ಪೊಲೀಸರ ದಾಳಿ: ಏಳು ಜನರ ಬಂಧನ
Team Udayavani, Jul 3, 2019, 2:38 PM IST
ಗಂಗಾವತಿ: ಅಕ್ರಮಕ್ಕೆ ಬಳಸಿದ ವಾಹನ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿರುವುದು.
ಗಂಗಾವತಿ: ಅಕ್ರಮ ಫಿಲ್ಟರ್ ಮರಳು ದಂಧೆ ನಡೆಸುವವರ ಮೇಲೆ ದಾಳಿ ನಡೆಸಿ ಅಕ್ರಮಕ್ಕೆ ಬಳಸುತ್ತಿದ್ದ ಜೆಸಿಬಿ ಯಂತ್ರ, 7 ಟ್ರ್ಯಾಕ್ಟರ್, ಒಂದು ಬುಲೆರೋ ವಾಹನ ಸಮೇತ 7 ಜನರನ್ನು ಬಂಧಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಶೇಖರ ಪಾಟೀಲ ತಿಳಿಸಿದ್ದಾರೆ.
ತಾಲೂಕಿನ ವೆಂಕಟಗಿರಿ ಬಂಡ್ರಾಳ ಮಧ್ಯೆ ಉಪ್ಪಾರ ಬಸಪ್ಪ ಎಂಬುವವರ ಹೊಲದಲ್ಲಿ ಹಲವು ತಿಂಗಳಿಂದ ಅಕ್ರಮವಾಗಿ ಫಿಲ್ಟರ್ ಮರಳು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಕ್ರಮ ನಡೆಸುತ್ತಿದ್ದ ಜಾಗ ಪತ್ತೆ ಮಾಡಿ ರವಿವಾರ ರಾತ್ರಿ ದಾಳಿ ನಡೆಸಲಾಗಿದೆ. ಟ್ರ್ಯಾಕ್ಟರ್, ಜೆಸಿಬಿ ಹಾಗೂ ಬುಲೆರೋ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ದಾಳಿಯಲ್ಲಿ ಗ್ರಾಮೀಣ ಸಿಪಿಐ ದೀಪಕ ಭೂಸರಡ್ಡಿ, ಪಿಎಸ್ವೈ ಪ್ರಕಾಶ ಮಾಳೆ ಸೇರಿ ಹಲವು ಪೊಲೀಸರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ