ಅವ್ಯವಸ್ಥೆ ಆಗರವಾದ ತಾಲೂಕು ಕಚೇರಿ!

ತಾಲೂಕು ಆಡಳಿತ ವೈಖರಿಗೆ ಜನರ ಹಿಡಿಶಾಪ •ಮಿತಿ ಮೀರಿದ ಮಧ್ಯವರ್ತಿಗಳ ಹಾವಳಿ

Team Udayavani, Jul 3, 2019, 12:41 PM IST

3-July-18

ಸೊರಬ: ಪಟ್ಟಣದ ತಾಲೂಕು ಕಚೇರಿಯ ಹೊರ ನೋಟ.

ಎಚ್.ಕೆ.ಬಿ. ಸ್ವಾಮಿ
ಸೊರಬ:
ಕುಡಿಯಲು ನೀರಿಲ್ಲ, ಶೌಚಗೃಹ ವ್ಯವಸ್ಥೆ ಇಲ್ಲ. ಕಟ್ಟಡದ ಸುತ್ತ ಪೊದೆಗಳು ಬೆಳೆದಿದ್ದು ಹಲವು ಅವ್ಯವಸ್ಥೆಗಳ ಆಗರವಾಗಿ ಪಟ್ಟಣದ ತಾಲೂಕು ಕಚೇರಿಯ ಆವರಣ ಮಾರ್ಪಟ್ಟಿದೆ.

ಹೌದು, ಸುಮಾರು 300 ಹಳ್ಳಿಗಳ ಕೇಂದ್ರ ಪ್ರದೇಶವಾದ ಇಲ್ಲಿನ ತಾಲೂಕು ಕಚೇರಿಗೆ ನಿತ್ಯ ಸಾವಿರಾರು ಮಂದಿ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಮತ್ತು ದಾಖಲೆಗಳ ಕ್ರೋಢೀಕರಣಕ್ಕಾಗಿ ಆಗಮಿಸುತ್ತಾರೆ. ಆದರೆ, ಇಲ್ಲಿಗೆ ಆಗಮಿಸಿದ ಸಾರ್ವಜನಿಕರು ಹಲವು ಅವ್ಯವಸ್ಥೆಗಳ ನಡುವೆ ಪರದಾಡುತ್ತ ಹಿಡಿಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ.

ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ: ನಿತ್ಯ ಹಲವು ಕಾರ್ಯ ನಿಮಿತ್ತ ಆಗಮಿಸುವ ಸಾರ್ವಜನಿಕರಿಗೆ ಶೌಚಗೃಹ ವ್ಯವಸ್ಥೆ ಇಲ್ಲದೆ, ಕಟ್ಟಡದ ಕಾಂಪೌಂಡ್‌ ಮತ್ತು ಗೋಡೆಗಳೇ ಶೌಚಗೃಹಗಳಾಗಿ ಮಾರ್ಪಾಡಾಗಿವೆ. ಕಚೇರಿಯಲ್ಲಿ ಕೆಳ ಹಂತದಲ್ಲಿ ಒಂದು ಶೌಚಗೃಹವಿದ್ದು ಬಳಕೆಯಿಂದ ದೂರ ಸರಿದು ದಶಕಗಳೇ ಸರಿದಿವೆ. ಉಳಿದಂತೆ ಮೇಲ್ಮಹಡಿಯಲ್ಲಿರುವ ಶೌಚಗೃಹ ಕಚೇರಿ ಸಿಬ್ಬಂದಿಗೆ ಮಾತ್ರ ಬಳಕೆಯಲ್ಲದೆ. ಇತ್ತೀಚೆಗೆ ಕಟ್ಟಡದ ಹಿಂಭಾಗದಲ್ಲಿ ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶೌಚಗೃಹವೂ ನಿರ್ವಹಣೆಯ ಕೊರತೆಯನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆಗೂ ಪರದಾಡುವಂತಾಗಿದೆ. ಇನ್ನು ಮಹಿಳೆಯರ ಸ್ಥಿತಿಯಂತೂ ಹೇಳತೀರದು. ಉಳಿದಂತೆ ಕಟ್ಟಡದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸದಿರುವುದು ತಾಲೂಕು ಕಚೇರಿಯ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಮಧ್ಯವರ್ತಿಗಳಿದ್ದರೆ ಮಾತ್ರ ಕಾರ್ಯ: ತಾಲೂಕು ಕಚೇರಿಯಲ್ಲಿ ಉಪನೋಂದಣಾಧಿಕಾರಿ ಕಚೇರಿ, ಸರ್ವೆ ವಿಭಾಗ, ಭೂ ದಾಖಲೆಗಳ ವಿಭಾಗ ಸೇರಿ ಹಲವು ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಉಪನೋಂದಣಾಧಿಕಾರಿ ಕಚೇರಿಯಂತೂ ಭ್ರಷ್ಟಾಚಾರಗಳ ಸರಮಾಲೆಯನ್ನೇ ಹೊತ್ತಿದ್ದು, ಹಣವಿದ್ದರೆ ಮಾತ್ರ ಕೆಲಸವಾಗುತ್ತದೆ ಎಂಬ ಆರೋಪ ಕೇಳಿಬರುತ್ತಿದೆ. ಸರ್ಕಾರದ ಸೌಲಭ್ಯಗಳಾದ ಇಸಿ, ನಕಲು ಮಾರಾಟ ಪತ್ರ, ಮದುವೆ ನೋಂದಣಿ, ನಿವೇಶನ ನೋಂದಣಿ ಸೇರಿ ಒಂದೊಂದು ಕಾರ್ಯಕ್ಕೂ ದರ ನಿಗದಿ ಪಡಿಸಲಾಗಿದೆ. ಇವೆಲ್ಲವೂ ಸರ್ಕಾರಿ ಶುಲ್ಕದ ಹೊರತಾಗಿ ಎಂಬುದು ಗಮನಾರ್ಹ. ಉಪನೋಂದಣಿ ಕಚೇರಿಯಲ್ಲಿ ಮದ್ಯವರ್ತಿಗಳ ಸಹಾಯವಿಲ್ಲದೇ ಯಾವುದೇ ಕಾರ್ಯಗಳು ನಡೆಯುವುದಿಲ್ಲ ಎನ್ನುವ ಗಂಭೀರ ಆರೋಪ ಸಾರ್ವಜನಿಕರದ್ದಾಗಿದೆ. ಉಳಿದಂತೆ ಸರ್ವೆ ವಿಭಾಗ, ಭೂ ದಾಖಲೆಗಳ ವಿಭಾಗ ಹಲವು ವಿಭಾಗಗಳ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಾರೆ. ರೈತರು ಹಾಗೂ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ನೀಡುವುದಿಲ್ಲ ಎನ್ನಲಾಗುತ್ತಿದೆ.

ತುಕ್ಕು ಹಿಡಿಯುತ್ತಿವೆ ಉಪಕರಣಗಳು: ಕೇಂದ್ರ ಸರ್ಕಾರದ ಸ್ವಚ್ಛ ಭಾರತದ ಅಭಿಯಾನದ ಕಲ್ಪನೆಯೇ ಇಲ್ಲಿನ ತಾಲೂಕು ಕಚೇರಿಯಲ್ಲಿ ಇಲ್ಲ ಎಂಬಂತಾಗಿದೆ. ಕಟ್ಟಡದ ಸುತ್ತ ಪೊದೆಗಳು ಬೆಳೆದು ನಿಂತಿವೆ. ಕಸ ವಿಲೇವಾರಿಯೂ ಸಮರ್ಪಕವಾಗಿ ನಡೆಯುತ್ತಿಲ್ಲ. ವಿವಿಧ ವಿಭಾಗಗಳ ತ್ಯಾಜ್ಯಗಳು ಹಾಗೂ ಕಸ ಮತ್ತಿತರ ವಸ್ತುಗಳನ್ನು ಕಟ್ಟಡದ ಸುತ್ತ ಎಲ್ಲೆಂದರಲ್ಲಿ ಎಸೆಯಲಾಗಿದೆ. ಇದು ಕಟ್ಟಡದ ಒಳ ಆವರಣವನ್ನೂ ಬಿಟ್ಟಿಲ್ಲ. ಕಟ್ಟಡ ಬಲಭಾಗದಲ್ಲಿರುವ ಜನರೇಟರ್‌ ಪೊದೆಗಳ ನಡುವೆ ಹುದುಗಿ ಹೋಗಿದೆ. ಯಂತ್ರದ ಬಹುಪಾಲು ಭಾಗಗಳು ತುಕ್ಕು ಹಿಡಿದಿರುವ ಸ್ಥಿತಿಯಲ್ಲಿ ಗೋಚರಿಸುತ್ತಿದೆ. ಹವಾ ನಿಯಂತ್ರಿತ ಯಂತ್ರಗಳು ಸಹ ಹಾಳಾಗುವ ಸ್ಥಿತಿಯಲ್ಲಿವೆ. ಮತ್ತೂಂದಡೆ ಕಚೇರಿಯಲ್ಲಿ ಈ ಹಿಂದೆ ಬಳಕೆಯಲ್ಲಿದ್ದ ತಹಶೀಲ್ದಾರರ ವಾಹನವು ಸಹ ತುಕ್ಕು ಹಿಡಿಯುತ್ತಿರುವ ಸ್ಥಿತಿಯಲ್ಲಿದ್ದರೂ ಯಾರೋಬ್ಬರೂ ಇತ್ತ ಕಡೆ ಗಮನ ಹರಿಸಿಲ್ಲ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.