ಕುಡಿದ ನಶೆಯಲ್ಲೇ ಪರೇಡ್‌ಗೆ ರೌಡಿಗಳು ಹಾಜರ್‌!

ಸುಧಾರಿಸಿಕೊಳ್ಳಲು ರೌಡಿಗಳಿಗೆ ತಾಕೀತು

Team Udayavani, Jul 4, 2019, 10:02 AM IST

04-July-3

ಕಲಬುರಗಿ: ಪೊಲೀಸ್‌ ಮೈದಾನದಲ್ಲಿ ಬುಧವಾರ ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ನೇತೃತ್ವದಲ್ಲಿ ರೌಡಿಗಳ ಪರೇಡ್‌ ನಡೆಸಿ, ಎಚ್ಚರಿಕೆ ನೀಡಲಾಯಿತು.

ಕಲಬುರಗಿ: ರೌಡಿಗಳು ಕುಡಿದು ಬೇಕಾಬಿಟ್ಟಿ ಸುತ್ತುವುದು, ನಶೆಯಲ್ಲಿ ಅಲ್ಲಲ್ಲಿ ಗಲಾಟೆ ಮಾಡುವುದು ಸಾಮಾನ್ಯ. ಆದರೆ, ಪೊಲೀಸ್‌ ಗ್ರೌಂಡ್‌ಗೂ ರೌಡಿಗಳು ಕುಡಿದೇ ಕಾಲಿಟ್ಟಿದ್ದರು.

ಹೌದು, ನಗರದ ಪೊಲೀಸ್‌ ಮೈದಾನದಲ್ಲಿ ಬುಧವಾರ ನಡೆದ ಪರೇಡ್‌ಗೆ ಕುಡಿದ ನಶೆಯಲ್ಲೇ ರೌಡಿಗಳು ಹಾಜರಾಗಿ ಪೊಲೀಸರೇ ಆಶ್ಚರ್ಯ ಮಾಡುವಂತೆ ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ನೇತೃತ್ವದಲ್ಲಿ ನಗರ ವ್ಯಾಪ್ತಿಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹೆಸರಿರುವ 150ಕ್ಕೂ ಹೆಚ್ಚು ರೌಡಿಗಳ ಪರೇಡ್‌ ನಡೆಸಲಾಯಿತು. ಎಲ್ಲರನ್ನೂ ವಿಚಾರಿಸಿ ತಪಾಸಣೆ ನಡೆಸುವಾಗ ಮೂವರು ರೌಡಿಗಳು ಮದ್ಯದ ನಶೆಯಲ್ಲಿರುವುದು ಗೊತ್ತಾಯಿತು. ಆಗ ರೌಡಿಗಳಿಗೆ ಕುಡಿದುಕೊಂಡು ಬರುತ್ತಿರಾ ಎಂದು ಪೊಲೀಸರು ತರಾಟೆಗೆ ತೆಗೆದುಕೊಂಡರು.

ನಂತರದಲ್ಲಿ ಅಲ್ಕೋಹಾಲ್ ಪ್ರಮಾಣ ಪರೀಕ್ಷೆ ಮಾಡುವ ಮಾಪನ ತರಿಸಿ ಪರೀಕ್ಷಿಸಲಾಯಿತು. ಇದರಲ್ಲೂ ಕುಡಿದಿರುವುದು ದೃಢ ಪಟ್ಟಿದ್ದರಿಂದ ಮೂವರ ವಿರುದ್ಧ ಪ್ರತ್ಯೇಕ ಕೇಸ್‌ ದಾಖಲಿಸಿ ದಂಡ ವಸೂಲಿ ಮಾಡುವಂತೆ ಪೊಲೀಸರಿಗೆ ಎಸ್‌ಪಿ ಸೂಚಿಸಿದರು.

ಉಳಿದ ಕೆಲ ರೌಡಿಗಳ ಪೂರ್ವಾಪರ ಮಾಹಿತಿ ಕಲೆಹಾಕಿ, ಇವರ ಮೇಲೆ ನಿಗಾ ಇಡುವಂತೆ ಆಯಾ ಠಾಣೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜತೆಗೆ ರೌಡಿಗಳಿಗೆ ಮುಂದಿನಗಳಲ್ಲಿ ಸುಧಾರಿಸಿಕೊಳ್ಳಿ ಎನ್ನುವ ಪಾಠವನ್ನು ಎಸ್‌ಪಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಗೆ ರೌಡಿಗಳಿಂದ ತೊಂದರೆ ಆಗದಂತೆ ನೋಡಿಕೊಳ್ಳಲು ಮತ್ತು ಉಪಟಳ ಮಟ್ಟ ಹಾಕಲು ಪರೇಡ್‌ ನಡೆಸಲಾಗುತ್ತಿದೆ. ಕೆಲ ದಿನಗಳ ಹಿಂದೆ ‘ಎ’ ಕೆಟಗರಿಯ ರೌಡಿಗಳು ಪರೇಡ್‌ ಮಾಡಲಾಗಿತ್ತು. ಇಂದು ‘ಬಿ’ ಕೆಟಗರಿಯ ರೌಡಿಗಳ ಪರೇಡ್‌ ನೆಡಸಲಾಗಿದೆ ಎಂದರು.

ಹೆಚ್ಚಿನ ಉಪಟಳ ಕಂಡು ಬಂದಲ್ಲಿ ಅಂತಹ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸಲಾಗುತ್ತಿದೆ. ಈಗಾಗಲೇ ಅಂತಹವರ ಪಟ್ಟಿ ನೀಡುವಂತೆ ಆಯಾ ಠಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ತಿಂಗಳೊಳಗೆ ಸುಮಾರು 20 ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ಹಾಕಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಡಿಎಸ್‌ಪಿಗಳಾದ ಜೇಮ್ಸ್‌ ಮಿನೇಜಸ್‌, ಎಸ್‌.ಎಂ. ಪಟ್ಟಣಕರ್‌, ಪಾಂಡುರಂಗಯ್ಯ, ವಿಜಯಕುಮಾರ.ವಿ.ಎಚ್., ಇನ್‌ಸ್ಪೆಕ್ಟರ್‌ಗಳಾದ ಶಕೀಲ್ ಅಂಗಡಿ, ರಾಘವೇಂದ್ರ, ಘೋರ್ಪಡೆ, ರಮೇಶ ಕಾಂಬಳೆ ಮುಂತಾದ ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.