ಪಂಚೋಡಿ ಕೆರೆಗೆ ಕೂಡಿ ಬಂತೇ ಕಾಯಕಲ್ಪ ಯೋಗ?

ಶಾಸಕರ ಸೂಚನೆಯಂತೆ ಸಣ್ಣ ನಿರಾವರಿ ಇಲಾಖೆ ಎಂಜಿನಿಯರ್‌ ಸ್ಥಳ ಪರಿಶೀಲನೆ

Team Udayavani, Jul 5, 2019, 5:02 AM IST

24

ಸವಣೂರು: ಪಾಲ್ತಾಡಿ ಗ್ರಾಮದ ಪಂಚೋಡಿಯಲ್ಲಿರುವ ಕೆರೆಯ ಅಭಿವೃದ್ದಿಗೆ ಯೋಗ ಕೂಡಿಬಂದಿದೆ. ಸುಮಾರು 75 ಎಕ್ರೆಗಳಿಗಿಂತಲೂ ಹೆಚ್ಚು ಕೃಷಿ ತೋಟಗಳಿಗೆ ನೀರುಣಿಸುತ್ತಿದ್ದ ಈ ಕೆರೆ ಪ್ರಸ್ತುತ ಹೂಳು ತುಂಬಿಕೊಂಡಿದೆ. ಇದರ ಅಭಿವೃದ್ಧಿಗಾಗಿ ಸುಳ್ಯ ಶಾಸಕ ಎಸ್‌. ಅಂಗಾರ ಅವರ ಸೂಚನೆಯಂತೆ ಸಣ್ಣ ನಿರಾವರಿ ಇಲಾಖೆ ಎಂಜಿನಿಯರ್‌ ಸ್ಥಳ ಪರಿಶೀಲನೆ ನಡೆಸಿ ಅಂದಾಜುಪಟ್ಟಿ ಸಿದ್ಧಪಡಿಸಿದ್ದಾರೆ.

ಕೆರೆಯಲ್ಲಿ ಹೂಳು ತುಂಬಿಕೊಂಡಿದ್ದು, ಹೂಳು ತೆಗೆದು ಇನ್ನಷ್ಟು ಉಪಯೋಗಿಯಾಗಿ ಹಾಗೂ ಇನ್ನಷ್ಟು ನೀರು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಶಾಸಕರು ವಿಶೇಷ ಮುತುವರ್ಜಿ ವಹಿಸಿ ಕೆರೆ ಅಭಿವೃದ್ದಿಗಾಗಿ ಮೊದಲ ಹಂತದ ಕಾಮಗಾರಿಗೆ ಈಗಾಗಲೇ 90 ಲಕ್ಷ ರೂ. ಅನುದಾನ ಮೀಸಲಿರಿಸಿದ್ದು, ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳಲಿದೆ.

ಎಂದೂ ಬತ್ತದ ಪಂಚೋಡಿ ಕೆರೆ
ಪಂಚೋಡಿಯಲ್ಲಿನ ಈ ಕೆರೆ ಎಂದೂ ಬತ್ತಿಲ್ಲ. ಇಲ್ಲಿನ ಹಿರಿಯರು ಸುಮಾರು ನೂರು ವರ್ಷಗಳ ಹಿಂದೆ ನಿರ್ಮಾಣ ಮಾಡಿದ ಕೆರೆಯಾಗಿದ್ದು, ಈ ಕೆರೆ ಜಲಸಮೃದ್ಧಿಯಿಂದ ಕೂಡಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ ಕುಡಿಯುವ ನೀರು, ಅಥವಾ ಕೃಷಿ ಬಳಕೆಗೆ ಉಪಯೋಗಿಸುವ ಕೆರೆ, ಬಾವಿಗಳಲ್ಲಿ ಬಿರು ಬೇಸಗೆಯಲ್ಲೂ ನೀರು ಬತ್ತುತ್ತಿರಲಿಲ್ಲ. ಈಗ ಈ ಕೆರೆಯಲ್ಲಿ ಹೂಳು ತುಂಬಿದ್ದರಿಂದ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥಯ ಕಡಿಮೆಯಾಗಿದೆ.

ಉದ್ಯೋಗ ಖಾತರಿಯಿಂದ ಕೆಲಸ
ಈ ಕೆರೆಯನ್ನು 3 ವರ್ಷಗಳ ಹಿಂದೆ ಸವಣೂರು ಗ್ರಾಮ ಪಂಚಾಯತ್‌ ವತಿಯಿಂದ ಉದ್ಯೋಗ ಕಾತರಿ ಯೋಜನೆಯ ಮೂಲಕ ಸ್ಥಳೀಯರು ಹೂಳು ತೆಗೆಯುವ ಕೆಲಸ ಮಾಡಿದ್ದರು. ಆದರೆ ಕೆರೆ ವಿಸ್ತೀರ್ಣವಾಗಿರುವುದರಿಂದ ಕೆರೆಯ ಒಂದು ಭಾಗದಲ್ಲಿ ಮಾತ್ರವೇ ಕೆಲಸ ಮಾಡುವಂತಾಯಿತು. ಕೆರೆಯನ್ನು ಅಭಿವೃದ್ಧಿಪಡಿಸಿ ಸಂಪೂರ್ಣ ಹೂಳೆತ್ತುವ ಕಾರ್ಯ ಮಾಡಿದ್ದರೆ ಇಂದಿಗೂ ಆ ಕೆರೆಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಬೇಸಗೆಗೆ ನೀರಿನ ಅಭಾವ ಇಲ್ಲದಂತೆ ಮಾಡುತ್ತಿತ್ತು. 2 ವರ್ಷಗಳ ಹಿಂದೆ ಇಲ್ಲಿ ಕೆರೆ ಇರುವುದನ್ನು ಕಂಡ ಸುಳ್ಯ ಶಾಸಕ ಎಸ್‌. ಅಂಗಾರ ಈ ಕೆರೆ ಅಭಿವೃದ್ಧಿ ಮಾಡಿದರೆ ಕೃಷಿಕರೇ ಇರುವ ಈ ಭಾಗದ ಜನತೆಗೆ ವರದಾನವಾಗಬಹುದು ಎನ್ನುವ ದೂರದೃಷ್ಟಿಯಿಂದ ಈ ಕೆರೆ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಎಂಜಿನಿಯರ್‌ ಸ್ಥಳ ಪರಿಶೀಲನೆ
ಶಾಸಕ ಎಸ್‌. ಅಂಗಾರ ಅವರ ಸೂಚನೆ ಮೇರೆಗೆ ಸಣ್ಣ ನಿರಾವರಿ ಇಲಾಖೆ ಎಂಜಿನಿಯರ್‌ ಲಕ್ಷ್ಮಣ ಪೂಜಾರಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ., ಸದಸ್ಯ ಸತೀಶ್‌ ಅಂಗಡಿಮೂಲೆ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಾರಾಯಣ ಬಟ್ಟೋಡಿ, ಮಾಜಿ ಉಪಾಧ್ಯಕ್ಷ ರಾಕೇಶ್‌ ರೈ ಕೆಡೆಂಜಿ, ಪುತ್ತೂರು ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಪಾಲ್ತಾಡಿ ಚೈತನ್ಯ ರೈತಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್‌ ಶೆಟ್ಟಿ ಕುಂಜಾಡಿ, ಕೃಷಿಕ ಪದ್ಮಪ್ರಸಾದ್‌ ಆರಿಗ ಪಂಚೋಡಿ, ಉದ್ಯೋಗ ಖಾತರಿ ಯೋಜನೆಯ ಎಂಜಿನಿಯರ್‌ ವಿನೋದ್‌ ಕೊೖಂಗಾಜೆ ಉಪಸ್ಥಿತರಿದ್ದರು.

ಅನುದಾನ ಮೀಸಲಿರಿಸಲಾಗಿದೆ
ನೀರಿನ ಮೂಲವಾದ ಪಂಚೋಡಿ ಕೆರೆಯನ್ನು ಅಭಿವೃದ್ಧಿಪಡಿಸಬೇಕೆನ್ನುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ಮುಖಾಂತರ ಅನುದಾನ ಮೀಸಲಿರಿಸಲಾಗಿದೆ. ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕೆರೆಯ ಅಭಿವೃದ್ದಿ ಕಾಮಗಾರಿ ಆರಂಭಗೊಳ್ಳಲಿದೆ.
– ಎಸ್‌. ಅಂಗಾರ, ಶಾಸಕರು, ಸುಳ್ಯ ವಿಧಾನಸಭಾ ಕ್ಷೇತ್ರ

•ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.