ಎತ್ತಿನಹೊಳೆ: ಕೆರೆ ಪುನಶ್ಚೇತನಕ್ಕೆ 100 ಕೋಟಿ ರೂ.

ಸದನದ ಒಪ್ಪಿಗೆ ಸಿಕ್ಕ ಕೂಡಲೇ 'ಜಲಧಾರೆ' ಯೋಜನೆ ಜಾರಿ | ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸಭೆ

Team Udayavani, Jul 2, 2019, 11:52 AM IST

kolar-tdy-1..

ಕೋಲಾರದ ಜಿಪಂ ಸಭಾಂಗಣದಲ್ಲಿ ಜಲಧಾರೆ ಯೋಜನೆ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಕೃಷ್ಣಬೆೈರೇಗೌಡ ಮಾತನಾಡಿದರು.

ಕೋಲಾರ: ಎತ್ತಿನಹೊಳೆ ಯೋಜನೆಯ ನೀರು ಹರಿಯುವ ಕೆರೆಗಳ ಪುನಶ್ಚೇತನಕ್ಕೆ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಿದೆ. ಅದೇ ರೀತಿ ಜಲಧಾರೆ ಯೋಜನೆ ಇನ್ನು ಅಂತಿಮಗೊಂಡಿಲ್ಲ. ಇದಕ್ಕೆ ಸದನದ ಅನುಮೋದನೆ ಸಿಕ್ಕಿದ ಕೂಡಲೇ ಡಿಸೆಂಬರ್‌ ಅಂತ್ಯದೊಳಗೆ ಟೆಂಡರ್‌ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಲಧಾರೆ ಯೋಜನೆ ಅನುಷ್ಠಾನ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎತ್ತಿನಹೊಳೆ ನೀರು ಮುಂದಿನ ದಿನಗಳಲ್ಲಿ ಹರಿದು ಬರಲಿದೆ, ಈಗಾಗಲೇ ಕೆ.ಸಿ.ವ್ಯಾಲಿ ನೀರು ಹರಿಯುತ್ತಿರುವುದರಿಂದ ಎರಡೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕುಡಿಯುವ ನೀರಿಗೆ ಶಾಶ್ವತ ಪರಿಹಾರ: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ರೂಪಿಸಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ನೀರಿನ ಸಮಸ್ಯೆ ನಿವಾರಣೆಗೆ ಸರ್ಕಾರ ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದು, ನೀರು ಪೋಲಾಗದಂತೆ ಹಂಚಿಕೆ ಮಾಡಬೇಕಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ವಿವರಿಸಿದರು.

ಆದ್ಯತೆ ಮೇಲೆ ನೀರು ಪೂರೈಕೆ: ಜಿಲ್ಲೆಗೆ ಕುಡಿಯುವ ನೀರಿಗಾಗಿ ಯರಗೋಳ್‌ ಹಾಗೂ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಂಡಿದ್ದು, ಎರಡೂ ಯೋಜನೆಗಳ ಕಾಮಗಾರಿ ಪ್ರಗತಿಯಲಿದೆ. ಇದರಿಂದ ಜಿಲ್ಲೆಯ ಕೆಲ ದೊಡ್ಡ ಕೆರೆಗಳಿಗೆ ನೀರು ಹರಿಸಿಕೊಂಡು ಸಮಸ್ಯೆಯಿರುವ ಗ್ರಾಮಗಳಿಗೆ, ಪಟ್ಟಣ, ನಗರಗಳಿಗೆ ಆದ್ಯತೆ ಮೇರೆ ಹರಿಸಲಾಗುವುದು ಎಂದು ಹೇಳಿದರು.

136 ಕೆರೆಗಳಿಗೆ ನೀರು: ಎತ್ತಿನಹೊಳಗೆ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಹರಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ 136 ಕೆರೆಗಳಿಗೆ ಹರಿಸಲಾಗುವುದು. ಅದೇ ರೀತಿ ಯರಗೋಳ್‌ ಯೋಜನೆಯಿಂದಲೂ ಜಿಲ್ಲೆಯ ಮೂರು ತಾಲೂಕುಗಳಿಗೆ ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನೀರಿನ ಸಮಸ್ಯೆ ಕೊನೆಗಾಣಿಸಿ: ಕೆಜಿಎಫ್‌ ಶಾಸಕಿ ರೂಪಾ ಶಶಿಧರ್‌, ಕೆಜಿಎಫ್‌ ನಗರಕ್ಕೆ ಬೇತಮಂಗಲ ಕೆರೆಯಿಂದ ನೀರು ಹರಿಯುತ್ತಿತ್ತು. ಅದನ್ನು ಗ್ರಾಮೀಣ ಭಾಗಕ್ಕೂ ವಿಸ್ತರಿಸಬೇಕು. ಈ ಕೆರೆಗೆ ಎತ್ತಿನಹೊಳೆ ಯೋಜನೆ ನೀರನ್ನು ಹರಿಸುವ ಮೂಲಕ ಕುಡಿಯುವ ನಿರಿನ ಸಮಸ್ಯೆ ಕೊನೆಗಾಣಿಸಬೇಕು ಎಂದು ಮನವಿ ಮಾಡಿದರು. ಶಾಸಕರ ಮನವಿಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಬೆೈರೇಗೌಡ, ಯೋಜನೆಯನ್ನು ಅಂತಿಮಗೊಳಿಸಲ್ಲ. ಬದಲಾವಣೆ ಇದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಕೆ.ವೈ.ನಂಜೇಗೌಡ, ಈಚೆಗೆ ನರಸಾಪುರ ಕೆರೆಯಿಂದ ಮಾಲೂರು ತಾಲೂಕಿನ ಶಿವಾರಪಟ್ಟಣ ಕೆರೆಗೆ ನೀರು ಪಂಪು ಮಾಡುವುದಕ್ಕೆ ಚಾಲನೆ ನೀಡಲಾಯಿತು. ಈಗ ನಿಲ್ಲಿಸಿರುವುದರಿಂದ ಜನಕ್ಕೆ ತಪ್ಪು ಮಾಹಿತಿ ಹೋಗಿದೆ. ಕೇವಲ ಕೋಲಾರ ಕೆರೆಗಳು ಮಾತ್ರ ತುಂಬಿದರೆ ಬೇರೆ ತಾಲೂಕಿನ ಕೆರೆಗಳು ತುಂಬುವುದು ಬೇಡವೇ ಎಂದು ಪ್ರಶ್ನಿಸಿದರು.

ಎಲ್ಲರಿಗೂ ನೀರು ಹರಿಯುತ್ತೆ: ಕೆ.ಸಿ. ವ್ಯಾಲಿ ಯೋಜನೆಯಿಂದ ನಮಗೆ ಕೆಲವೇ ಎಂಎಲ್ಡಿ ನೀರು ಹರಿಯುತ್ತಿದ್ದು, ಹೆಚ್ಚುವರಿಯಾಗಿ ಹತ್ತು ದಿನದಲ್ಲಿ ಹರಿಯಲಿದೆ. ಆಗ ಮಾಲೂರಿನ ಕೆರೆಗಳಿಗೂ ಪಂಪ್‌ ಅಗುತ್ತದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮನವಿ ಮಾಡಿದರು.

ಕೆ.ಸಿ.ವ್ಯಾಲಿ ಯೋಜನೆ ನೀರು ಲಕ್ಷ್ಮೀಸಾಗರ ಕೆರೆಗೆ ಪಂಪ್‌ ಆಗಿ, ಕೆರೆಗಳಿಗೆ ರಾಜಕಾಲುವೆ ಮೂಲಕ ಹರಿಯುತ್ತದೆ. ಎರಡೂ ಯೋಜನೆಯ ನೀರು ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು. ಯರಗೋಳ್‌ ಯೋಜನೆಯಲ್ಲಿ ವರ್ಷ ಪೂರ್ತಿ ನೀರು ಲಭ್ಯವಾಗುವುದಿಲ್ಲ. ಎತ್ತಿನಹೊಳೆ ಯೋಜನೆಯಿಂದ ನೀರನ್ನು ಬೈರಗುಂಡ್ಲುಗೆ ಎತ್ತುವಳಿ ಮಾಡಿಕೊಂಡು ಕೆರೆಗಳಿಗೆ ಪೆೈಪ್‌ಲೈನ್‌ ಮೂಲಕ ನೇರವಾಗಿ ಹರಿಸಿಕೊಳ್ಳಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಎಂಎಲ್ಸಿ ಚೌಡರೆಡ್ಡಿ, ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಜಿಪಂ ಸಿಇಒ ಜಗದೀಶ್‌ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.