ನದಿ ಜೋಡಿಸಿ, ನೀರಾವರಿ ಸಮಸ್ಯೆ ನಿವಾರಿಸಿ

ಬಿಜೆಪಿ ಸಂಸದರ ಗೆಲ್ಲಿಸಿದ ಜನರಿಂದ ನಿರೀಕ್ಷೆಗಳ ಮಹಾಪೂರ • ಕೇಂದ್ರ ಬಜೆಟ್ನಿಂದ ಏನು ಬೇಕು?

Team Udayavani, Jul 4, 2019, 4:01 PM IST

04-July-35

ಕೋಲಾರ ರ್ವೆಲ್ವೆ ನಿಲ್ದಾಣದಿಂದ ಬೆಂಗಳೂರಿಗೆ ನೇರ ರೈಲ್ವೆ ಸಂಪರ್ಕ ಕಲ್ಪಿಸಬೇಕೆಂಬುದು ಜನತೆಯ ಬಹು ವರ್ಷಗಳ ಬೇಡಿಕೆಯಾಗಿದೆ.

ಕೆ.ಎಸ್‌.ಗಣೇಶ್‌
ಕೋಲಾರ:
ದೇಶದ ಮೊದಲ ಮಹಿಳಾ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಎನ್‌ಡಿಎ ಸರ್ಕಾರದ ಎರಡನೇ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸನ್ನದ್ಧರಾಗಿದ್ದಾರೆ. ದೇಶಾದ್ಯಂತ ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಇದರಿಂದ ಜಿಲ್ಲೆಯೂ ಹೊರತಾಗಿಲ್ಲ.

ಪ್ರಧಾನಿ ಮೋದಿ ನೇತೃತ್ವದ ಮೊದಲ ಅವಧಿಯ ಸರ್ಕಾರದಲ್ಲಿ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆ ಘೋಷಣೆಯಾಗಿಲ್ಲ. ಯುಪಿಎ ಸರ್ಕಾರ ರೈಲ್ವೆ ಬಜೆಟ್ನಲ್ಲಿ ಘೋಷಿಸಿದ್ದ ಯೋಜನೆಗಳಿಗೂ ಚಾಲನೆ ನೀಡಲಿಲ್ಲ. ಈಗ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಗೆದ್ದಿದ್ದು, ಜು.5ರಂದು ಮಂಡಿಸಲಾಗುವ ಕೇಂದ್ರದ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ಘೋಷಣೆಯಾಗಿದ್ದ ರೈಲ್ವೆ ಯೋಜನೆಗಳಿಗೆ ಚಾಲನೆ, ಹೊಸ ಯೋಜನೆ ಜೊತೆಗೆ, ಸದಾ ನೀರಿನ ಸಮಸ್ಯೆಯಿಂದ ನರಳುತ್ತಿರುವ ಜಿಲ್ಲೆಗೆ ನದಿ ಜೋಡಣೆಯಿಂದ ಶಾಶ್ವತ ಪರಿಹಾರ ಒದಗಿಸಬೇಕೆಂಬ ದೊಡ್ಡ ಧ್ವನಿಯ ಆಗ್ರಹ ಜನರಿಂದ ಕೇಳಿ ಬರುತ್ತಿದೆ.

ನದಿಗಳ ಜೋಡಣೆ: ಚಂದ್ರಶೇಖರ್‌ ಪ್ರಧಾನಿಯಾದಾಗಿನಿಂದಲೂ ದೇಶದಲ್ಲಿ ನದಿಗಳ ಜೋಡಣೆ ಕುರಿತು ಪ್ರಸ್ತಾಪವಾಗುತ್ತಿದೆ. ಜಿಲ್ಲೆಯ ಶಾಶ್ವತ ಬರಕ್ಕೆ ನದಿಗಳ ಜೋಡಣೆಯಿಂದ ಮಾತ್ರವೇ ಪರಿಹಾರ ಎಂದು ನಂಬಿರುವ ನೂರಾರು ಮಂದಿ ಜಿಲ್ಲೆಯಲ್ಲಿದ್ದಾರೆ. ಅವರೆಲ್ಲರ ಒತ್ತಾಸೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಹಂತ ಹಂತವಾಗಿ ದೇಶದಲ್ಲಿ ಉತ್ತರ ಭಾಗದಿಂದ ದಕ್ಷಿಣ ಭಾಗದ ನದಿಗಳ ಜೋಡಣೆ ಮಾಡಲು ಮುಂದಾಗುತ್ತಾರೆ ಎನ್ನುವುದಾಗಿದೆ.

ನದಿಗಳ ಜೋಡಣೆಯಾದಲ್ಲಿ ಮಾತ್ರವೇ ಬೃಹತ್‌ ದೇಶದ ನೀರಾವರಿ ಸಮಸ್ಯೆಗಳು ಸಮತೋಲನಗೊಳ್ಳುತ್ತದೆ. ಒಂದೆಡೆ ಪ್ರವಾಹ ಮತ್ತೂಂದೆಡೆ ಹನಿ ನೀರಿಗೂ ಹಾಹಾಕಾರ ಪಡುವ ಪ್ರದೇಶಗಳಿರುವ ದೇಶದಲ್ಲಿ ನದಿಗಳ ಜೋಡಣೆ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬಲ್ಲದು.

ಅದರಲ್ಲೂ ದಶಕಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಅಂತರ್ಜಲ ಪಾತಾಳಕ್ಕೆ ಇಳಿದಿರುವ ಕೋಲಾರದಂತ ಜಿಲ್ಲೆಗಳ ಬರ ನಿವಾರಣೆ ನದಿಗಳ ಜೋಡಣೆಯಿಂದ ಮಾತ್ರ ಸಾಧ್ಯವೆನ್ನಲಾಗುತ್ತಿದೆ. ಆದ್ದರಿಂದಲೇ ಈ ಬಾರಿ ಜಿಲ್ಲೆಯ ಜನತೆ ಪ್ರಧಾನಿ ನರೇಂದ್ರ ಮೋದಿಯಿಂದ ನದಿಗಳ ಜೋಡಣೆ ಕಾರ್ಯವಾಗಲಿ ಎಂದು ದೊಡ್ಡ ಮಟ್ಟದಲ್ಲಿ ನಿರೀಕ್ಷಿಸುತ್ತಿದ್ದಾರೆ.

ರೈಲ್ವೆ ಬೇಡಿಕೆಗಳು: ಯುಪಿಎ ಎರಡನೇ ಅವಧಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಕೆ.ಎಚ್.ಮುನಿಯಪ್ಪ, ಜಿಲ್ಲೆಯ ಬಹುತೇಕ ರೈಲ್ವೆ ಬೇಡಿಕೆಗಳು ಬಜೆಟ್‌ನಲ್ಲಿ ಪ್ರಕಟಗೊಳ್ಳುವಂತೆ ಮಾಡಿಬಿಟ್ಟಿದ್ದಾರೆ. ಆದರೆ, ಈ ಯೋಜನೆಗಳು ಎನ್‌ಡಿಎ ಸರ್ಕಾರದಲ್ಲಿ ಕಡತಗಳಲ್ಲಿಯೇ ಉಳಿದು ಬಿಟ್ಟಿದೆ.

ಹಳೇ ಯೋಜನೆಗೆ ಚಾಲನೆ ನೀಡಲಿ: ಹೊಸದಾಗಿ ಬಜೆಟ್‌ನಲ್ಲಿ ಏನನ್ನು ಘೋಷಿಸುವ ಅಗತ್ಯವಿಲ್ಲದಿದ್ದರೂ, ಯುಪಿಎ ಸರ್ಕಾರ ಘೋಷಿಸಿರುವ ರೈಲ್ವೆ ಕೋಚ್ ಫ್ಯಾಕ್ಟರಿ, ಮುಳಬಾಗಿಲು ಪಟ್ಟಣದ ಮೇಲೆ ಕೋಲಾರ ಮಾರ್ಗವಾಗಿ ವೈಟ್ಫೀಲ್ಡ್ಗೆ ಸಂಪರ್ಕ ಹೊಸ ರೈಲ್ವೆ ಮಾರ್ಗ ಅಳವಡಿಕೆ, ನೆರೆ ರಾಜ್ಯದ ರೈಲ್ವೆ ನಿಲ್ದಾಣಗಳಿಗೆ ಜಿಲ್ಲೆಯ ರೈಲ್ವೆ ನಿಲ್ದಾಣಗಳನ್ನು ಸಂಪರ್ಕಿಸುವ ಯೋಜನೆಗಳಿಗೆ ಚಾಲನೆ ನೀಡಲಿ ಎಂದು ಜಿಲ್ಲೆಯ ಜನತೆ ಬಯಸುತ್ತಿದ್ದಾರೆ.

ಚಿನ್ನದ ಗಣಿ ಪುನರಾರಂಭವಾಗಲಿ: 19 ವರ್ಷಗಳ ಹಿಂದೆ ಬಿಜಿಎಂಎಲ್ ಹೆಸರಿನ ಚಿನ್ನದ ಗಣಿ ಮುಚ್ಚಲ್ಪಟ್ಟಿದ್ದರಿಂದ ಕೆಜಿಎಫ್ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಪ್ರತಿ ನಿತ್ಯವೂ ಹತ್ತು ಸಾವಿರಕ್ಕಿಂತಲೂ ಹೆಚ್ಚು ಮಂದಿ ರೈಲಿನಲ್ಲಿ ಬೆಂಗಳೂರಿಗೆ ಕೆಲಸಕ್ಕಾಗಿ ಹೋಗಿ ಬರುತ್ತಿದ್ದಾರೆ.ಆದ್ದರಿಂದ ಚಿನ್ನದ ಗಣಿಗಳನ್ನು ಅತ್ಯಾಧುನಿಕ ವಿಧಾನಗಳಿಂದ ಪುನಾರಂಭಗೊಳಿಸಬೇಕು, ಗಣಿ ಕಾರ್ಮಿಕರಿಗೆ ಉದ್ಯೋಗವಕಾಶ ಕಲ್ಪಿಸಬೇಕು, ರಾಜ್ಯ ಸರ್ಕಾರವು ಕೆಜಿಎಫ್ ಭಾಗದಲ್ಲಿ ಹೊಸ ಕೈಗಾರಿಕಾ ವಲಯಗಳನ್ನು ಪ್ರಾರಂಭಿಸಿ ನೂತನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕೆಲಸ ಕೊಡಬೇಕೆಂದು ಜನತೆ ಬಯಸುತ್ತಿದ್ದಾರೆ.

ಬೆಮೆಲ್ ಸಾರ್ವಜನಿಕ ಉದ್ದಿಮೆ ಆಗಿ ಉಳಿಯಲಿ: ಕೋಲಾರ ಜಿಲ್ಲೆಯಲ್ಲಿ ಬಿಜಿಎಂಎಲ್ ನಂತರ ದೊಡ್ಡ ಸಾರ್ವಜನಿಕ ಉದ್ದಿಮೆ ಬೆಮೆಲ್ ಕಾರ್ಖಾನೆ. ಇದನ್ನು ಖಾಸಗಿಯವರಿಗೆ ಮಾರಾಟ ಮಾಡುವ ಹುನ್ನಾರ ಹಿಂದಿನ ಎನ್‌ಡಿಎ ಸರ್ಕಾರದಲ್ಲಿ ನಡೆದಿತ್ತು. ಇದಕ್ಕೆ ಕಾರ್ಮಿಕ ವಲಯದಿಂದ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿತ್ತು. ಆದ್ದರಿಂದ ಬೆಮೆಲ್ಅನ್ನು ಸಾರ್ವಜನಿಕ ಉದ್ದಿಮೆಯಾಗಿಯೇ ಉಳಿಸಿಕೊಳ್ಳಬೇಕು, ರಕ್ಷಣಾ ಇಲಾಖೆ ಬಳಸುವ ವಾಹನ ಮತ್ತು ಯುದ್ಧದೋಪಕರಣ ಸಾಗಿಸುವ ವಾಹನಗಳ ತಯಾರಿಕಾ ಆರ್ಡರ್‌ಗಳನ್ನು ಬೆಮೆಲ್ ಕಾರ್ಖಾನೆಗೆ ನೀಡಬೇಕಿದೆ.

ಕ್ರೀಡೆಗೂ ಅಗತ್ಯ ಯೋಜನೆ: ಜಿಲ್ಲಾ ಕೇಂದ್ರ ಸೇರಿದಂತೆ ಪ್ರತಿ ತಾಲೂಕು ಮಟ್ಟದಲ್ಲಿಯೂ ಅತ್ಯಾಧುನಿಕ ಕ್ರೀಡಾಂಗಣಗಳ ನಿರ್ಮಾಣವಾಗಬೇಕು. ಕೇಂದ್ರ ಪ್ರಾಯೋಜಿತ ಕ್ರೀಡಾಕೂಟಗಳು ಜಿಲ್ಲೆಯಲ್ಲಿ ನಡೆಸಲು ಸೂಕ್ತ ವೇದಿಕೆ ಸೃಷ್ಟಿಸಬೇಕು. ಈ ಮೂಲಕ ಕೋಲಾರ ಜಿಲ್ಲೆಯಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಕಿಗೆ ತರುವಂತೆ ಮಾಡಲು ಅಗತ್ಯ ಯೋಜನೆಗಳನ್ನು ಘೋಷಿಸಬೇಕು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.