ಸಂಚಾರ ನಿಲ್ಲಿಸಿದ್ದ ‘ಸಿಟಿ ಟೂರ್‌ ಬಸ್‌’ ಮತ್ತೆ ಆರಂಭ?


Team Udayavani, Jul 3, 2019, 5:00 AM IST

25

ಸಾಂದರ್ಭಿಕ ಚಿತ್ರ

ಮಹಾನಗರ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ (ಕೆಎಸ್‌ಟಿಡಿಸಿ)ಯಿಂದ ಪ್ರವಾಸಿಗರಿಗೆ ಮಂಗಳೂರು ನಗರದಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವುದಕ್ಕೆ ವ್ಯವಸ್ಥೆ ಮಾಡಿದ್ದ ‘ಸಿಟಿ ಟೂರ್‌ ಬಸ್‌’ ಸೇವೆಯು ಸ್ಥಗಿತಗೊಂಡು ಮೂರು ವರ್ಷ ಕಳೆದಿದ್ದು, ಈಗ ಬಹು ಜನರ ಬೇಡಿಕೆಯಿಂದಾಗಿ ಪುನರಾರಂಭಗೊಳ್ಳುವ ಲಕ್ಷಣ ಕಾಣಿಸುತ್ತಿದೆ.

ಸ್ಮಾರ್ಟ್‌ ಸಿಟಿಯಾಗಿ ಮಂಗಳೂರು ನಗರ ಬೆಳೆಯುತ್ತಿದ್ದು, ದಿನದಿಂದ ದಿನಕ್ಕೆ ಕರಾವಳಿಗೆ ಆಗಮಿಸುವ ಪ್ರವಾಸಿಗರು ಕೂಡ ಹೆಚ್ಚುತ್ತಿದ್ದಾರೆ. ಅದರಲ್ಲಿಯೂ ವಿದೇಶಿ ಪ್ರವಾಸಿಗರ ಫೆವರೆಟ್ ತಾಣವಾಗಿ ಮಂಗಳೂರು ಮಾರ್ಪಾಡಾಗುತ್ತಿದೆ. ಇದಕ್ಕೆ ತಕ್ಕಂತೆ ಪ್ರವಾಸಿಗರನ್ನು ಸೆಳೆಯಲು ಬೀಚ್ ಉತ್ಸವ, ನದಿ ಉತ್ಸವ, ಸರ್ಫಿಂಗ್‌, ಅಂತಾರಾಷ್ಟ್ರೀಯ ಗಾಳಿಪಟ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.

ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಸ್ವಂತ ವಾಹನಗಳಿಲ್ಲದಿದ್ದರೆ, ಸುತ್ತಮುತ್ತಲಿನ ಪ್ರೇಕ್ಷಣೀಯ ಜಾಗಗಳನ್ನು ವೀಕ್ಷಿಸಬೇಕಾದರೆ ಹೆಚ್ಚಿನ ಹಣ ನೀಡಿ ಬಾಡಿಗೆ ವಾಹನಗಳಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಇದೆ. ಇದೇ ಕಾರಣಕ್ಕೆ ಈಗ ಸಿಟಿ ಟೂರ್‌ ಬಸ್‌ ಪುನಃ ಆರಂಭಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಕಚೇರಿಯಿಂದ ರಾಜ್ಯ ಕಚೇರಿಗೆ ಮನವಿ ಮಾಡಲು ನಿರ್ಧರಿಸಿದೆ.

ಇದರ ಜತೆಗೆ ಈ ಪ್ರದೇಶದ ಜನಪ್ರತಿನಿಧಿಗಳು ಕೂಡ ರಾಜ್ಯ ಸರಕಾರಕ್ಕೆ ಒತ್ತಡ ಹಾಕಿದರೆ ಕೆಲವೇ ದಿನಗಳಲ್ಲಿ ಮಂಗಳೂರು ನಗರದ ಪ್ರವಾಸಿ ತಾಣಗಳಿಗೆ ಟೂರಿಂಗ್‌ ಬಸ್‌ ಓಡಲಿದೆ.

2016ರಲ್ಲಿ ಮಂಗಳೂರಿನಲ್ಲಿತ್ತು

2016ರ ಎ. 17ರಂದು ಪಿಲಿಕುಳ ಡಾ| ಶಿವರಾಮ ಕಾರಂತ ನಿಸರ್ಗಧಾಮದಲ್ಲಿ ನಡೆದ ಸಮಾರಂಭದಲ್ಲಿ ಅಂದಿನ ಪ್ರವಾಸೋದ್ಯಮ ಸಚಿವರಾಗಿದ್ದ ಆರ್‌.ವಿ. ದೇಶಪಾಂಡೆ ಅವರು ಕೆಎಸ್‌ಟಿಡಿಸಿ ಬಸ್‌ಗೆ ಚಾಲನೆ ನೀಡಿದ್ದರು. ಆರಂಭದಲ್ಲಿ ಪ್ರವಾಸಿಗರಿಂದ ಉತ್ತಮ ಸ್ಪಂದನೆ ಇತ್ತು. ಮಳೆಗಾಲ ಕೊನೆಗೊಳ್ಳುವುದರಲ್ಲಿ ಬಸ್‌ನ ಕೆಲವೊಂದು ಬಿಡಿ ಭಾಗಗಳು ಹದಗೆಟ್ಟಿತ್ತು. ಕೆಲವು ದಿನಗಳ ಬಳಿಕ ಈ ಬಸ್‌ ಅನ್ನು ಬೆಂಗಳೂರಿಗೆ ಸಾಗಿಸಲಾಗಿತ್ತು. ಅದಾದ ಬಳಿಕ ಟೂರಿಂಗ್‌ ಬಸ್‌ ಮಂಗಳೂರಿನಲ್ಲಿ ಓಡಲಿಲ್ಲ.

ಈ ಹಿಂದೆ ಇದ್ದಂತಹ ಕೆಎಸ್‌ಟಿಡಿಎಂಸಿ ಪ್ರವಾಸಿ ಬಸ್‌ ಲಾಲ್ಬಾಗ್‌ನಿಂದ ಹೊರಟು ಕುದ್ರೋಳಿ, ಕದ್ರಿ, ಮಂಗಳಾದೇವಿ ದೇವಸ್ಥಾನ, ಸಂತ ಅಲೋಶಿಯಸ್‌ ಚಾಪೆಲ್, ಪಿಲಿಕುಳ ನಿಸರ್ಗಧಾಮ, ಜೈವಿಕ ಉದ್ಯಾನವನ, ತಣ್ಣೀರುಬಾವಿ ಟ್ರೀಪಾರ್ಕ್‌, ಕಡಲತೀರದಿಂದ ಲಾಲ್ಬಾಗ್‌ಗೆ ತೆರಳುತ್ತಿತ್ತು. ಕನಿಷ್ಠ 10 ಮಂದಿ ಬಸ್‌ನಲ್ಲಿರಬೇಕು ಎಂಬ ಷರತ್ತು ಇತ್ತು. ವಯಸ್ಕರಿಗೆ 190 ರೂ. ಮತ್ತು ವಿದ್ಯಾರ್ಥಿಗಳಿಗೆ ಶೇ. 10 ರಿಯಾಯಿತಿ ನೀಡಲಾಗಿತ್ತು.

ಸರಕಾರದ ಗಮನ ಸೆಳೆಯಲಾಗುವುದು

ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ದೇಶ ವಿದೇಶಗಳಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಓಡಾಟ ನಿಲ್ಲಿಸಿದ್ದ ಕೆಎಸ್‌ಟಿಡಿಸಿಯ ಸಿಟಿ ಟೂರ್‌ ಬಸ್‌ ಪುನರಾರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಗಮನ ಸೆಳೆಯಲಾಗುವುದು.
– ವೇದವ್ಯಾಸ ಕಾಮತ್‌, ಶಾಸಕ

ಎಂಟು ಪ್ರವಾಸಿ ತಾಣ ವೀಕ್ಷಣೆ

ಈ ಹಿಂದೆ ಇದ್ದಂತಹ ಕೆಎಸ್‌ಟಿಡಿಎಂಸಿ ಪ್ರವಾಸಿ ಬಸ್‌ ಲಾಲ್ಬಾಗ್‌ನಿಂದ ಹೊರಟು ಕುದ್ರೋಳಿ, ಕದ್ರಿ, ಮಂಗಳಾದೇವಿ ದೇವಸ್ಥಾನ, ಸಂತ ಅಲೋಶಿಯಸ್‌ ಚಾಪೆಲ್, ಪಿಲಿಕುಳ ನಿಸರ್ಗಧಾಮ, ಜೈವಿಕ ಉದ್ಯಾನವನ, ತಣ್ಣೀರುಬಾವಿ ಟ್ರೀಪಾರ್ಕ್‌, ಕಡಲತೀರದಿಂದ ಲಾಲ್ಬಾಗ್‌ಗೆ ತೆರಳುತ್ತಿತ್ತು. ಕನಿಷ್ಠ 10 ಮಂದಿ ಬಸ್‌ನಲ್ಲಿರಬೇಕು ಎಂಬ ಷರತ್ತು ಇತ್ತು. ವಯಸ್ಕರಿಗೆ 190 ರೂ. ಮತ್ತು ವಿದ್ಯಾರ್ಥಿಗಳಿಗೆ ಶೇ. 10 ರಿಯಾಯಿತಿ ನೀಡಲಾಗಿತ್ತು.

ಅಧಿಕಾರಿಗಳ ಗಮನಕ್ಕೆ ತರಲಾಗುವುದು

ಕೆಎಸ್‌ಟಿಡಿಸಿ ಟೂರಿಂಗ್‌ ಬಸ್‌ ಕೆಲವು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಓಡುತ್ತಿತ್ತು. ಪ್ರವಾಸಿಗರ ಸಂಖ್ಯೆ ಕಡಿಮೆ ಇದ್ದ ಕಾರಣ ನಿಲ್ಲಿಸಲಾಯಿತು. ಪುನರಾರಂಭಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪ್ರವಾಸೋ ದ್ಯಮ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು.
– ಸುಧೀರ್‌ ಗೌಡ, ಪ್ರವಾಸೋದ್ಯಮ ಇಲಾಖೆ ಸಮಾಲೋಚಕ

•ನವೀನ್‌ ಭಟ್ ಇಳಂತಿಲ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.