ಸಿಎಂ ಸ್ಲಂಗಳಲ್ಲಿ ವಾಸ್ತವ್ಯ ಮಾಡಲಿ

ಸ್ಲಂಗಳ ಸ್ಥಿತಿ ಅರಿತು ಆದ್ಯತೆ ಮೇರೆಗೆ ಅಭಿವೃದ್ಧಿ ಪಡಿಸಿ: ಎ. ನರಸಿಂಹ ಮೂರ್ತಿ

Team Udayavani, Jul 4, 2019, 11:13 AM IST

04-July-14

ಬಳ್ಳಾರಿ: ಗಾಂಧಿಭವನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟದಿಂದ ಬುಧವಾರ ನಡೆದ ಸ್ಲಂ ನಿವಾಸಿಗಳ ಬೃಹತ್‌ ಸಮಾವೇಶದಲ್ಲಿ ಸಂಘದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಮಾತನಾಡಿದರು.

ಬಳ್ಳಾರಿ: ಪ್ರಾಣಿ ಪಕ್ಷಿಗಳಿಗಿಂತ ಕಡೆಯಾಗಿ ಜನರು ಜೀವನ ಸಾಗಿಸುತ್ತಿರುವ ಸ್ಲಂ ಪ್ರದೇಶಗಳಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಸ್ತವ್ಯ ಮಾಡಿ ಅಲ್ಲಿಯ ಸಮಸ್ಯೆಗಳನ್ನು ಅರಿತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸ್ಲಂ ಜನಾಂದೋಲನ ಸಂಘಟನೆಯ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಆಗ್ರಹಿಸಿದರು.

ನಗರದ ಗಾಂಭವನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟದ ಸಹಯೋಗದಲ್ಲಿ ಬುಧವಾರ ಆಯೋಜಿಸಲಾಗಿದ್ದ ಸ್ಲಂ ಜನರ ಬೃಹತ್‌ ಸಮಾವೇಶ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಿಎಂ ಎಚ್.ಡಿ. ಕುಮಾರಸ್ವಾಮಿಯವರು ಕೇವಲ ಗ್ರಾಮಗಳಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ಸ್ಲಂ ಪ್ರದೇಶಗಳಲ್ಲಿ ಜನರು ಪ್ರಾಣಿ ಪಕ್ಷಿಗಳಿಗಿಂತ ಕಡೆಯಾಗಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಘನತೆಯಿಂದ ಬದುಕು ಹಕ್ಕು ಕಲ್ಪಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಹೀಗಾಗಿ ಗ್ರಾಮಗಳಲ್ಲಿ ವಾಸ್ತವ್ಯ ಮಾಡುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸ್ಲಂ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಿ, ಅಲ್ಲಿನ ಸಮಸ್ಯೆಗಳನ್ನು ಅರಿತು ಆದ್ಯತೆಯ ಮೇಲೆ ಇತ್ಯರ್ಥ ಪಡಿಸುವ ಮೂಲಕ ಸ್ಲಂ ಪ್ರದೇಶಗಳೊಂದಿಗೆ ಅಲ್ಲಿನ ಜನರನ್ನು ಅಭಿವೃದ್ಧಿಪಡಿಸಬೇಕು ಎಂದವರು ಒತ್ತಾಯಿಸಿದರು.

ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಬಿಟ್ಟರೆ ಗಣಿನಾಡು ಬಳ್ಳಾರಿಯಲ್ಲೇ ಹೆಚ್ಚಿನ ಮಟ್ಟದಲ್ಲಿ ಕೊಳಚೆ ಪ್ರದೇಶಗಳಲ್ಲಿ ಜನರು ವಾಸಿಸುತ್ತಿದ್ದಾರೆ. ನಗರದ ಅಭಿವೃದ್ಧಿಗೆ ಸ್ಲಂ ನಿವಾಸಿಗಳ ಕೊಡುಗೆ ಅಪಾರ. ನಮ್ಮ ಕೊಡುಗೆಯನ್ನು ಯಾರು ಸ್ಮರಿಸುತ್ತಿಲ್ಲ. ಕೊಳಗೇರಿ ಎಂದರೆ ಸಮಸ್ಯೆಗಳ ಕೇಂದ್ರ ಬಿಂದು ಎಂದು ಬಿಂಬಿಸಲಾಗುತ್ತಿದೆ. ನಮ್ಮಲ್ಲಿರುವ ಶ್ರಮಕ್ಕೆ ಬೆಲೆ ಸಿಗುತ್ತಿಲ್ಲ. ನಮ್ಮ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ಅಘೋಷಿತ ಕೊಳಚೆ ಪ್ರದೇಶಗಳಿಗೆ ಅನುದಾನ ಒದಗಿಸಿ ಅಭಿವೃದ್ಧಿ ಒದಗಿಸಬೇಕು. ಸ್ಲಂ ಜನರ ಮತ ಪಡೆದವರು ಅಭಿವೃದ್ಧಿ ಹೊಂದುತಿದ್ದಾರೆ ಹೊರತು, ಸ್ಲಂ ಜನರು ಅಭಿವೃದ್ಧಿ ಹೊಂದುತ್ತಿಲ್ಲ. ಸ್ಥಳೀಯ ಸಂಸ್ಥೆಗಳ ಅನುದಾನದಲ್ಲಿ ಅಭಿವೃದ್ಧಿ ಮಾಡಬೇಕು ಎಂದವರು ತಿಳಿಸಿದರು.

ಸ್ಲಂ ನಿವಾಸಿಗಳಿಗಿಲ್ಲ ಮನೆ: ರಾಜ್ಯದಲ್ಲಿ 6 ಕೋಟಿ ಜನರು ಇದ್ದಾರೆ. ಇದರಲ್ಲಿ 90 ಲಕ್ಷ ಜನರು ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಶೇ. 2ರಷ್ಟು ಭೂ ಒಡೆತನ ಮಾತ್ರ ಸ್ಲಂ ನಿವಾಸಿಗಳಿಗೆ ಲಭಿಸಿದೆ. ಹಾಗಾದರೆ ಈ ಸರ್ಕಾರಕ್ಕೆ ಸ್ಲಂ ನಿವಾಸಿಗಳ ಬಗ್ಗೆ ಯಾವ ರೀತಿ ಕಾಳಜಿಯಿದೆ ಎಂದು ಪ್ರಶ್ನಿಸಿದ ಅವರು, ಸಮಾಜದಲ್ಲಿ ಗೌರವಯುತವಾಗಿ ಬದುಕುವುದು ಯಾವಾಗ? ಉದ್ಯೋಗ ಸಮರ್ಪಕವಾಗಿ ಒದಗಿಸಬೇಕು. ಭೂ ಒಡೆತನದಲ್ಲಿ ಪಾಲು ಕೊಡಬೇಕು. ದೇಶ ಅಭಿವೃದ್ದಿ ಹೊಂದಿದೆ ಎನ್ನಲಾಗುತ್ತಿದೆ. ನಾವು ಯಾವಾಗ ಅಭಿವೃದ್ಧಿ ಹೊಂದುವುದು ಎಂದು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಹೇಮರಾಜ, ಪಾಲಿಕೆ ಉಪ ಆಯುಕ್ತ ಸಿ. ಭೀಮಣ್ಣ, ಕಾರ್ಯಪಾಲಕ ಅಭಿಯಂತರ ಹೇಮಂತ, ಗಾದಿಲಿಂಗಪ್ಪ, ರಾಮಚಂದ್ರಪ್ಪ, ಶೇಖರಬಾಬು, ಪದಾಕಾರಿಗಳು, ಕಾರ್ಯಕರ್ತರು ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.