ಹೀಗೊಂದು “ಆತ್ಮ’ ಚರಿತ್ರೆ

ಬಿಡುಗಡೆಗೆ ಸಿದ್ಧಗೊಂಡ "ಕಾಣದಂತೆ ಮಾಯವಾದನು' ಸಿನಿಮಾ

Team Udayavani, Jul 4, 2019, 3:00 AM IST

Kaanadante-Maayavadanu

ಕನ್ನಡದಲ್ಲಿ “ಆತ್ಮ’ಗಳ ಕುರಿತಾದ ಚಿತ್ರಗಳಿಗೇನು ಕೊರತೆ ಇಲ್ಲ. ಆ ಸಾಲಿಗೆ “ಕಾಣದಂತೆ ಮಾಯವಾದನು’ ಚಿತ್ರ ಸೇರ್ಪಡೆಯಾಗಿದೆ. ಹೌದು, ಇದೊಂದು ಆತ್ಮಕಥನ ಎನ್ನಬಹುದು! ಇಲ್ಲೊಬ್ಬ ವ್ಯಕ್ತಿ ಕೊಲೆಯಾದರೂ, ಆತ್ಮ ಮಾತ್ರ ಸುತ್ತುತ್ತಿರುತ್ತೆ. ಆದರೆ, ಆ ಆತ್ಮದ ವಿಶೇಷತೆ ಏನೆಂದರೆ, ತಾನು ಏನೆಲ್ಲಾ ಕೆಲಸ ಮಾಡಬೇಕೋ ಅದೆಲ್ಲವನ್ನೂ ಮಾಡಿ, ತನ್ನ ಸ್ಥಿತಿಗೆ ಕಾರಣರಾದವರ ಮೇಲೆ ಸೇಡು ತೀರಿಸಿಕೊಳ್ಳುತ್ತದೆ.

ಇಷ್ಟು ಹೇಳಿದ ಮೇಲೆ ಇದೊಂದು ಆತ್ಮ ಕುರಿತಾದ ಚಿತ್ರ ಎನಿಸಬಹುದು. ಆದರೆ, ಇಲ್ಲಿ ಅದರಾಚೆಗಿನ ಕಥೆಯೂ ಇದೆ. ಅದನ್ನು ತಿಳಿದುಕೊಳ್ಳಬೇಕಾದರೆ, ಚಿತ್ರ ನೋಡಬೇಕು. ರಾಜ್‌ ಪತ್ತಿಪಾಟಿ ಕಥೆ, ಚಿತ್ರಕಥೆ ಬರೆದು ಮೊದಲ ಸಲ ನಿರ್ದೇಶನ ಮಾಡಿದ್ದಾರೆ. ಚಿತ್ರ ಶುರುವಾಗಿ ಬೆರಳೆಣಿಕೆ ವರ್ಷಗಳಾಗಿವೆ. ಎಲ್ಲಾ ಕೆಲಸ ಮುಗಿಸಿ, ಇದೀಗ ಬಿಡುಗಡೆ ಹಂತಕ್ಕೆ ಬಂದಿದೆ.

ಇಲ್ಲ ಲವ್‌, ಎಮೋಷನ್ಸ್‌, ನೋವು, ನಲಿವು ಸೇರಿದಂತೆ ಮನರಂಜನೆಯ ಅಂಶಗಳೂ ಇವೆ. ವಿಕಾಸ್‌ ಈ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ನಟನೆ ಜೊತೆಗೆ ಸಂಭಾಷಣೆಯಲ್ಲೂ ಸಾಥ್‌ ನೀಡಿದ್ದಾರೆ. ಇನ್ನು, ಚಿತ್ರದ ನಾಯಕಿ ಸಿಂಧುಲೋಕನಾಥ್‌ ಇಲ್ಲಿ ಎನ್‌ಜಿಓ ಒಂದರಲ್ಲಿ ಕೆಲಸ ಮಾಡುವ ಪಾತ್ರ ನಿರ್ವಹಿಸಿದ್ದಾರೆ.

ಅವರದು ನಿರ್ಗತಿಕರಿಗೆ ತಮ್ಮ ಕೈಲಾದಷ್ಟು ಸಹಕಾರ ಮಾಡುವ ಪಾತ್ರದಲ್ಲಿ ಸಾಕಷ್ಟು ಹೊಸತನವೂ ಇದೆಯಂತೆ. ಇಲ್ಲಿ ಅಚ್ಯುತಕುಮಾರ್‌ ಅವರು ಹಿರಿಯ “ಆತ್ಮ’ವಾಗಿ ಕಾಣಿಸಿಕೊಂಡಿದ್ದಾರಂತೆ. ಖಳನಟ ಉದಯ್‌ಕುಮಾರ್‌ ಅವರು ಹೀರೋನನ್ನು ಕೊಲೆ ಮಾಡುವ ಪಾತ್ರ ನಿರ್ವಹಿಸಿದ್ದಾರೆ. ಆ ಸಂದರ್ಭದಲ್ಲೇ ಉದಯ್‌ ನಿಧನರಾದ ಹಿನ್ನೆಲೆಯಲ್ಲಿ ಆ ಪಾತ್ರಕ್ಕೆ “ಭಜರಂಗಿ’ ಲೋಕಿ ನಿರ್ವಹಿಸಿದ್ದಾರೆ.

ಧರ್ಮೇಂದ್ರ ಇಲ್ಲಿ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಾಯಿಯಾಗಿ ಸೀತಾಕೊಟೆ ಇತರರು ನಟಿಸಿದ್ದಾರೆ. ಗುಮ್ಮಿನೇನಿ ವಿಜಯ್‌ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸುಜ್ಞಾ ನಮೂರ್ತಿ ಛಾಯಾಗ್ರಹಣವಿದೆ. ಸುರೇಶ್‌ ಆರ್ಮುಗಮ್‌ ಸಂಕಲನವಿದೆ.

ವಿನೋದ್‌ ಸಾಹಸವಿದೆ. ಅಂದಹಾಗೆ ಯೋಗರಾಜ ಭಟ್‌ ಚಿತ್ರತಂಡಕ್ಕೆ ಶುಭಹಾರೈಸಿರುವುದು ವಿಶೇಷ. ಚಂದ್ರಶೇಖರ್‌ನಾಯ್ಡು, ಅವರೊಂದಿಗೆ ಸೋಮ್‌ಸಿಂಗ್‌, ಪುಷ್ಪ ಸೋಮ್‌ಸಿಂಗ್‌ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.