ಗಂಟಲು-ಚಪ್ಪೇ ರೋಗದ ಆತಂಕ
•ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಭೀತಿ•ಪಶುವೈದ್ಯರಿಗೆ ರೈತಾಪಿ ಜನರ ಮೊರೆ
Team Udayavani, Jul 2, 2019, 1:24 PM IST
ರೋಗ ಬಾಧಿತ ಹಸುವಿನ ಗೊರಸು (ಸಂಗ್ರಹ ಚಿತ್ರ)
ಧಾರವಾಡ: ಜಿಲ್ಲೆಯಲ್ಲಿ ಡೆಂಘೀ, ಚಿಕೂನ್ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಆತಂಕ ಹೆಚ್ಚಾಗಿರುವ ಮಳೆಗಾಲದ ಸಮಯದಲ್ಲಿ ರೈತಾಪಿ ವರ್ಗದ ಜೀವನಾಡಿ ಜಾನುವಾರುಗಳಿಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಜಿಲ್ಲೆಯ ಅಲ್ಲಲ್ಲಿ ಗಳನೆ (ಗಂಟಲು) ಬೇನೆ, ಚಪ್ಪೇ ಬೇನೆ ಹಾಗೂ ಕಾಲುಬೇನೆ ರೋಗಗಳ ಲಕ್ಷಣ ಕಂಡುಬಂದಿದ್ದು, ಒಂದಿಷ್ಟು ಪ್ರಕರಣಗಳಲ್ಲಿ ಜಾನುವಾರುಗಳು ಮೃತಪಟ್ಟಿರುವ ಬಗ್ಗೆಯೂ ವರದಿಯಾಗುತ್ತಿವೆ. ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ಎರಡು ದಿನದ ಹಿಂದೆಯಷ್ಟೇ ಹಸುವಿನ ಕರುವೊಂದು ಚಪ್ಪೇ ರೋಗಕ್ಕೆ ಬಲಿ ಆಗಿದ್ದರೆ, ಎತ್ತೂಂದು ಗಂಟಲು ಬೇನೆ ರೋಗಕ್ಕೆ ಮೃತಪಟ್ಟಿದೆ. ಅದರಂತೆ ತಾಲೂಕಿನ ವಿವಿಧ ಗ್ರಾಮದಲ್ಲಿ ರೋಗದ ಲಕ್ಷಣಗಳು ಕಂಡು ಬಂದಿದ್ದು, ಚಿಕಿತ್ಸೆಗಾಗಿ ರೈತರು ಪಶು ವೈದ್ಯರಿಗೆ ಮೊರೆ ಇಡುತ್ತಿದ್ದಾರೆ.
ಆದರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಮಾತ್ರ ಈ ಬಗ್ಗೆ ಮಾಹಿತಿ ಇಲ್ಲ. ಹಿಂದಿನ ವರ್ಷಗಳಲ್ಲಿ ಹಾಗೂ ಈ ವರ್ಷದಲ್ಲಿ ಇಂತಹ ರೋಗಗಳಿಗೆ ಬಲಿಯಾದ ಜಾನುವಾರುಗಳ ಮಾಹಿತಿ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಬಳಿಯೇ ಇಲ್ಲ.
ಇಲಾಖೆಯ ರೋಗ ಅಧ್ಯಯನ ಶಾಖೆ ನೀಡಿರುವ ವರದಿಯಂತೆ ಜಿಲ್ಲೆಯ ಸಾಂಕ್ರಾಮಿಕ ರೋಗ ಕಂಡುಬರುವ ಪ್ರದೇಶದಲ್ಲಿ ಮುಂಜಾಗೃತಾ ಕ್ರಮವಾಗಿ ಲಸಿಕೆ ಹಾಕಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಕೊರತೆ ಇರುವ ಪಶು ವೈದ್ಯಾಧಿಕಾರಿಗಳ ನೇಮಕಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.•ಪರಮೇಶ್ವರ ನಾಯಕ, ಉಪನಿರ್ದೇಶಕ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
•ಶಶಿಧರ್ ಬುದ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್