಾಗಿ 20 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬ್ರಿಜ್ ಕಮ್ ಬ್ಯಾರೇಜ್ ಲೋಕಾರ್ಪಣೆ ಹಾಗೂ 2ನೇ ಹಂತದ 11 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ರೈತರ ಬಹುದಿನಗಳ ಬೇಡಿಕೆಯಾಗಿದ್ದ ಸೇತುವೆ ಮಳೆಗಾಲದಲ್ಲಿ ನೀರಿನಿಂದ ಮುಳಗಿ ರಸ್ತೆ ಸಂಪರ್ಕಕ್ಕೆ ಜನರಿಗೆ ತೊಂದರೆಯಾಗುತ್ತಿತ್ತು. ಸದ್ಯ ಈ ಕಾಮಗಾರಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ತಾಲೂಕಿನಲ್ಲಿ ಕಳೆದ ವರ್ಷ 22 ಕೆರೆಗಳಿಗೆ ಹಿರಣ್ಯಕೇಶಿ ನದಿಯಿಂದ ನೀರು ತುಂಬಿಸಲಾಗಿತ್ತು. ಈ ವರ್ಷ ಹೆಚ್ಚವರಿ 11 ಕೆರೆಗಳಾದ ಕಣಗಲಾ, ಬಾಡವಾಡಿ, ಆಲೂರ ಶಿಡ್ಲಹೊಂಡ, ನೇರ್ಲಿ, ಎಲಿಮುನ್ನೋಳಿ, ಯಾದಗೂಡ, ಬೆಳವಿ, ಶೇಲಾಪುರ, ಶಿರಹಟ್ಟಿ, ಕೆಂಚನಟ್ಟಿ, ಕರಗಾಂವ ಸೇರಿದಂತೆ 33 ಕೆರೆಗಳಿದ್ದು, ಅದರಲ್ಲಿ ಹುಕ್ಕೇರಿ ತಾಲೂಕಿನಲ್ಲಿ 27 ಹಾಗೂ ಚಿಕ್ಕೋಡಿ ತಾಲೂಕಿನ 6 ಕೆರೆ ಸೇರಿದಂತೆ ಎಲ್ಲ ಕರೆಗಳಿಗೆ ಅವಧಿಯೊಳಗೆ ಪ್ರಾಯೋಗಿಕವಾಗಿ ನೀರು ತುಂಬಿಸಗುವುದು ಎಂದರು.
ತಾಪಂ ಮಾಜಿ ಅಧ್ಯಕ್ಷ ಸತ್ಯಪ್ಪ ನಾಯಿಕ ಮಾತನಾಡಿದರು. ಈ ವೇಳೆ ಮಾಜಿ ಸಚಿವ ಶಶಿಕಾಂತ ನಾಯಿಕ, ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ, ಸಂಗಮ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಪ್ಪಾಸಾಹೇಬ ಶಿರಕೋಳಿ, ಶಿವನಗೌಡ ಮದವಾಲ. ಶ್ರೀಶೈಲ್ ಹಿರೇಮಠ, ಬಂಡು ಹತ್ತನೂರೆ, ಅನುಸೂಯಾ ಮಾಳಗೆ, ಮಹೇಶ ಕುಂಬಾರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ
ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ
MUST WATCH
ಹೊಸ ಸೇರ್ಪಡೆ
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು
ಬಿಲ್ಡರ್ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್
QR code system: ರೈಲ್ವೆ ಟಿಕೆಟ್ ಖರೀದಿಗೆ ಕ್ಯೂಆರ್ಕೋಡ್ ವ್ಯವಸ್ಥೆ; ಉತ್ತಮ ಸ್ಪಂದನೆ