ಭೋದನೆ ಬಹಿಷ್ಕರಿಸಿ ಪ್ರತಿಭಟನೆಗಿಳಿದ ಶಿಕ್ಷಕರು

•ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಲು ಒತ್ತಾಯ

Team Udayavani, Jul 3, 2019, 10:20 AM IST

hv-tdy-2..

ಬ್ಯಾಡಗಿ: ಕಲ್ಲೇದೇವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದರು.

ಬ್ಯಾಡಗಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸದಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತಾಲೂಕಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಕೈಗೆ ಕಪ್ಪುಪಟ್ಟಿ ಧರಿಸಿ, 6-7 ನೇ ತರಗತಿ ಪಾಠ ಬೋಧನೆ ಬಹಿಷ್ಕರಿಸಿ ಹಠಾತ್‌ ಪ್ರತಿಭಟನೆ ನಡೆಸಿರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕರೆಯ ಮೇರೆಗೆ ಶಿಕ್ಷಕರು ದಿಢೀರ್‌ ನಿರ್ಧಾರ ಕೈಗೊಂಡಿದ್ದು, ಅನುಭವ ಮತ್ತು ಅರ್ಹತೆ ಪರಿಗಣಿಸಿ ವೇತನ ಪರಿಷ್ಕರಣೆ ಮತ್ತು ಪದೋನ್ನತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ಶಿಕ್ಷಕರು ದೂರಿದರು.

ಶಿಕ್ಷಕರ ಪ್ರತಿಭಟನೆಯಿಂದಾಗಿ ತಾಲೂಕಿನ ಯಾವುದೇ ಪ್ರಾಥಮಿಕ ಶಾಲೆಗಳಲ್ಲಿ (ಇಂಗ್ಲಿಷ್‌, ಸಮಾಜ, ವಿಜ್ಞಾನ, ಗಣಿತ) ಇನ್ನಿತರ ಪಾಠಗಳು ನಡೆಯದೆ ಮಕ್ಕಳು ಶಾಲೆಯಿಂದ ಹೊರಗುಳಿದರು.

ಈ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಮಹೇಶ್‌ ನಾಯಕ್‌, ಪ್ರಾಥಮಿಕ ಶಾಲೆಯಲ್ಲಿ ನೇಮಕವಾಗಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ರಾಜ್ಯದ ಇಂತಹ ಸುಮಾರು 80 ಸಾವಿರಕ್ಕೂ ಅಧಿಕ ಶಿಕ್ಷಕರು ಪದವೀಧರರಾಗಿದ್ದೇವೆ. ಈ ವರೆಗೂ ನಮ್ಮ ಅನುಭವ ಪಡೆದುಕೊಂಡಿರುವ ಸರ್ಕಾರ 6 ಮತ್ತು 7 ತರಗತಿಗಳಿಗೂ ಪಾಠಗಳನ್ನು ಹೇಳುವಂತೆ ಸೂಚನೆ ನೀಡಿತ್ತು. ಇಲಾಖೆ ಸೂಚನೆ ಮೇರೆಗೆ ಪಾಠಗಳನ್ನು ಹೇಳುತ್ತಿದ್ದಾರೆ. ಪರ್ಯಾಯವಾಗಿ ಪ್ರೌಢಶಾಲೆ ಶಿಕ್ಷಕರಿಂದ ಹಿಡಿದು ಜಿಲ್ಲಾ ಉಪನಿರ್ದೇಶಕವರೆಗೂ ಪದೋನ್ನತಿ ನಿವೃತ್ತಿ ಹೊಂದಿದ ಉದಾಹರಣೆಗಳಿವೆ ಎಂದರು.

ಸರ್ಕಾರಿ ನೌಕರರ ಸಂಘದ ಸದಸ್ಯ ಮಹದೇವ ಕರಿಯಣ್ಣನವರ ಮಾತನಾಡಿ, ಈ ವರೆಗೂ ಪದವೀಧರ ಶಿಕ್ಷಕರನ್ನು ಮನ ಬಂದಂತೆ ದುಡಿಸಿಕೊಂಡು ಇದೀಗ ದಿಢೀರ್‌ ಹಿಂಬಡ್ತಿ ಮಾದರಿಯಲ್ಲಿ ನಮ್ಮ ಸೇವೆಯನ್ನು ಕೇವಲ 1 ರಿಂದ 5 ತರಗತಿಗೆ ಸೀಮಿತಗೊಳಿಸಲಾಗಿದೆ. ರಾಜ್ಯದ ಸುಮಾರು 80 ಸಾವಿರ ಶಿಕ್ಷಕರಿಗೆ ಅನ್ಯಾಯವಾಗಿದ್ದು, ಹೈಸ್ಕೂಲ್ ಕಾಲೇಜ್‌ ಇನ್ನಿತರ ಕಡೆಗಳಿಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದ ನಮ್ಮೆಲ್ಲರ ಆಸೆಗೆ ಇಲಾಖೆ ತಣ್ಣೀರೆರಚಿದೆ ಎಂದು ಆರೋಪಿಸಿದರು.

ಪದವೀಧರ ಶಿಕ್ಷಕ ಶಂಕರ್‌ ಕಿಚಡಿ ಮಾತನಾಡಿ, ನಮ್ಮಲ್ಲಿರುವ ಅನುಭವ ಮತ್ತು ಅರ್ಹತೆ ಎರಡೂ ಇದ್ದರೂ ವೇತನ ಪರಿಷ್ಕರಣೆ ಮತ್ತು ಪದೋನ್ನತಿ ನೀಡಲು ಹಿಂದೇಟು ಹಾಕುತ್ತಿರುವುದು ದುರ್ದೈವದ ಸಂಗತಿ. ಕೂಡಲೇ ನಮ್ಮನ್ನೂ ಪದವೀಧರ ಶಿಕ್ಷಕರೆಂದು ಪರಿಗಣಿಸುವ ಮೂಲಕ ಸಮಾನ ಕೆಲಸಕ್ಕೆ ಸಮಾನ ವೇತನ ಎನ್ನುವ ಮಾತಿನಂತೆ ನಮ್ಮ ವೇತನವನ್ನೂ ಪರಿಷ್ಕರಿಸಿ, ಈಗಾಗಲೇ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ನಿರ್ಧಾರವನ್ನು ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.